ಫ್ರೂಟ್ಸ್‌ ತಂತ್ರಾಂಶ: ಜಿಲ್ಲೆಯಲ್ಲಿ ಶೇ. 48.55ರಷ್ಟು ಮಾತ್ರ ಪ್ರಗತಿ

ನೋಂದಣಿಗೆ ರೈತರ ನಿರಾಸಕ್ತಿ , ಸೌಲಭ್ಯ ಕೈತಪ್ಪುವ ಆತಂಕ

Team Udayavani, Oct 19, 2021, 5:27 AM IST

ಫ್ರೂಟ್ಸ್‌ ತಂತ್ರಾಂಶ: ಜಿಲ್ಲೆಯಲ್ಲಿ ಶೇ. 48.55ರಷ್ಟು ಮಾತ್ರ ಪ್ರಗತಿ

ಕಾರ್ಕಳ: ಕೃಷಿ ಇಲಾಖೆ ಅಭಿವೃದ್ಧಿಗೊಳಿಸಿರುವ ಫ್ರೂಟ್ಸ್‌ ತಂತ್ರಾಂಶದಲ್ಲಿ ರೈತರು ನೋಂದಣಿ ಮಾಡಿಕೊಳ್ಳಲು ಜಿಲ್ಲಾಡಳಿತ ಅವಕಾಶ ಕಲ್ಪಿಸಿದ್ದು, ನೋಂದಣಿ ಆರಂಭಗೊಂಡಿದೆ. ರೈತರಲ್ಲಿ ಮಾಹಿತಿ ಕೊರತೆ, ನಿರಾಸಕ್ತಿಯ ಕಾರಣಕ್ಕೆ ಜಿಲ್ಲೆಯಲ್ಲಿ ಇದುವರೆಗೆ ಶೇ. 48.55ರಷ್ಟು ಮಾತ್ರ ಪ್ರಗತಿ ಸಾಧಿಸಲಾಗಿದೆ. ಈ ತಂತ್ರಾಂಶದಲ್ಲಿ ಮಾಹಿತಿ ನೀಡಿದರೆ ಅಧಿಕ ಲಾಭಾಂಶ ಪಡೆಯಲು ರೈತರಿಗೆ ಅನುಕೂಲವಾಗಲಿದೆ.

ಇಲಾಖೆಯಿಂದ ಪ್ರಚಾರ ನಡೆದಿದ್ದರೂ ಎಲ್ಲರನ್ನು ತಲುಪಲು ಸಾಧ್ಯವಾಗಿಲ್ಲ. 2020-21ರ ಸರ್ವೇಯಂತೆ ಜಿಲ್ಲೆಯಲ್ಲಿ 9,12,936 ಲಕ್ಷ ಮಂದಿ ನೋಂದಣಿ ಮಾಡಿಕೊಳ್ಳಬೇಕಿತ್ತು. ಆದರೇ 4,43,245 ಲಕ್ಷ ಮಂದಿ ಮಾತ್ರ ನೋಂದಣಿ ಮಾಡಿದ್ದು, 4,69,691 ಲಕ್ಷ ಮಂದಿ ಬಾಕಿ ಉಳಿದಿದ್ದಾರೆ. ನೋಂದಣಿ ಆಗದಿದ್ದಲ್ಲಿ ಬಹುತೇಕ ರೈತರಿಗೆ ಸರಕಾರದಿಂದ ಕೃಷಿ ಇಲಾಖೆಯಡಿ ಸಿಗುವ ಸೌಲಭ್ಯ ಕೈತಪ್ಪುವ ಆತಂಕ ಇದೆ.

ಈ ತಂತ್ರಾಂಶದ ಮೂಲಕ ಬಿತ್ತನೆ ಬೀಜ, ಕೀಟನಾಶಕ, ರಾಸಾಯನಿಕ, ಗೊಬ್ಬರ, ಕಂದಾಯ, ಕೃಷಿ, ತೋಟಗಾರಿಕೆ ಉಪಕರಣ, ಹೈನುಗಾರಿಕೆ, ರೇಷ್ಮೆ, ಸಹಕಾರ ಇಲಾಖೆಗಳಿಂದ ಪಡೆಯುವ ವಿವಿಧ ಸವಲತ್ತು ಪಡೆಯಲು ಅನುಕೂಲವಾಗುತ್ತದೆ. ಸಸ್ಯ ಸಂರಕ್ಷಣ ಉಪಕರಣಗಳನ್ನು ಸಹಾಯ ಧನದಲ್ಲಿ ಪಡೆಯಬಹುದು. ಬ್ಯಾಂಕ್‌ ಸಾಲ, ಬೆಳೆ ವಿಮೆ ಸವಲತ್ತು ಪಡೆಯಲು ಸಹ ಅನುಕೂಲವಾಗುತ್ತದೆ. ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳದ ರೈತರಿಗೆ ಇಲಾಖೆಯಿಂದ ಯಾವುದೇ ಸೌಲಭ್ಯ, ರಿಯಾಯಿತಿ ದರದಲ್ಲಿ ನೀಡಲು ಅವಕಾಶ ಇರುವುದಿಲ್ಲ.

ನೋಂದಣಿಯಾದ ರೈತರಿಗೆ ಯೂನಿಕ್‌ ನಂಬರ್‌ ಇರುವ ಗುರುತಿನ ಸಂಖ್ಯೆ ನೀಡಲಾಗುತ್ತದೆ. ರೈತರ ಎಲ್ಲ ಮಾಹಿತಿ ಆನ್‌ಲೈನ್‌ನಲ್ಲೆ ನೋಂದಣಿಯಾಗುತ್ತದೆ. ಯೂನಿಕ್‌ ನಂಬರ್‌ ಇದ್ದಲ್ಲಿ ಎಲ್ಲ ವಿವರ ಅಲ್ಲಿಯೇ ಸಿಗುತ್ತದೆ. ಇಲಾಖೆಯಿಂದ ನೀಡಿರುವ ಎಲ್ಲ ಸೌಲಭ್ಯಗಳ ಮಾಹಿತಿ ಲಭ್ಯವಾಗಲಿದೆ. ಇದರಿಂದ ಸೌಲಭ್ಯಗಳ ದುರುಪಯೋಗವೂ ತಪ್ಪಲಿದೆ.

ರೈತರು ಹೋಬಳಿ ರೈತ ಸಂಪರ್ಕ ಕೇಂದ್ರಗಳಲ್ಲಿ, ತಹಶೀಲ್ದಾರ್‌ ಕಚೇರಿ, ಗ್ರಾಮ ಲೆಕ್ಕಾಧಿಕಾರಿ ಕಚೇರಿ, ನ್ಯಾಯಬೆಲೆ ಅಂಗಡಿ, ಕೃಷಿ ತೋಟಗಾರಿಕೆ, ರೇಷ್ಮೆ ಇಲಾಖೆ ಇದರಲ್ಲಿ ಯಾವುದಾದರೊಂದು ಕಚೇರಿಯಲ್ಲಿ ಪಹಣಿ, ಆಧಾರ್‌ ಕಾರ್ಡ್‌, ಬ್ಯಾಂಕ್‌ ಪಾಸ್‌ಬುಕ್‌ ಜೆರಾಕ್ಸ್‌, ಐಎಫ್ಸಿ ಕೋಡ್‌ ಸಹಿತ ಪ್ರತಿ, ಪಾಸ್‌ ಪೋರ್ಟ್‌ ಅಳತೆಯ ಫೊಟೋ, ಪ. ಜಾತಿ, ಪಂಗಡದ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರದ ಜೆರಾಕ್ಸ್‌ ಪ್ರತಿ ಸೇರಿದಂತೆ ಸೂಕ್ತ ದಾಖಲೆ ನೀಡಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ:ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್-2021 ಪೂರ್ವಭಾವಿ ಸಿದ್ಧತೆ ಪರಿಶೀಲಿಸಿದ ಸಚಿವ ನಾರಾಯಣಗೌಡ

ಫ್ರೂಟ್ಸ್‌ ತಂತ್ರಾಂಶ ಏಕೆ?
ಕೃಷಿ ಇಲಾಖೆ ಕಳೆದ ಹಲವು ವರ್ಷಗಳಿಂದ ಕೆ-ಕಿಸಾನ್‌ ಯೋಜನೆಯಡಿ ನಾನಾ ಸವಲತ್ತು ನೀಡಲು ದತ್ತಾಂಶ ಸಂಗ್ರಹಿಸುತ್ತಿತ್ತು. ರೈತರ ವಿವರ ಸಂಗ್ರಹಣೆಯಲ್ಲಿ ಸಮಾಧಾನಕರ ಪ್ರಗತಿಯಾಗದ ಕಾರಣ ಇ-ಆಡಳಿತ ಇಲಾಖೆಯಿಂದ ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಇಲಾಖೆಗಳಲ್ಲಿ ಏಕರೂಪವಾಗಿ ರೈತರ ದತ್ತಾಂಶ ಒಂದು ಬಾರಿ ಸಂಗ್ರಹಿಸಿಡಲು ಫ್ರೂಟ್ಸ್‌ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ.

ಇದುವರೆಗೂ ತಂತ್ರಾಂಶದಲ್ಲಿ ನಮೂದಿಸಿಕೊಳ್ಳದೆ ಇರು ವವರು ಈಗ ನೋಂದಾಯಿಸಿ ಕೊಳ್ಳಬಹುದು. ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಸಂಗೋಪನೆ, ಇತರ ಸಂಬಂಧಿಸಿದ ಇಲಾಖೆಗಳಿಂದ ದೊರೆಯುವ ಸಹಾಯಧನ ಸೌಲಭ್ಯ ಗಳನ್ನು ಪಡೆಯಲು , ಬೆಂಬಲ ಬೆಲೆ, ಬೆಳೆ ವಿಮೆ, ಬೆಳೆ ಸಾಲ, ಬೆಳೆ ಹಾನಿ, ಪರಿಹಾರ, ಯೋಜನೆಗಳಿಗೆ ಫ್ರೂಟ್ಸ್‌ ಸಂಖ್ಯೆಯನ್ನು ಬಳಸಲಾಗುತ್ತದೆ. ನೋಂದಣಿ ಯಾಗದೆ ಇರುವ ರೈತರು ಕೂಡಲೇ ನೋಂದಾಯಿಸಿಕೊಳ್ಳುವಂತೆ ಸಂಬಂಧಿಸಿದ ಇಲಾಖೆಗಳು ಸೂಚನೆ ನೀಡುತ್ತಿದ್ದರೂ ನಿರೀಕ್ಷಿತ ಪ್ರಗತಿಯಾಗಿಲ್ಲ. ಕೆಲವೆಡೆ ಸ್ಥಳಿಯಾಡಳಿತಗಳು ಜನರಿಗೆ ಮಾಹಿತಿ ನೀಡುವ ಕಾರ್ಯದಲ್ಲಿ ತೊಡಗಿವೆ.

ರೈತರಿಗೆ ಮಾಹಿತಿ
ಫ್ರೂಟ್ಸ್‌ ತಂತ್ರಾಂಶದ ಬಗ್ಗೆ ರೈತರಲ್ಲಿ ಮಾಹಿತಿ ಕೊರತೆ ಇದೆ. ಅದಕ್ಕೆಂದು ಪರಿಸರದ ಮನೆಗಳಿಗೆ ತೆರಳಿ ರೈತರಿಗೆ ಮಾಹಿತಿ ನೀಡಿ ರೈತರು ಈ ತಂತ್ರಾಂಶದ ಸೌಲಭ್ಯದಿಂದ ವಂಚಿತರಾಗದಂತೆ ಪ್ರಯತ್ನಿಸಲಾಗುತ್ತಿದೆ.
-ಪ್ರಕಾಶ್‌ ರಾವ್‌ ಕಾರ್ಕಳ,
ಪುರಸಭಾ ಮಾಜಿ ಸದಸ್ಯ

ವಿಶೇಷ ಅಭಿಯಾನ
ಅನ್ಯ ಜಿಲ್ಲೆಗೆ ಹೋಲಿಸಿದರೆ ನಮ್ಮ ಜಿಲ್ಲೆಯಲ್ಲಿ ಶೇಕಡಾವಾರು ನೋಂದಣಿ ಹೆಚ್ಚಿದೆ. ತಿಂಗಳ ಹಿಂದೆ ಶೇ. 36 ಇತ್ತು. ಇದೀಗ ಶೇ. 46ಕ್ಕೆ ತಲುಪಿದೆ. ಹಳ್ಳಿಗಳಲ್ಲಿ ನೋಂದಣಿಗೆ ವಿಶೇಷ ಅಭಿಯಾನ ಆರಂಭಿಸಿದ್ದು, ಗ್ರಾಮಲೆಕ್ಕಾಧಿಕಾರಿ ಮೂಲಕ ಪ್ರತಿ ರೈತರನ್ನು ನೋಂದಣಿಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ.
-ಕೆಂಪೇಗೌಡ, ಜಂಟಿ ನಿರ್ದೇಶಕರು, ಕೃಷಿ ಇಲಾಖೆ ಉಡುಪಿ

– ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Kapu ಟಿಪ್ಪರ್‌ಗೆ ಪಿಕಪ್‌ ಢಿಕ್ಕಿ: ಚಾಲಕ ಗಂಭೀರ

Kapu ಟಿಪ್ಪರ್‌ಗೆ ಪಿಕಪ್‌ ಢಿಕ್ಕಿ: ಚಾಲಕ ಗಂಭೀರ

road-mishap

Road Mishap ಸ್ಕೂಟಿ ಅಪಘಾತ: ಸವಾರ ಸಾವು

ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವರ್ಗಾವಣೆ

ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವರ್ಗಾವಣೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.