ಶಾಂತಿ ಸೌಹಾರ್ದತೆಯ ಸಂಕೇತವೇ ಪೈಗಂಬರ್ ಜಯಂತಿ: ಮಾಜಿ ಎಂಎಲ್ಸಿ ಎಚ್ ಆರ್ ಶ್ರೀನಾಥ್ .
Team Udayavani, Oct 19, 2021, 4:42 PM IST
ಗಂಗಾವತಿ: ಶಾಂತಿ ಸೌಹಾರ್ದತೆ ಪರಧರ್ಮ ಸಹಿಷ್ಣುತೆ ಪೈಗಂಬರ್ ಜಯಂತಿಯ ಮೂಲ ಉದ್ದೇಶವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಇತರರ ಧರ್ಮವನ್ನು ಸೌಹಾರ್ದ ಮತ್ತು ಗೌರವಯುತವಾಗಿ ಕಾಣುವಂತೆ ಮಾಜಿ ಎಂಎಲ್ಸಿ ಎಚ್ ಆರ್ ಶ್ರೀನಾಥ್ ಹೇಳಿದರು .
ಅವರು ನಗರದ ಕರ್ನೂಲ್ ಬಾಬಾ ದರ್ಗಾ ಹತ್ತಿರ ಮಹಮ್ಮದ್ ಪೈಗಂಬರ್ ಜಯಂತಿ ನಿಮಿತ್ತ ಸರಳವಾಗಿ ಆಯೋಜಿಸಿದ್ದ ಧಾರ್ಮಿಕ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು .
ಸರ್ಕಾರ ಕೊರೋನ ಹಿನ್ನೆಲೆಯಲ್ಲಿ ಮೆರವಣಿಗೆ ಮಾಡದಂತೆ ಆದೇಶ ವಿಧಿಸಿದ್ದರೂ ಸರಳವಾಗಿ ಕಡ್ಡಾಯವಾಗಿ ಮಾರ್ಗಸೂಚಿ ಪಾಲನೆ ಮಾಡುವ ಮೂಲಕ ಮೆರವಣಿಗೆಗೆ ಆಯೋಜನೆ ಮಾಡಲಾಗಿದೆ. ಮೆರವಣಿಗೆ ಮೂಲ ಉದ್ದೇಶ ಮಹಾನ್ ವ್ಯಕ್ತಿಗಳ ವಿಚಾರವನ್ನು ಜನಮಾನಸದಲ್ಲಿ ಉಳಿಯುವಂತೆ ಮಾಡಬೇಕು ಆ ಮೂಲಕ ಧಾರ್ಮಿಕ ಸೌಹಾರ್ದತೆ ಬೆಳೆಸಬೇಕು .
ಪ್ರತಿಯೊಬ್ಬರೂ ಮನೆಯಲ್ಲಿ ಪೈಗಂಬರ್ ಜಯಂತಿ ಆಚರಣೆ ಮಾಡುವ ಮೂಲಕ ಅವರ ಆದರ್ಶಗಳನ್ನು ಪಾಲನೆ ಮಾಡಬೇಕು ಎಂದರು .
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಮಹಮ್ಮದ್ ಉಸ್ಮಾನ್ ಬಿಚ್ಚುಗತ್ತಿ ,ಸಲೀಂ ,ಸಾದಿಕ್ ಸೇರಿ ಮುಸ್ಲಿಂ ಸಮಾಜದ ಅನೇಕ ಮುಖಂಡರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು
Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು
ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ