ಶಾಸಕ ಪಾಟೀಲ್‌ ಹೇಳಿಕೆಗೆ ರಾಜಕೀಯ ಧ್ವನಿ


Team Udayavani, Oct 18, 2021, 1:06 PM IST

13

ರಾಯಚೂರು: ರಾಯಚೂರು ಜಿಲ್ಲೆಯನ್ನು ತೆಲಂಗಾಣಕ್ಕೆ ಸೇರಿಸುವಂತೆ ಬಿಜೆಪಿ ಶಾಸಕ ಡಾ| ಶಿವರಾಜ್‌ ಪಾಟೀಲ್‌ ನೀಡಿದ ಹೇಳಿಕೆ ದಿನೇದಿನೆ ವಿವಿಧ ಆಯಾಮ ಪಡೆಯುತ್ತಿದ್ದು, ಉಪಚುನಾವಣೆ ಕಣದಲ್ಲಿ ಕಾಂಗ್ರೆಸ್‌ಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ.

ಉಪಚುನಾವಣೆ ಪ್ರಚಾರದಲ್ಲಿ ತೊಡಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ಧಾಳಿ ನಡೆಸಿದ್ದು, ಬಿಜೆಪಿಗೆ ಅಖಂಡ ಕರ್ನಾಟಕ ವಿರೋಧಿ ಪಟ್ಟ ಕಟ್ಟುವ ಮೂಲಕ ಪ್ರಕರಣವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಅಲ್ಲದೇ, ಶಾಸಕ ಶಿವರಾಜ್‌ ಪಾಟೀಲ್‌ ಅವರನ್ನು ವಜಾ ಮಾಡುವಂತೆ ಆಗ್ರಹಿಸಿದ್ದಾರೆ.

ಬಿಜೆಪಿಗೆ ಅಖಂಡ ಕರ್ನಾಟಕ ವಿರೋಧಿ ಪಟ್ಟ ಕಟ್ಟಿರುವ ಅವರು, “ಉಮೇಶ ಕತ್ತಿ ಪ್ರತ್ಯೇಕ ರಾಜ್ಯ ಕೇಳಿದರೆ, ಶಾಸಕ ಶಿವರಾಜ್‌ ಪಾಟೀಲ್‌ ರಾಯಚೂರನ್ನು ತೆಲಂಗಾಣಕ್ಕೆ ಸೇರಿಸಿ’ ಎನ್ನುತ್ತಿದ್ದಾರೆ. ಇದು ಬಿಜೆಪಿಯ ಮೂಲ ಸಂಸ್ಕೃತಿ ಎಂದು ಕುಟುಕಿದ್ದಾರೆ.

ಇದಕ್ಕೆ ಶಾಸಕ ಶಿವರಾಜ್‌ ಪಾಟೀಲ್‌ ಕೂಡ ಪ್ರತ್ಯುತ್ತರ ನೀಡಿದ್ದು, “ಡಿಕೆಶಿ ಇರುವವರೆಗೆ ಕಾಂಗ್ರೆಸ್‌ ಉದ್ಧಾರವಾಗುವುದಿಲ್ಲ. ಮೊದಲು ಅವರನ್ನು ಉಚ್ಛಾಟಿಸಲಿ’ ಎನ್ನುವ ಮೂಲಕ ವಾಕ್ಸಮರಕ್ಕೆ ನಾಂದಿ ಹಾಡಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಆವೇಗದಲ್ಲಿ ನೀಡಿದ ಹೇಳಿಕೆ ಪ್ರತಿಪಕ್ಷಗಳಿಗೆ ಅಸ್ತ್ರ ಸಿಕ್ಕಂತಾಗಿದೆ.

ಈಗಾಗಲೇ ಸಾರ್ವಜನಿಕ ವಲಯದಲ್ಲಿ, ವಿವಿಧ ಸಂಘಟನೆಗಳು ಶಾಸಕರ ವಿರುದ್ಧ ಆಕ್ರೋಶ ಹೊರಹಾಕಿದ್ದರೆ. ಈಗ ಕಾಂಗ್ರೆಸ್‌ ಕೂಡ ಈ ಅವಕಾಶ ಬಳಸಿಕೊಳ್ಳುವಲ್ಲಿ ಹಿಂದೆ ಬೀಳುತ್ತಿಲ್ಲ. ಶಾಸಕ ಶಿವರಾಜ್‌ ಪಾಟೀಲ್‌ ಈಗಾಗಲೇ ಈ ಬಗ್ಗೆ ಸಾಕಷ್ಟು ಕಡೆ ಸ್ಪಷ್ಟನೆ ನೀಡಿದ್ದು, ನಾನು ನಮ್ಮ ಜಿಲ್ಲೆಯ ಪರಿಸ್ಥಿತಿಯನ್ನು ವಿವರಿಸುವಾಗ ಆ ರೀತಿ ಹೇಳಿದ್ದೇನೆ. ಅದು ನೋವಿನ, ವೇದನೆ, ಆಕ್ರೋಶದ ಹೇಳಿಕೆಯೇ ವಿನಃ, ರಾಯಚೂರನ್ನು ಬಿಟ್ಟು ಕೊಡುವುದಾಗಿರಲಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಕಳೆದ ಬಾರಿ ಎಂ.ಸಿ.ಮನಗೂಳಿ ಗೆದ್ದಿದ್ದು ಕೊನೆಯ ಚುನಾವಣೆಯೆಂಬ ಅನುಕಂಪದಿಂದ: ಹಾಲಪ್ಪ ಆಚಾರ್

ತೆಲಂಗಾಣ ಸಚಿವ ಕೆಟಿಆರ್‌ ಟ್ವೀಟ್‌

ಶಾಸಕ ಪಾಟೀಲ್‌ ಹೇಳಿಕೆ ನೀಡಿದ ಮೂಲ ಸ್ವರೂಪವೇ ಬದಲಾಗುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ತೆಲಂಗಾಣ ಸಿಎಂ ಕೆ.ಸಿ.ಚಂದ್ರಶೇಖರರಾವ್ ಮಗ ಹಾಗೂ ಅಲ್ಲಿನ ಸಚಿವ ಕಲ್ವಕುಂಟ್ಲ ತಾರಕ ರಾಮರಾವ್‌ ಈ ಬಗ್ಗೆ ಟ್ವಿಟ್‌ ಮಾಡಿ “ತೆಲಂಗಾಣಕ್ಕೆ ಸೇರಲು ನೆರೆ ಹೊರೆಯ ಭಾಗದ ಜಿಲ್ಲೆಗಳು ಉತ್ಸುಕವಾಗಿವೆ. ಇದು ತೆಲಂಗಾಣ ಅಭಿವೃದ್ಧಿಯ ಧ್ಯೋತಕ ಎಂದು ಶಿವರಾಜ್‌ ಪಾಟೀಲ್‌ ಮಾತನಾಡಿದ ವಿಡಿಯೋವನ್ನು ಹಂಚಿಕೊಂಡಿದ್ದರು. ಇದೇ ಮೊದಲಲ್ಲ ಈ ಹಿಂದೆ ಕೂಡ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಆಡಳಿತದ ಬಗ್ಗೆ ಜನ ಬೇಸರಗೊಂಡಿದ್ದಾರೆ ಎಂದು ತಮ್ಮ ರಾಜ್ಯದಲ್ಲಿ ಪ್ರಚಾರದ ವೇಳೆ ಹೇಳಿಕೊಂಡು ಓಡಾಡಿದ್ದರು. ಈಗ ಅವರ ಪಕ್ಷದ ಗಡಿಭಾಗದ ಶಾಸಕರು ಕೂಡ ಇದೇ ವಿಚಾರವನ್ನೇ ರಾಜಕೀಯ ಅನುಕೂಲಕ್ಕೆ ಬಳಸಿಕೊಳ್ಳುತ್ತಿದ್ದು, ಹೋದಲೆಲ್ಲ ತಮ್ಮ ಸರ್ಕಾರದ ಸಾಧನೆ ಎನ್ನುವಂತೆ ಹೇಳಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.

ಅಖಂಡ ಕರ್ನಾಟಕದ ಬಗ್ಗೆ ನಮಗೆ ನಂಬಿಕೆ ಇದೆ. ಉಮೇಶ ಕತ್ತಿಯವರು ಪ್ರತ್ಯೇಕ ರಚನೆ ಬಗ್ಗೆ ಹೇಳಿಕೆ ನೀಡುತ್ತಾರೆ. ಅಖಂಡ ಕರ್ನಾಟಕಕ್ಕೆ ಧಕ್ಕೆ ತರುವ ಹೇಳಿಕೆ ನೀಡಿರುವ ಶಾಸಕರನ್ನು ಬಿಜೆಪಿ ಮೊದಲು ಉಚ್ಛಾಟಿಸಲಿ. ಇದು ಬಿಜೆಪಿ ಮೂಲಭೂತ ಸಂಸ್ಕೃತಿ. ಬಿಜೆಪಿ ಶಾಸಕರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಶಾಸಕರ ವಿಭಜನೆ ಹೇಳಿಕೆಗೆ ಬಿಜೆಪಿ ಸಮ್ಮತಿ ಇದೆ ಎಂದು ಒಪ್ಪಬೇಕಾಗುತ್ತದೆ. -ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌

ಇರುವವರೆಗೂ ಕಾಂಗ್ರೆಸ್‌ ಉದ್ಧಾರವಾಗಲ್ಲ. ಮೊದಲು ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕು. ನಮ್ಮ ಪಕ್ಷದ ಆಂತರಿಕ ವಿಚಾರ ಅವರಿಗೆ ಅನಗತ್ಯ. ಕಾಂಗ್ರೆಸ್‌ನ ಸ್ಥಳೀಯ ನಾಯಕರು ಹೇಳಿದ ಮಾತು ಕೇಳಿಕೊಂಡು ಈ ರೀತಿ ಹೇಳಿಕೆ ನೀಡುವುದು ಅವರಿಗೆ ಶೋಭೆ ತರುವುದಿಲ್ಲ. ಮೊದಲು ನಾನು ಏನು ಮಾತನಾಡಿದ್ದೇನೆ ಎಂಬ ಸಂಪೂರ್ಣ ವಿಡಿಯೋವನ್ನು ನೋಡಿ ಆಮೇಲೆ ಮಾತನಾಡಲಿ. -ಡಾ| ಶಿವರಾಜ್‌ ಪಾಟೀಲ್‌, ರಾಯಚೂರು ಶಾಸಕ

-ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.