ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ : ಹಿಂದೂಗಳ 20 ಮನೆಗಳಿಗೆ ಬೆಂಕಿ
Team Udayavani, Oct 18, 2021, 6:30 PM IST
ಢಾಕಾ: ಕಳೆದ ಬುಧವಾರದಿಂದ ಬಾಂಗ್ಲಾದೇಶದಲ್ಲಿ ಆರಂಭ ವಾಗಿರುವ ಹಿಂದೂಗಳ ಮೇಲಿನ ದಾಳಿ ಪ್ರಕರಣ ತೀವ್ರ ಸ್ವರೂಪದ ಕೋಮು ದಳ್ಳುರಿಯಾಗಿ ಪರಿವರ್ತನೆಗೊಂಡಿದ್ದು, ಸೋಮವಾರ ಹಿಂದೂಗಳ 20 ಕ್ಕೂ ಹೆಚ್ಚು ಮನೆಗಳನ್ನು ಬೆಂಕಿ ಹಚ್ಚಿ ಸುಡಲಾಗಿದೆ.
ದುರ್ಗಾಪೂಜೆಯ ಬಳಿಕ ದೇವಾಲಯ ಧ್ವಂಸಗೈದ ಬಳಿಕ ಹಿಂಸಾಚಾರ ಭುಗಿಲೆದ್ದಿದ್ದು, ಢಾಕಾದಿಂದ 255 ಕಿ.ಮೀ ದೂದಲ್ಲಿರುವ ಊರಿನಲ್ಲಿ ಹಿಂದೂಗಳ ಮನೆಗೆ ಬೆಂಕಿ ಹಚ್ಚಲಾಗಿದೆ.
ಹಿಂದೂಗಳ ಮೇಲೆ ವ್ಯಾಪಕ ದಾಳಿಯ ಬಳಿಕ ಹಿಂದೂ ಯುವಕನೊಬ್ಬ ಸಾಮಾಜಿಕ ತಾಣದಲ್ಲಿ ಮುಸ್ಲಿಮರ ವಿಚಾರಗಳಿಗೆ ಧಕ್ಕೆ ತರುವಂತೆ ಬರೆದಿದ್ದಾನೆ ಎಂಬ ಸುದ್ದಿಯಲ್ಲಿ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಂಗ್ಲಾದೇಶದ ಹಿಂದೂ, ಬೌದ್ಧ ಮತ್ತು ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ಚಾಂದ್ಪುರ್ ಮತ್ತು ನೋಖಾಲಿಯಲ್ಲಿ ನಡೆದ ದಾಳಿಯಲ್ಲಿ ಕನಿಷ್ಠ ನಾಲ್ಕು ಹಿಂದೂ ಭಕ್ತರು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿದೆ.
ಶನಿವಾರ ವಷ್ಟೇ ಕಾಳಿ ದೇವಾಲಯ ಹಾಗೂ ಇಸ್ಕಾನ್ ದೇಗುಲದ ಮೇಲೆ ದಾಳಿ ನಡೆಸಿದ್ದ ದುಷ್ಕರ್ಮಿಗಳ ಗುಂಪು, ಮೂವರನ್ನು ಹತ್ಯೆಗೈದಿತ್ತು.
ಹಿಂದೂಗಳ ಮೇಲಿನ ದಾಳಿಗೆ ವ್ಯಾಪಕ ಖಂಡನೆ ವ್ಯಕ್ತ ವಾಗಿದ್ದು , ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಹಿಂದೂಗಳ ರಕ್ಷಣೆಗೆ ಬದ್ಧರಾಗಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ನೀಡುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…