ಯಗಚಿ ಜಲಾಶಯಕ್ಕೆ  ಕಾಯಕಲ್ಪ ಯಾವಾಗ?


Team Udayavani, Oct 19, 2021, 3:36 PM IST

HASANA NEWS

ಬೇಲೂರು: ಪಟ್ಟಣದ ಹೊರವಲಯದಲ್ಲಿರುವಯಗಚಿ ಜಲಾಶಯವನ್ನು ವಿಕ್ಷೀಸಲು ಬರುವಪ್ರವಾಸಿಗರಿಗೆ ಮೂಲ ಸೌಲಭ್ಯ ಇಲ್ಲದೆ ನಿತ್ಯಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರಕೂಡಲೆ ಇತ್ತ ಗಮನಹರಿಸಿ ಸೌಲಭ್ಯ ಕಲ್ಪಿಸಲು ಮುಂದಾಗಬೇಕು.

ಕಳೆದ ವಾರದಲ್ಲಿ ಸಾಲು ಸಾಲು ರಜೆ ಹಿನ್ನೆಲೆಯಲ್ಲಿಜಿಲ್ಲೆಯ ಐತಿಹಾಸಿ ಹಾಗೂ ಪ್ರವಾಸಿ ತಾಣಗಳಿಗೆ ಭೇಟಿನೀಡಿದ್ದ ಸಾವಿರಾರೂ ಪ್ರವಾಸಿಗರು ಬೇಲೂರುದೇವಾಲಯ ವೀಕ್ಷಿಸಿದ ನಂತರಹಾಸನ-ಚಿಕ್ಕಮಗಳೂರು ಹೆದ್ದಾರಿ ಬದಿಯಲ್ಲಿನಯಗಚಿ ಜಲಾಶಯ ವೀಕ್ಷಣೆ ಮಾಡಲು ಬರುತ್ತಿದ್ದುಅವರಿಗೆ ಶೌಚಾಲಯ, ಕುಡಿಯುವ ನೀರು, ಕೂರಲುಅಸನ ವ್ಯವಸ್ಥೆ, ಮಳೆ ಬಂದರೆ ನಿಲ್ಲಲು ತಂಗುದಾಣ,ಉಪಾಹಾರ ಮಂದಿರ ನಿರ್ಮಿಸದೆ ಇರುವುದುಪ್ರವಾಸಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಯಗಚಿ ಮಲೆನಾಡು ಜಿಲ್ಲೆಗಳಲ್ಲಿ ಹರಿಯುವಹೇಮಾವತಿ ನದಿಯ ಅತಿ ಮುಖ್ಯ ಉಪನದಿಯಾಗಿದೆ.ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್‌ಗಿರಿಬೆಟ್ಟಗಳಲ್ಲಿ ಹುಟ್ಟಿ ದಕ್ಷಿಣ ಭಾಗಕ್ಕೆ ಹರಿಯುತ್ತದೆ. ಈನದಿ ವಿಶ್ವ-ವಿಖ್ಯಾತ ಬೇಲೂರು ಪಟ್ಟಣದ ಬಳಿ ಹಾದುಹಾಸನ ತಾಲೂಕಿನ ಗೊರೂರು ಬಳಿಯ ಹೇಮಾವತಿನದಿ ಸೇರುತ್ತದೆ. ಇಂಥ ಯಗಚಿ ನದಿಗೆ ಅಡ್ಡವಾಗಿಅಣ್ಣೆಕಟ್ಟೆಯನ್ನು ನಿರ್ಮಿಸಿದ್ದು ಜಲಾಶಯದಿಂದಬೇಲೂರು, ಚಿಕ್ಕಮಗಳೂರು, ಅರಸೀಕೆರೆ ತಾಲೂಕಿನ52 ಗ್ರಾಮಗಳಿಗೆ ಕುಡಿಯುವ ನೀರುಪೂರೈಸಲಾಗುತ್ತಿದೆ.

ಶಿಲ್ಪಕಲೆಗಳ ದೇಗುಲಗಳನ್ನುವೀಕ್ಷಿಸಿ ಕಾಫಿ ನಾಡು ಚಿಕ್ಕಮಗಳೂರಿಗೆ ತೆರಳುವ ಪ್ರತಿಪ್ರವಾಸಿಗರು ಯಗಚಿ ಜಲಾಶಯ ವೀಕ್ಷಣೆಗೆ ಬಂದುಹೋಗುವ ವಾಡಿಕೆ ಇದೆ.ಜಲಾಶಯ ನಿರ್ಮಿಸಿ ಸುಮಾರು 17 ವರ್ಷಕಳೆದರೂ ಇಲ್ಲಿಗೆ ಬರುವ ಪ್ರವಾಸಿಗರಿಗೆ ಅಗತ್ಯಮೂಲಭೂತ ಸೌಲಭ್ಯಗಳನ್ನು ಸರ್ಕಾರ ಇದುವರೆಗೂಕಲ್ಪಿಸಿಲ್ಲ.ಇತ್ತೀಚೆಗೆ ಯಗಚಿ ಜಲಾಶಯದ ಹಿನ್ನೀರಿನಲ್ಲಿಯಗಚಿ ವಾಟರ್‌ ಆಡ್ವೆಂಚರ್‌ ನ್ಪೋಟ್ಸ್‌ ಸೆಂಟರ್‌ಎಂಬ ಸಾಹಸ ಕ್ರೀಡಾ ಕೇಂದ್ರ ತಲೆ ಎತ್ತಿದ್ದು ಹೆಚ್ಚುಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಣೆ ಮಾಡುತ್ತಿದೆ.ಆದರೆ ಜಲಾಶಯಕ್ಕೆ ಬಂದ ಪ್ರವಾಸಿಗರಲ್ಲಿ ಕೆಲವೇಮಂದಿ ಮಾತ್ರ ಈ ಸಾಹಸ ಕ್ರೀಡೆಗೆ ತೆರಳುತ್ತಾರೆ.

ಯಗಚಿ ನೀರಾವರಿ ನಿಗಮ ಇಂತಹ ಸ್ಥಳದಲ್ಲಿಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿಹೋಟಲ್‌ಗ‌ಳು, ಹೈಟೆಕ್‌ ಶೌಚಾಲಯ, ಶುದ್ಧಕುಡಿಯುವ ನೀರು, ಶ್ರಾಂತಿ ಗೃಹಗಳು ಸೇರಿದಂತೆಹತ್ತಾರು ಸೌಲಭ್ಯಗಳನ್ನು ಕಲ್ಪಿಸಿಬೇಕಾಗಿದೆ.ಯಗಚಿ ಜಲಾಶಯದ ಮುಂಭಾದ ನೂರಾರು ಎಕ್ಕರೆ ಭೂಮಿ ಪಾಳು ಬಿದ್ದಿದೆ, ಇಲ್ಲಿನಗಿಡ-ಗಂಟಿಗಳು ಬೆಳೆದಿದ್ದು ನಿತ್ಯ ಅನೈತಿಕಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ.

ಇಲಾಖೆ ಅಧಿಕಾರಿಗಳಾಗಲಿ ಅಥವಾ ರಕ್ಷಣಾ ಇಲಾಖೆ ಸಿಬ್ಬಂದಿಇಲ್ಲದೆ ಪ್ರವಾಸಿಗರನ್ನು ಯಾರು ಹೇಳುವರುಕೇಳುವರು ಇಲ್ಲದಂತಾಗಿದೆ. ಕೂಡಲೇ ಯಗಚಿನೀರಾವರಿ ನಿಗಮ ಅಧಿಕಾರಿಗಳು ಹಾಗೂ ಸ್ಥಳೀಯಶಾಸಕರು ಯಗಚಿ ಜಲಾಶಯಕ್ಕೆ ಕಾಯಕಲ್ಪನೀಡಲು ಮುಂದಾಗಬೇಕು.

ಡಿ.ಬಿ.ಮೋಹನ್‌ ಕುಮಾರ್‌

ಟಾಪ್ ನ್ಯೂಸ್

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Devarajegowda 2 ದಿನ ಎಸ್‌ಐಟಿಗೆ; 5 ದಿನ ವಶಕ್ಕೆ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು

Devarajegowda 2 ದಿನ ಎಸ್‌ಐಟಿಗೆ; 5 ದಿನ ವಶಕ್ಕೆ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು

D. K. Shivakumar`100 ಕೋ.ಆಮಿಷ: ದೇವರಾಜೇಗೌಡ ಬಾಂಬ್‌

D. K. Shivakumar`100 ಕೋ.ಆಮಿಷ: ದೇವರಾಜೇಗೌಡ ಬಾಂಬ್‌

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಜೈಲಿಂದ ಬಿಡುಗಡೆಯಾದ ರೇವಣ್ಣ ತವರು ಜಿಲ್ಲೆ ಭೇಟಿ ದಿಢೀರ್‌ ರದ್ದು

ಜೈಲಿಂದ ಬಿಡುಗಡೆಯಾದ ರೇವಣ್ಣ ತವರು ಜಿಲ್ಲೆ ಭೇಟಿ ದಿಢೀರ್‌ ರದ್ದು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qweq-eeqw

Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.