ಅನ್ನದಾತರಿಗೆ ಯುವ ಇಂಜಿನಿಯರ್‌ ಕೊಡುಗೆ

ಆದರೂ ಸಕಾಲಕ್ಕೆ ಅಲ್ಲಿಯೂ ಎಲ್ಲ ರೈತರಿಗೆ ವಿವಿಧ ಯಂತ್ರಗಳು ಸಿಗುವುದು ಕಷ್ಟ.

Team Udayavani, Oct 19, 2021, 5:58 PM IST

ಅನ್ನದಾತರಿಗೆ ಯುವ ಇಂಜಿನಿಯರ್‌ ಕೊಡುಗೆ

ಸಿರುಗುಪ್ಪ: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಹೆಚ್ಚುತ್ತಿರುವ ಕೃಷಿ ಕಾರ್ಮಿಕರ ಅಭಾವ, ವ್ಯವಸಾಯದಲ್ಲಿ ಅತೀ ಹೆಚ್ಚಿನ ಖರ್ಚು ಹಾಗೂ ಸಕಾಲಕ್ಕೆ ಸಿಗದೆ ಇರುವ ಎತ್ತುಗಳ ಕೊರತೆಯಿಂದ ರೈತರು ಸಾಮಾನ್ಯವಾಗಿ ಯಂತ್ರೋಪಕರಣಗಳಿಗೆ ಮೊರೆ ಹೋಗುವುದು ಸರ್ವೇ ಸಾಮಾನ್ಯ. ಈ ಹಿನ್ನೆಲೆಯಲ್ಲಿ ಬಿತ್ತನೆಗೆ, ಅಂತರ ಬೇಸಾಯಕ್ಕೆ ಮತ್ತು ಸಿಂಪಡಣೆಗಾಗಿ ಸಿದ್ಧಪಡಿಸಿರುವ ಅನೇಕ ಯಂತ್ರಗಳನ್ನು ಕೃಷಿ ಇಲಾಖೆಯ ಕೃಷಿ ಯಂತ್ರಧಾರೆ ಕೇಂದ್ರಗಳ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯಂತ್ರಧಾರೆಗಳನ್ನು ತೆರೆದಿದೆ.

ಆದರೂ ಸಕಾಲಕ್ಕೆ ಅಲ್ಲಿಯೂ ಎಲ್ಲ ರೈತರಿಗೆ ವಿವಿಧ ಯಂತ್ರಗಳು ಸಿಗುವುದು ಕಷ್ಟ. ಇದನ್ನು ಅರಿತ ಸಿರುಗುಪ್ಪದ ಮೆಕಾನಿಕಲ್‌ ಇಂಜಿನಿಯರ್‌ ಯುನೂಸ್‌ ತಮ್ಮ ವರ್ಕಶಾಪ್‌ನಲ್ಲಿ ನೂತನ ಕೃಷಿ ಯಂತ್ರೋಪಕರಣ ತಯಾರಿಸಿದ್ದಾರೆ. ಇಂಜಿನಿಯರ ಯುನೂಸ್‌ ಕೇರಳದ ವಿಜ್ಞಾನಿಗಳೊಂದಿಗೆ ಕೈಜೋಡಿಸಿ ಟ್ರಾಕ್ಟರ್‌ ಚಾಲಿತ ಔಷ ಧಿ ಸಿಂಪಡಣಾಯಂತ್ರವನ್ನು ಅಭಿವೃದ್ಧಿಪಡಿಸಿದ್ದು ಕೃಷಿ ಇಲಾಖೆ ಮತ್ತು ಕೃಷಿ ಸಂಶೋಧನಾ ಕೇಂದ್ರದ ವಿಜ್ಞಾನಿಗಳ ಸಮ್ಮುಖದಲ್ಲಿ ಯಂತ್ರಗಳ ಪ್ರಾತ್ಯಕ್ಷಿಕೆಯನ್ನು ರೈತರ ಹೊಲದಲ್ಲಿ ಮಾಡಲಾಯಿತು.

ಟ್ರಾಕ್ಟರ್‌ ಚಾಲಿತ ಔಷಧ ಸಿಂಪಡಣಾ ಯಂತ್ರವನ್ನು ಟ್ರಾಕ್ಟರ್‌ನ ಹಿಂಭಾಗದಲ್ಲಿ ಜೋಡೆತ್ತುಗಳಿಗೆ ಬಳಸಲಾಗುವ ನೊಗದ ರೀತಿಯಲ್ಲಿ ಕಬ್ಬಿಣದ ಪೈಪ್‌ ಅಳಪಡಿಸಿ ಅದಕ್ಕೆ 500ಲೀ ಸಾಮರ್ಥ್ಯದ ಕಬ್ಬಿಣದ ಟ್ಯಾಂಕರ್‌ ಮತ್ತು ಮುಂದೆ 200 ಲೀ ಸಾ.ಕಬ್ಬಿಣದ ಟ್ಯಾಂಕರ್‌ನ್ನು ಅಳವಡಿಸಲಾಗಿದೆ. ಬೆಳೆಗಳ ಸಾಲಿಗೆ ತಕ್ಕಂತೆ ಅಳವಡಿಸಿಕೊಳ್ಳಲು ಅವಕಾಶವಿದ್ದು, 10 ಸಾಲುಗಳಲ್ಲಿ ಏಕಕಾಲಕ್ಕೆ ಔಷಧಿ ಸಿಂಪಡಣೆಯನ್ನು ಮಾಡಬಹುದಾಗಿದೆ. ಒಂದು ದಿನಕ್ಕೆ ಸುಮಾರು ನೀರಿನ ಸೌಲಭ್ಯಗನುಗುಣವಾಗಿ 40-50 ಎಕರೆಯಷ್ಟು ಔಷಧ ಸಿಂಪಡಣೆ ಮಾಡಬಹುದು. ಒಂದು ಎಕರೆ ಔಷಧಿ ಸಿಂಪಡಣೆಗೆ ಕೇವಲ ರೂ. 100ರಿಂದ 150 ಖರ್ಚು ತಗುಲುತ್ತದೆ.

ವಿಜ್ಞಾನಿಗಳ ಮಾರ್ಗದರ್ಶನದಲ್ಲಿ ನಾನು ತಯಾರಿಸಿರುವ ಕೃಷಿ ಯಂತ್ರದಿಂದ ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿರುವ ಬೆಳೆಗಳಿಗೆ ಔಷಧಿ ಸಿಂಪಡಣೆ ಮಾಡಲು ಅನುಕೂಲವಾಗುತ್ತದೆ.
ಯುನೂಸ್‌, ಯುವ ಇಂಜಿನಿಯರ್‌

ರೈತರು ಆಧುನಿಕ ಕೃಷಿಗೆ ಹೆಚ್ಚು ಆದ್ಯತೆ ನೀಡಬೇಕಾಗಿದೆ. ಯಂತ್ರೋಪಕರಣಗಳ ಬಳಕೆ ಇತ್ತೀಚಿನ ದಿನಗಳಲ್ಲಿ ಅನಿವಾರ್ಯವಾಗಿದ್ದು, ರೈತರು ಕೃಷಿ ಕ್ಷೇತ್ರದಲ್ಲಿ ಯಂತೋಪಕರಣಗಳನ್ನು ಬಳಸಿಕೊಂಡು ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಕೆಲಸ ಪಡೆಯಲು ಸಾಧ್ಯವಾಗುತ್ತದೆ. ಯುವ ಇಂಜಿನಿಯರ್‌ ತಯಾರಿಸಿರುವ ಟ್ರಾಕ್ಟರ್‌ ಚಾಲಿತ ಔಷಧ ಸಿಂಪಡಣಾಯಂತ್ರದ ಬಳಕೆಯಿಂದ ಕಡಿಮೆ ಖರ್ಚಿನಲ್ಲಿ ರೈತರು ತಮ್ಮ ಕೃಷಿ ಕೆಲಸಗಳನ್ನು ತ್ವರಿತವಾಗಿ ಮಾಡಿಕೊಳ್ಳಲು ಅನುಕೂಲವಾಗುತ್ತದೆ.
ಡಾ| ಎಂ.ಎ. ಬಸವಣ್ಣೆಪ್ಪ, ಕೃಷಿ ವಿಜ್ಞಾನಿ

ರೈತರು ಕೃಷಿಯಲ್ಲಿ ಎತ್ತುಗಳನ್ನು ಬಳಸಿ ಕೃಷಿ ಮಾಡುವುದು ವಿರಳವಾಗಿದ್ದು, ಕೃಷಿಯಲ್ಲಿ ಆಧುನಿಕ ಯಂತ್ರಗಳ ಬಳಕೆ ಹೆಚ್ಚಾಗಿದ್ದು, ಯುವ ಇಂಜಿನಿಯರ್‌ ಯುನೂಸ್‌ ತಯಾರಿಸಿದ ಕೃಷಿ ಯಂತ್ರಗಳ ಬಳಕೆಯಿಂದ ರೈತರು ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಕೆಲಸವನ್ನು ಮಾಡಬಹುದಾಗಿದೆ.
ನಜೀರ್‌ ಅಹಮ್ಮದ್‌,
ಸಹಾಯಕ ಕೃಷಿ ನಿರ್ದೇಶಕ

ಆರ್.ಬಸವರೆಡ್ಡಿ ಕರೂರು

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.