ತೋಳ ಕೊಂದು ಬೈಕ್ಗೆ ಕಟ್ಟಿ ಎಳೆದೊಯ್ದ ಯುವಕರು
Team Udayavani, Oct 18, 2021, 6:43 PM IST
ಲಕ್ಷ್ಮೇಶ್ವರ : ಸೋಗಿವಾಳ ಗ್ರಾಮದಲ್ಲಿ ಮೂವರು ಯುವಕರ ಮೇಲೆ ತೋಳವೊಂದು ದಾಳಿ ಮಾಡಿದೆ. ಇದರಿಂದ ಆಕ್ರೋಶಗೊಂಡ ಯುವಕರು ತೋಳ ಹೊಡೆದು ಸಾಯಿಸಿ ದ್ವಿಚಕ್ರ ವಾಹನದ ಹಿಂದೆ ಕಟ್ಟಿ ಎಳೆದೊಯ್ಯುತ್ತಿರುವ ಅಮಾನವೀಯ ದೃಶ್ಯ ಸಾಮಾಜಿಕ ಜಾಲ ತಾಣದಲ್ಲಿ ಹರಿಬಿಟ್ಟಿದ್ದಾರೆ.
ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಅರಣ್ಯ ಇಲಾಖೆ ಅ ಧಿಕಾರಿಗಳು ಯುವಕರ ಪತ್ತೆಗೆ ಜಾಲ ಬೀಸಿದ್ದು, ಅವರು ತಲೆಮರೆಸಿಕೊಂಡಿದ್ದಾರೆ. ಘಟನೆಯ ವಿವರ: ಸೋಗಿವಾಳ ಗ್ರಾಮದಲ್ಲಿ ಅ.13 ಮತ್ತು 14 ರಂದು ತೋಳವೊಂದು ಗ್ರಾಮಕ್ಕೆ ನುಗ್ಗಿ ಕೆಲವರ ಮೇಲೆ ದಾಳಿ ಮಾಡಿದೆ. ಇದರಿಂದ ರೊಚ್ಚಿಗೆದ್ದ ಕೆಲ ಯುವಕರು ತೋಳವನ್ನು ಕೊಂದು ಅದನ್ನು ದ್ವಿಚಕ್ರ ವಾಹನದ ಹಿಂದೆ ಕಟ್ಟಿ ಎಳೆದೊಯ್ದು ಬೀಸಾಕಿದ್ದಾರೆ. ಅಲ್ಲದೇ, ಈ ದೃಶ್ಯವನ್ನು ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ಬೆಳಕಿಗೆ ಬಂದಿದೆ.
ತೋಳದ ದಾಳಿಗೆ ಗಾಯಗೊಂಡ ಶಿವಾನಂದ ಅತ್ತಿಗೇರಿ ಎಂಬ ಯುವಕ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾನೆ. ಆತ ಚಿಕಿತ್ಸೆಯಿಂದ ಚೇತರಿಸಿಕೊಂಡು ಗ್ರಾಮಕ್ಕೆ ತೆರಳಿದ್ದಾನೆ. ವಿಡಿಯೋದಲ್ಲಿನ ಬೈಕ್ ಹಿಂದಿನ ನಂಬರ್ ಪರೀಕ್ಷಿಸಿದ ಅರಣ್ಯ ಇಲಾಖೆ ಅ ಧಿಕಾರಿಗಳು ಬೈಕ್ ಮಾಲಿಕ ಶಿವರಾಜಕುಮಾರ ಕುರುಬರ ಮೇಲೆ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಬೈಕ್ ಮಾಲಿಕ ನಾಪತ್ತೆಯಾಗಿದ್ದಾನೆ. ತೋಳಕ್ಕೆ ಹುಚ್ಚು ಹಿಡಿದಿತ್ತೆನ್ನಲಾಗಿದ್ದು, ಸತ್ತಿರುವ ತೋಳದ ಕಳೆಬರಹಕ್ಕಾಗಿ ಅರಣ್ಯ ಸಿಬ್ಬಂದಿ ತಲಾಷ್ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ