ಕಣ್ಣಿಗೆ ಬಟ್ಟೆಕಟ್ಟಿ ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ
Team Udayavani, Oct 18, 2021, 10:52 AM IST
ಉಪ್ಪಿನಂಗಡಿ: ಉಪ್ಪಿನಂಗಡಿಯ ನೇತ್ರಾವತಿ ನದಿಗೆ ಮುಂಜಾನೆ ಸೇತುವೆಯಿಂದ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಇಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯಿಂದ ಉಪ್ಪಿನಂಗಡಿಗೆ ಕೆಎಸ್ಆರ್ಟಿಸಿ ಬಸ್ಸ್ನಲ್ಲಿ ಬಂದು ಇಳಿದ ವ್ಯಕ್ತಿಯೋರ್ವ ನೇತ್ರಾವತಿ ನದಿಯ ಸೇತುವೆಯ ಮೇಲಿಂದ ಕಣ್ಣಿಗೆ ಬಟ್ಟೆ ಕಟ್ಟಿ ನದಿಗೆ ಹಾರಿರುವುದು ಬೆಳಕಿಗೆ ಬಂದಿದೆ.
ಸ್ಥಳೀಯ ನಿವಾಸಿಗಳಾದ ಸಯಾದ್, ಹಮ್ಜ, ರಶೀದ್ ಹಾಗು ಎಂಬವರು ತಕ್ಷಣವೇ ನದಿಗೆ ಹಾರಿ ಸುಮಾರು 100ಮೀ ದೂರದಲ್ಲಿ ಆತನನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಸರಕಾರಿ ಆಸ್ಪತ್ರೆಗೆ ಆತನನ್ನು ತರುವಷ್ಟರಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಇದನ್ನೂ ಓದಿ;- ನಾಳೆ ಈದ್ ಮಿಲಾದ್: ಮೆರವಣಿಗೆಗಿಲ್ಲ ಅನುಮತಿ
ಈತನ ಬಲಗಾಲಿನಲ್ಲಿ ಬ್ಯಾಂಡೇಜ್ ಇದ್ದು ಗೇರುಕಟ್ಟೆಯ ಪರಪ್ಪು ನಿವಾಸಿಯಾದ ಮುತ್ತಪ್ಪ ಶೆಟ್ಟಿ ಎಂದು ತಿಳಿದುಬಂದಿದೆ. ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹ ಇರಿಸಲಾಗಿದ್ದು, ಉಪ್ಪಿನಂಗಡಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.