ಕಾನೂನು ಸಾಕ್ಷರತೆ ಅವಶ್ಯ: ನ್ಯಾ| ಚಂದ್ರಕಾಂತ
Team Udayavani, Oct 18, 2021, 12:12 PM IST
ಮಾದನಹಿಪ್ಪರಗಿ: ಪ್ರತಿಯೊಬ್ಬ ನಾಗರಿಕರಿಗೂ ಕಾನೂನು ಸಾಕ್ಷರತೆ ಅವಶ್ಯಕವಾಗಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಚಂದ್ರಕಾಂತ ಹೇಳಿದರು.
ಆಳಂದ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘದ ಆಶ್ರಯದಲ್ಲಿ ಭಾರತ ಅಮೃತ ಮಹೋತ್ಸವ, ರಾಷ್ಟ್ರೀಯ ಕಾನೂನು ಪ್ರಾಧಿಕಾರದ 25ನೇ ವರ್ಷದ ಆಚರಣೆ ಸಂಭ್ರಮ, ಕಾನೂನು ಸೇವೆಗಳ ಸಪ್ತಾಹದ ಅಂಗವಾಗಿ ಶಿವಲಿಂಗೇಶ್ವ ಕಲ್ಯಾಣಮಂಟಪದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಣ್ಣಪುಟ್ಟ ಪ್ರಕರಣಗಳನ್ನು ಸ್ಥಳೀಯವಾಗಿ ಬಗೆಹರಿಸಿಕೊಂಡರೆ ನೆಮ್ಮದಿಯಾಗಿ ಇರಬಹುದು. ಈ ಹಿನ್ನೆಲೆಯಲ್ಲಿ ಉಚಿತವಾಗಿ ಕಾನೂನಿನ ಸಲಹೆ ನೀಡಲಾಗುವುದು ಎಂದರು.
ಶಿವಲಿಂಗೇಶ್ವರ ಮಠದ ಪೀಠಾಧಿಪತಿ ಅಭಿನವ ಶಿವಲಿಂಗ ಸ್ವಾಮೀಜಿ ಉದ್ಘಾಟಿಸಿದರು. ವಕೀಲರಾದ ಜ್ಯೋತಿ ಹಂಚಾಟೆ, ಎಂ.ವಿ.ಏಕಬೋಟೆ, ಶಾಂತಾಬಾಯಿ ಎಸ್. ಚೆನ್ನಗುಂಡ, ನಾಗೇಶ ರೆಡ್ಡಿ ವಿವಿಧ ವಿಷಯಗಳ ಕುರಿತು ಉಪನ್ಯಾಸ ನೀಡಿದರು. ಸ್ಥಳೀಯ ಪೊಲೀಸ್ ಠಾಣೆ ಪಿಎಸ್ಐ ಮಲ್ಲಣ್ಣ ಯಲಗೋಡ ತುರ್ತು ಕರೆ ಸಂಖ್ಯೆ 112ರ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ವಕೀಲರಾದ ಶುಭಾಶ್ರೀ ಬಡಿಗೇರ, ಜ್ಯೋತಿ ವಿ.ಬಂದಿ, ಕಮಲಾಕರ ರಾಠೊಡ, ಗ್ರಾ.ಪಂ ಉಪಾಧ್ಯಕ್ಷ ಚೆನ್ನಪ್ಪ ಹಾಲೇನವರ್, ಮಲ್ಲಿನಾಥ ದುಧಗಿ ಇದ್ದರು. ವಕೀಲರಾದ ಡಿ.ಎಸ್. ನಾಡ್ಕರ್, ಎಸ್ ಆರ್.ಚೆನ್ನಗುಂಡ, ಎಂಎಸ್.ಹತ್ತಿ, ಮುಖಂಡರಾದ ಮಹಾದೇವಯ್ಯ ಸ್ವಾಮಿ, ಧರ್ಮಣ್ಣ ಕೌಲಗಿ, ಶರಣಬಸಪ್ಪ ಜಿಡ್ಡಿಮನಿ, ಶಾಂತಮಲ್ಲ ಬುರುಡ, ಹರಿದಾಸ್ ಹಜಾರೆ, ಗಣೇಶ ಓನಮಶೆಟ್ಟಿ, ಶಿವಲಿಂಗಪ್ಪ ಜಮಾದಾರ, ರೇವಪ್ಪ ದುಗಿ, ಶ್ರೀಮಂತ ಪರೇಣಿ, ಕಲ್ಲಪ್ಪ ದಢೂತಿ ಭಾಗವಹಿಸಿದ್ದರು. ಮಹಿಬೂಬ್ ಫಣಿಬಂದ್ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು
Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ
Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ
Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ
MUST WATCH
ಹೊಸ ಸೇರ್ಪಡೆ
Shirva: ಸ್ನಾನಕ್ಕೆಂದು ಹೋದವನಿಗೆ ಸಿಡಿಲಾಘಾತ; ಕಾಲೇಜು ವಿದ್ಯಾರ್ಥಿ ಬಲಿ
ಟೀಂ ಇಂಡಿಯಾದಲ್ಲಿ ‘ರಾಜಕೀಯ ಸಾವಿರ ಪಟ್ಟು ಹೆಚ್ಚು’; ಲ್ಯಾಂಗರ್ ಬಳಿ ರಾಹುಲ್ ಹೇಳಿದ್ದೇನು?
Dog Stolen: ನ್ಯಾಯಾಧೀಶರ ಮನೆಯಲ್ಲಿದ್ದ ಸಾಕು ನಾಯಿ ಕಳ್ಳತನ… 12 ಜನರ ವಿರುದ್ಧ ಪ್ರಕರಣ
Kannada Cinema; ಇಂದು ತೆರೆಗೆ ಬರುತ್ತಿದೆ ರವಿಚಂದ್ರನ್ ಅವರ ‘ದಿ ಜಡ್ಜ್ ಮೆಂಟ್’
Kalasa: ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ… ಅಪಾಯದಿಂದ ಪಾರಾದ ಮನೆಮಂದಿ