ಪ್ರಶಸ್ತಿಯಿಂದ ಸಾಧಕನ ಜವಾಬ್ದಾರಿ ವೃದ್ದಿ


Team Udayavani, Oct 19, 2021, 5:21 PM IST

26

ಬೀದರ: ದುಡಿಯುವ ಕೈಗಳಿಗೆ ಪ್ರಶಸ್ತಿಗಳು ಜವಾಬ್ದಾರಿ ಹೆಚ್ಚಿಸುತ್ತವೆ. ಸಾಧಕನ ಸಾಧನೆಗೆ ಪ್ರೇರಣೆ ನೀಡುತ್ತವೆ ಎಂದು ಕಸಾಪ ಮಾಜಿ ಜಿಲ್ಲಾಧ್ಯಕ್ಷ ಬಾಬುರಾವ್‌ ವಡ್ಡೆ ಹೇಳಿದರು.

ಸಾಹಿತ್ಯ ಅಕಾಡೆಮಿ ಬೆಂಗಳೂರು, ಕರ್ನಾಟಕ ಬರಹಗಾರರ ಮತ್ತು ಕಲಾವಿದರ ಸಂಘದ ಆಶ್ರಯದಲ್ಲಿ ನಗರದ ಕರ್ನಾಟಕ ಸಾಹಿತ್ಯ ಸಂಘದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕವಿಗೋಷ್ಠಿ ಮತ್ತು ಧರಿನಾಡಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಡಾ| ರಾಜಕುಮಾರ ಹೆಬ್ಟಾಳೆ ನಿರಂತರ ಕಲಾತ್ಮಕ ಮತ್ತು ಸಾಹಿತ್ಯಿಕ ಕಾರ್ಯಕ್ರಮ ಹಮ್ಮಿಕೊಂಡು ಬರುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು.

ಹಿರಿಯ ಸಾಹಿತಿ ವಿ.ಎಂ. ಡಾಕುಳಗಿ ಮಾತನಾಡಿ, ದೀಪ ಹಚ್ಚಿದಾಗ ಜ್ಯೋತಿಯು ತನ್ನ ಬೆಳಕು ಎಲ್ಲೆಡೆ ಹರಡಿಸಿ ತನ್ನ ಹೆಸರು ಮಾಡುವಂತೆ, ದುಡಿಯುವ ಸಾಧಕ ತನ್ನ ಸಾಧನೆಗಳ ಮೂಲಕ ಎಲ್ಲೆಡೆ ಹೆಸರುವಾಸಿಯಾಗುತ್ತಾನೆ. ಈ ನಿಟ್ಟಿನಲ್ಲಿ ರಾಜಕುಮಾರ ಅವರು ಸದ್ದಿಲ್ಲದೇ ಜಿಲ್ಲೆಯಲ್ಲಿ ಸಾಹಿತ್ಯಿಕ ಮತ್ತು ಕಲಾ ಕ್ಷೇತ್ರದಲ್ಲಿ ನಿರಂತರವಾಗಿ ದುಡಿಯುತ್ತಿದ್ದಾರೆ ಎಂದು ಶ್ಲಾಘಿಸಿದರು.

ವಿಶ್ರಾಂತ ಪ್ರಾಚಾರ್ಯ ಪ್ರೊ| ದೇವೇಂದ್ರ ಕಮಲ್‌ ಅಧ್ಯಕ್ಷತೆ ವಹಿಸಿ ಮಾನತಾಡಿ, ಕವಿತೆಗಳು ಸಮಾಜವನ್ನು ತಿದ್ದುವಂತಿರಬೇಕು. ನೋವಿರುವ ವ್ಯಕ್ತಿಯಿಂದ ಮಾತ್ರ ಕವನ ರಚನೆ ಮಾಡಲು ಸಾಧ್ಯ. ಕವಿತೆ ರಚಿಸಲು ಅದರ ಹುಚ್ಚು ಹಿಡಿಸಿಕೊಳ್ಳಬೇಕಾಗುತ್ತದೆ. ಹೀಗಾಗಿ ನೋವು, ಕಷ್ಟ ಮತ್ತು ಅನುಭವದಿಂದ ರಚಿಸಿದ ಕವಿತೆಗಳು ಅಮರವಾಗುತ್ತವೆ. ಮೊದಲು ಬೀದರ ಜಿಲ್ಲೆಯಲ್ಲಿ ಕವಿಗಳು ಇರಲಿಲ್ಲ. ಆದರೆ ಈಗ ಒಂದು ಕಲ್ಲು ಎಸೆದರೆ ಖಂಡಿತ ಒಬ್ಬ ಕವಿ ಅಥವಾ ಕವಯಿತ್ರಿ ಮೇಲೆ ಬೀಳುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: ಕೆ.ಜಿ.ಹಳ್ಳಿ: ನಿರ್ಮಾಣದ ಹಂತದ ಕಟ್ಟಡದ ಸಂಪ್ ಗೆ ಬಿದ್ದು 14 ವರ್ಷದ ಬಾಲಕ ಸಾವು

ಕಸಾಪ ನಿಕಟಪೂರ್ವ ಕಾರ್ಯದರ್ಶಿ ಡಾ| ರಾಜಕುಮಾರ ಹೆಬ್ಟಾಳೆ ಮಾತನಾಡಿ, ಈ ಹಿಂದೆ ಕಲಾವಿದರ ಮತ್ತು ಸಾಹಿತಿಗಳ ಹಿತಕ್ಕಾಗಿ ಹಲವಾರು ಕಾರ್ಯಕ್ರಮಗಳು ನಡೆಸಲಾಗಿದೆ. ಅ. 31ರಂದು ಬಸವ ಕಲ್ಯಾಣದಲ್ಲಿ ರಾಷ್ಟ್ರೀಯ ಬಹುಭಾಷಾ ಕವಿ ಸಮ್ಮೇಳನ ಹಮ್ಮಿಕೊಳ್ಳಲಾಗುತ್ತಿದೆ. ಸುಮಾರು 8 ರಾಜ್ಯಗಳಿಂದ ಕವಿಗಳು ಆಗಮಿಸಿ ಕವನ ವಾಚನ ಮಾಡಲಿದ್ದಾರೆ ಎಂದರು.

ಪ್ರೊ| ವಜ್ರಾ ಪಾಟೀಲ, ಶ್ರೀದೇವಿ ಪಾಟೀಲ, ಬಸವರಾಜ ದಯಾಸಾಗರ, ಮಹಾರುದ್ರ ಡಾಕುಳಗೆ, ಸುನಿತಾ ಪಾಟೀಲ, ಓಂಪ್ರಕಾಶ ಧಡ್ಡೆ, ಡಾ| ಜಗದೇವಿ ತಿಬಶೆಟ್ಟಿ, ಶಾಂತಮ್ಮಾ ಬಲ್ಲೂರ, ಸಂತೋಷ ಹಡಪದ, ಡಾ| ಸಾವಿತ್ರಿಬಾಯಿ ಹೆಬ್ಟಾಳೆ, ಉಮೇಶ, ಎಸ್‌.ಬಿ. ಕುಚಬಾಳ, ಎಸ್‌.ಕೆ. ಮರಗುತ್ತಿ, ಶ್ರೀದೇವಿ ಪಾಟೀಲ ಇವರು ಕವನ ವಾಚನ ಮಾಡಿದರು. ಕಾರ್ಯಕ್ರಮದಲ್ಲಿ ಡಾ| ಜಗನ್ನಾಥ ಹೆಬ್ಟಾಳೆ, ಪ್ರೊ| ಎಸ್‌.ಬಿ. ಬಿರಾದಾರ, ಶಿವಶರಣಪ್ಪ ಗಣೇಶಪುರ, ಪ್ರಕಾಶ ಕನ್ನಾಳೆ, ಪ್ರೊ| ಎಸ್‌.ವಿ. ಕಲ್ಮಠ, ಶಿವಕುಮಾರ ಪಾಂಚಾಳ, ಶ್ರೀಧರ, ಉಮೇಶ ಇನ್ನಿತರರಿದ್ದರು.

ಧರಿನಾಡಶ್ರೀ ಪ್ರಶಸ್ತಿ ಪ್ರದಾನ

ಕವಿ ಗೋಷ್ಠಿಯಲ್ಲಿ ಧರಿನಾಡಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬಾಬುರಾವ ವಡ್ಡೆ, ಶಿವಪುತ್ರಪ್ಪ ಪಾಟೀಲ, ಡಾ| ಈಶ್ವರಯ್ಯ ಕೊಡಂಬಲ, ಡಾ| ಗವಿಸಿದ್ದಪ್ಪ ಪಾಟೀಲ, ಶ್ರೀಮತಿ ಸಾರಿಕಾ ಗಂಗಾ, ಸಂಗಮೇಶ ಜವಾದಿ, ವಿಜಯಕುಮಾರ ಪಾಟೀಲ, ಸಂಜೀವಕುಮಾರ ಸ್ವಾಮಿ, ಸಂತೋಷ ಮಂಗಳೂರೆ, ಬಸವರಾಜ ಮೂಲಗೆ, ಪ್ರಕಾಶ ದೇಶಮುಖ, ವಜ್ರಾ ಪಾಟೀಲ, ಡಾ| ಸುನಿತಾ ಕೂಡ್ಲಿಕರ್‌, ಡಾ| ಮಹಾನಂದ ಮಡಕಿ, ಸಂಜಯಕುಮಾರ ಡಾಕುಳಗಿ, ಎಸ್‌.ಬಿ. ಕುಚಬಾಳ, ಮಲ್ಲಮ್ಮ ಸಂತಾಜಿ, ಡಾ| ಜಗದೇವಿ ತಿಬಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.