ಡಾ.ರಾಜ್‌ ತವರಲಿ ರಂಗಮಂದಿರಕ್ಕೆ ಗ್ರಹಣ

11 ವರ್ಷವಾದರೂ ಪೂರ್ಣಗೊಳ್ಳದ ಜಿಲ್ಲಾ ರಂಗಮಂದಿರ ಕಾಮಗಾರಿ „ ಪ್ರದರ್ಶನಕ್ಕಾಗಿ ಕಲಾ ತಂಡಗಳ ಪರದಾಟ

Team Udayavani, Oct 18, 2021, 5:06 PM IST

ಡಾ.ರಾಜ್‌ ತವರಲಿ ರಂಗಮಂದಿರಕ್ಕೆ ಗ್ರಹಣ

ಚಾಮರಾಜನಗರ: ರಂಗಭೂಮಿಯಿಂದ ಬಂದು ಸಿನಿಮಾ ರಂಗದಲ್ಲಿ ಅನಭಿಷಕ್ತ ದೊರೆಯಾಗಿ ಮೆರೆದ ವರನಟ ಡಾ.ರಾಜ್‌ಕುಮಾರ್‌ ತವರು ಜಿಲ್ಲೆ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ 2010ರಲ್ಲಿ ಆರಂಭಗೊಂಡ ಜಿಲ್ಲಾ ರಂಗಮಂದಿರ ಕಾಮಗಾರಿ 11 ವರ್ಷವಾದರೂ ಪೂರ್ಣಗೊಂಡಿಲ್ಲ.! ಅಂತಿಮ ಹಂತದ ಕಾಮಗಾರಿ ನಡೆಯಬೇಕಿದ್ದು, ಕಾಮಗಾರಿ ಸ್ಥಗಿತ ಗೊಂಡಿರುವ ಕಾರಣ ಕಟ್ಟಡ ಪಾಳು ಬಿದ್ದಿದೆ. ಇನ್ನೊಂದೆಡೆ ರಂಗಮಂದಿರ ಇಲ್ಲದ ಕಾರಣ ಸ್ಥಳೀಯ ಕಲಾತಂಡಗಳು ಪ್ರದರ್ಶನಕ್ಕಾಗಿ ಪಡಿಪಾಟಲು ಪಡಬೇಕಿದೆ.

 ಅನುಮೋದನೆ: ರಾಜ್ಯ ಸರ್ಕಾರ 2009-10ನೇ ಸಾಲಿನಲ್ಲಿ ರಂಗಮಂದಿರ ನಿರ್ಮಾಣಕ್ಕೆ ಅನುಮೋದನೆ ನೀಡಿತ್ತು. ಜಿಲ್ಲಾಡಳಿತ ಭವನದ ಆವರಣದಲ್ಲೇ ಇರುವ 20 ಗುಂಟೆ ಜಾಗದಲ್ಲಿ 3.5 ಕೋಟಿ ರೂ. ವೆಚ್ಚದಲ್ಲಿ ಮೊದಲ ಹಂತದ ಕಾಮಗಾರಿ ನಡೆದಿತ್ತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಸ್ತುವಾರಿಯಲ್ಲಿ ಲೋಕೋಪಯೋಗಿ ಇಲಾಖೆ ಈ ಕಟ್ಟಡ ನಿರ್ಮಿಸಿದೆ.

ಮೊದಲ ಹಂತದ ಕಾಮಗಾರಿಯಲ್ಲಿ ಸುಂದರವಾದ ಕಟ್ಟಡ ಮೇಲೆದ್ದಿತು. ಅದಕ್ಕೆ ಬಿಳಿ ಬಣ್ಣವನ್ನೂ ಬಳಿಯಲಾಗಿದೆ. ಆಗ ಕಟ್ಟಡ ನಿರ್ಮಾಣಗೊಂಡ ಬಳಿಕ, ಒಳಾಂಗಣದಲ್ಲಿ ಸ್ಥಳಾವಕಾಶ ಕಡಿಮೆಯಿದೆ. ರಂಗಮಂದಿರ ಸೂಕ್ತ ರೀತಿಯಲ್ಲಿ ನಿರ್ಮಾಣವಾಗಿಲ್ಲ ಎಂದು ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ಎಚ್‌. ಎಸ್‌.ಮಹದೇವಪ್ರಸಾದ್‌ ಅಸಮಾಧಾನ ವ್ಯಕ್ತಪಡಿಸಿ, ಮಾರ್ಪಾಡಿತ ಕಾಮಗಾರಿ ನಡೆಸಲು ಸೂಚಿಸಿದ್ದರು.

ಮತ್ತೆ, ಜಿಲ್ಲಾಧಿಕಾರಿ ಯೋಜನಾ ವರದಿ ತಯಾರಿಸಿ ಕಳುಹಿಸಿದ ಮೇಲೆ, ಜಿಲ್ಲಾ ರಂಗಮಂದಿರದ ಅಕಾಸ್ಟಿಕ್‌, ಫಾಲ್‌ ಸೀಲಿಂಗ್‌, ಸೌಂಡ್‌ ಸಿಸ್ಟಂ ಮತ್ತು ಆಸನದ ವ್ಯವಸ್ಥೆ ಮತ್ತಿತರ ಕಾಮಗಾರಿ ನಡೆಸಲು ಸರ್ಕಾರ 2017ರಲ್ಲಿ 2.30 ಕೋಟಿ ರೂ. ಬಿಡುಗಡೆ ಮಾಡಿತ್ತು. ಆದರೆ, ಆಡಳಿತಾತ್ಮಕ ಅನುಮೋದನೆ ದೊರೆತಿರಲಿಲ್ಲ. ಹಲವು ಅಡಚಣೆ, ವಿಳಂಬದಿಂದಾಗಿ 2020ರ ಡಿಸೆಂಬರ್‌ನಲ್ಲಿ ಆಡಳಿತಾತ್ಮಕ ಅನುಮೋದನೆ ದೊರಕಿತು.

ಈ ಕಾಮಗಾರಿಗಳ ಏಜೆನ್ಸಿಯನ್ನು ಲೋಕೋಪಯೋಗಿ ಇಲಾಖೆಗೆ ನೀಡಲಾಗಿದೆ. ಲೋಕೋಪಯೋಗಿ ಇಲಾಖೆ ಟೆಂಡರ್‌ ಕರೆದು ಕೆಲಸ ಆರಂಭಿಸಬೇಕಿದೆ. ಈಗ ನಿರ್ಮಾಣವಾಗಿರುವ ರಂಗಮಂದಿರದ ಅಂತಿಮ ಹಂತದ ಕಾಮಗಾರಿ ಪೂರ್ಣಗೊಂಡು, ಉದ್ಘಾಟನೆಯಾದರೆ, ಜಿಲ್ಲೆಯ ರಂಗಭೂಮಿ ಕಲಾವಿದರಿಗೆ ತಮ್ಮ ನಾಟಕ ಪ್ರದರ್ಶಿಸಲು ಉತ್ತಮ ರಂಗಮಂದಿರ ದೊರೆತಂತಾಗುತ್ತದೆ. ತನ್ಮೂಲಕ ರಂಗ ಕಲೆಗೂ ಪ್ರೋತ್ಸಾಹ ಸಿಗುತ್ತದೆ.

ಇದನ್ನೂ ಓದಿ;- ನಾಲ್ಕು ಎಸೆತದಲ್ಲಿ ನಾಲ್ಕು ವಿಕೆಟ್: ಹೊಸ ದಾಖಲೆ ಬರೆದ ಐರ್ಲೆಂಡ್ ಬೌಲರ್

ಪೈಪೋಟಿ!: ವಿಪರ್ಯಾಸವೆಂದರೆ, ವರನಟ ಡಾ. ರಾಜ್‌ಕುಮಾರ್‌ ಅವರು ಜನಿಸಿದ ಜಿಲ್ಲೆಯ, ಜಿಲ್ಲಾ ಕೇಂದ್ರದಲ್ಲಿ ಅವರ ಹೆಸರಿನ ರಸ್ತೆಯಾಗಲೀ, ಸ್ಮಾರಕವಾಗಲೀ ಇಲ್ಲ. ಈ ರಂಗಮಂದಿರಕ್ಕೆ ಡಾ.ರಾಜ್‌ಕುಮಾರ್‌ ಅವರ ಹೆಸರಿಟ್ಟರೆ, ಅದು ಅರ್ಥಪೂರ್ಣವೂ, ಆ ಮಹಾನ್‌ ಕಲಾವಿದನಿಗೆ ಹುಟ್ಟೂರಿನಲ್ಲಿ ದೊರೆತ ಗೌರವವೂ ಆಗುತ್ತದೆ. ವಿಷಾದದ ಸಂಗತಿಯೆಂದರೆ, ಯಾವುದೇ ಸಂಘಟನೆ ರಂಗಮಂದಿರಕ್ಕೆ ಡಾ.ರಾಜ್‌ ಕುಮಾರ್‌ ಹೆಸರಿಡಬೇಕು ಎಂದು ಒತ್ತಾಯಿಸುತ್ತಿಲ್ಲ.!

ಉದ್ಘಾಟನೆಗೊಳ್ಳುವ ಮುನ್ನವೇ ಪಾಳು ಬಿದ್ದ ಕಟ್ಟಡ

2017ರಿಂದ ಕಾಮಗಾರಿ ನಿಂತ ಕಾರಣ, ಈಗ ರಂಗಮಂದಿರ ಪಾಳು ಬಿದ್ದಿದೆ. ಒಳಗೆಲ್ಲ ದೂಳಿನ ರಾಶಿ ತುಂಬಿದೆ. ಜೇಡರ ಬಲೆಗಳು ಆವರಿಸಿವೆ. ತುಂಬಾ ಪ್ರಾಚೀನ ಕಟ್ಟಡ ಪಾಳು ಬಿದ್ದಾಗ, ಗೋಡೆ, ಕಂಬದ ಮೇಲೆ ಹಕ್ಕಿಯ ಹಿಕ್ಕೆಗಳನ್ನು ವಿಸರ್ಜನೆ ಮಾಡಿದಂತೆ, ಈ ಕಟ್ಟಡದಲ್ಲೂ ಹಿಕ್ಕೆಗಳ ಕಲೆಗಳು ಆವರಿಸಿವೆ. ಈಗಲೇ ಗೋಡೆಗಳು ಬಿರುಕು ಬಿಟ್ಟಿವೆ. ವಿದ್ಯುತ್‌ ಸ್ವಿಚ್‌ಗಳೆಲ್ಲಾ ಕಿತ್ತು ಹೋಗಿವೆ. ಗೋಡೆ ಮೇಲೆ ಮಸಿಯಲ್ಲಿ ಚಿತ್ರಗಳನ್ನು ಬರೆಯಲಾಗಿದೆ.

ಕೋಟ್ಯಂತರ ವೆಚ್ಚದಲ್ಲಿ ನಿರ್ಮಾಣವಾಗಿ, ರಂಗ ಪ್ರದರ್ಶನದ ತಾಣವಾಗಬೇಕಿದ್ದ, ರಂಗಮಂದಿರವೊಂದು ಉದ್ಘಾಟನೆಗೊಳ್ಳುವ ಮೊದಲೇ ಪಾಳುಬಿದ್ದಿದೆ. ಇನ್ನೊಂದೆಡೆ, ಜಿಲ್ಲೆಯ ರಂಗಭೂಮಿ ಕಲಾವಿದರಿಗೆ ರಂಗಮಂದಿರವಿಲ್ಲದೇ ಸಭಾ ಕಾರ್ಯಕ್ರಮ ನಡೆಸುವ ಜಾಗವಾದ ಜೆ.ಎಚ್‌.ಪಟೇಲ್‌ ಸಭಾಂಗಣದಲ್ಲೇ ನಾಟಕ ಪ್ರದರ್ಶಿಸಬೇಕಾದ ಅನಿವಾರ್ಯತೆ ಇದೆ.

ಪ್ರದರ್ಶನದ ದಿನ ಯಾವುದಾದರೂ ಸರ್ಕಾರಿ ಕಾರ್ಯಕ್ರಮ ಅಥವಾ ಇನ್ನಿತರ ಸಭಾ ಕಾರ್ಯಕ್ರಮ ಬಿದ್ದರೆ, ಅಂದು ರಂಗ ಕಲಾವಿದರಿಗೆ ಪಟೇಲ್‌ ಸಭಾಂಗಣ ದೊರಕುವುದೂ ಇಲ್ಲ. ಪಟೇಲ್‌ ಸಭಾಂಗಣದ ವೇದಿಕೆ ಬಹಳ ಚಿಕ್ಕದಾಗಿದ್ದು, ನಾಟಕ ಪ್ರದರ್ಶನಕ್ಕೆ ಸೂಕ್ತವಾಗಿಲ್ಲ.

“ರಂಗಮಂದಿರದ ಮುಂದುವರಿದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ದೊರೆತಿರಲಿಲ್ಲ. ಈ ವರ್ಷದ ಜನವರಿಯಲ್ಲಿ ಅನುಮೋದನೆ ದೊರಕಿತು. ಲೋಕೋಪಯೋಗಿ ಇಲಾಖೆ ಕಾಮಗಾರಿ ಏಜೆನ್ಸಿಯಾಗಿದೆ. ಟೆಂಡರ್‌ ಪ್ರಕ್ರಿಯೆ ನಡೆಯಬೇಕಿದೆ. ಸದ್ಯದಲ್ಲೇ ಕಾಮಗಾರಿ ಪುನಾರಂಭಗೊಳ್ಳಲಿದೆ.” – ಗಿರೀಶ್‌, ಸಹಾಯಕ ನಿರ್ದೇಶಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ

  • ಕೆ.ಎಸ್‌.ಬನಶಂಕರ ಆರಾಧ್ಯ

ಟಾಪ್ ನ್ಯೂಸ್

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.