ನ್ಯಾಯ ಒದಗಿಸುವಂತೆ ರೈತರಿಂದ ಆಗ್ರಹ

ಭತ್ತ ಕಟಾವು ಯಂತ್ರ: ದುಬಾರಿ ಬಾಡಿಗೆ ದರ

Team Udayavani, Oct 20, 2021, 5:30 AM IST

ನ್ಯಾಯ ಒದಗಿಸುವಂತೆ ರೈತರಿಂದ ಆಗ್ರಹ

ಕಟಪಾಡಿ: ಒಂದೆಡೆ ಅಕಾಲಿಕ ಮಳೆ, ಮತ್ತೊಂದೆಡೆ ಉಕ್ಕೇರಿ ಹರಿದ ಹೊಳೆಯ ನೀರು ಇವೆಲ್ಲದರ ನಡುವೆ ಹರ ಸಾಹಸಪಟ್ಟು ಭತ್ತದ ಬೆಳೆಯನ್ನು ಬೆಳೆಯಲಾಗಿದ್ದು, ಇದೀಗ ಕಟಾವಿಗೆ ಯಂತ್ರ ಬಂದಿದ್ದು ಗಂಟೆ ಯೊಂದಕ್ಕೆ 2,500 ರೂ. ದುಬಾರಿ ದರ ವಿಧಿಸುತ್ತಿದ್ದು, ಮುಂದಿನ ಬಾರಿ ಭತ್ತದ ಬೇಸಾಯ ಮಾಡಬೇಕೋ ಬೇಡವೋ ಎಂಬ ಚಿಂತೆ ಕಾಡುತ್ತಿದೆ ಎಂದು ಮಟ್ಟು ಭಾಗದ ರೈತರು ಹತಾಶ ಭಾವನೆಯನ್ನು ವ್ಯಕ್ತಪಡಿಸುತ್ತಿದ್ದಾರೆ.

ಒಂದೆಡೆ ಗದ್ದೆಗಳನ್ನು ಹಡಿಲು ಬಿಟ್ಟಲ್ಲಿ ಸರಕಾರ ಕ್ರಮ ತೆಗೆದುಕೊಳ್ಳುವ ಭೀತಿ, ಬೇಸಾಯ ಕೈಗೊಂಡರೆ ನಷ್ಟವನ್ನು ಅನುಭವಿಸುವ ಸಂಕಷ್ಟ. ಇದರ ನಡುವೆ ಉಭಯ ಸಂಕಟವನ್ನು ಅನುಭವಿಸುವ ಮಟ್ಟು ಭಾಗದ ರೈತರು ಈ ಬಗ್ಗೆ ಇಲಾಖಾಧಿಕಾರಿಗಳು, ಜಿಲ್ಲಾಧಿಕಾರಿಗಳು ಸೂಕ್ತ ನ್ಯಾಯವನ್ನು ಒದಗಿಸುವಂತೆ ಭತ್ತದ ಬೇಸಾಯ ನಡೆಸುವ ವಸಂತ ಸುವರ್ಣ, ಹರೀಶ್‌ ಮಟ್ಟು, ಉದಯ ಬಂಗೇರ, ಸಂತೋಷ್‌ ಎಸ್‌. ಮಟ್ಟು, ಯಶ್‌ವಂತ್‌ ಮತ್ತಿತರರು ಆಗ್ರಹಿಸಿದ್ದಾರೆ.

ಸರಕಾರದ ಕಟಾವು ಯಂತ್ರಕ್ಕೆ ಗಂಟೆಗೆ 1,800 ರೂ. ದರವನ್ನು ಜಿಲ್ಲಾಧಿಕಾರಿ ಅವರು ನಿಗದಿಪಡಿಸಿದ್ದರೂ ಇದೀಗ ಕಟಾವಿಗೆ ಬರುತ್ತಿರುವ ಹೊರ ಜಿಲ್ಲೆ, ಹೊರ ರಾಜ್ಯಗಳ ಯಂತ್ರಗಳು ದುಬಾರಿ ದರ ವಿಧಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿದ್ದು, ಹೆಚ್ಚುವರಿ ಕಟಾವು ಯಂತ್ರಗಳನ್ನು ಕಡಿಮೆ ಬಾಡಿಗೆ ದರದಲ್ಲಿ ರೈತರಿಗೆ ಒದಗಿಸುವಂತೆ ವಿನಂತಿಸಿದ್ದಾರೆ.

ಇದನ್ನೂ ಓದಿ:“ಕೋವಿಡ್ 2ನೇ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡಿ’ : ರಾಜ್ಯಕ್ಕೆ ಕೇಂದ್ರ ಸರ್ಕಾರ ಸೂಚನೆ

ನಿಗದಿಗಿಂತ ಹೆಚ್ಚಿನ ದರ ಕೇಳುತ್ತಿದ್ದಾರೆ…
ಕಟಾವು ಯಂತ್ರಕ್ಕೆ ಗಂಟೆಗೆ 1,800 ರೂ. ಎಂದು ಘೋಷಣೆ ಮಾಡಿದ್ದರೂ, ಇಲ್ಲಿ ಇದೀಗ ಬಂದ ಕಟಾವು ಯಂತ್ರವು ಗಂಟೆಗೆ 2,500 ರೂ. ದರವನ್ನು ಕೇಳುತ್ತಿದ್ದಾರೆ. ಈಗ ಯಾವ ರೀತಿಯಲ್ಲಿ ಬೇಸಾಯ ಮಾಡುವುದು ಎಂದು ಚಿಂತೆಗೀಡಾಗಿದ್ದೇನೆ. ಡಿಸಿ ಅವರ ಆದೇಶ ಕೇಳುವವರೇ ಇಲ್ಲವಾಗಿದೆ. ರೈತರ ಬಗ್ಗೆ ಕಾಳಜಿಯೇ ಇಲ್ಲ.
-ಉದಯ ವಿ. ಬಂಗೇರ, ಕೃಷಿಕರು, ಮಟ್ಟು

ರೈತರಿಗೆ ಬೆನ್ನೆಲುಬಾಗಿ ನಿಲ್ಲಬೇಕು
2-3 ಎಕರೆ ಭತ್ತದ ಬೇಸಾಯ ನಡೆಸುತ್ತಿದ್ದೇನೆ. ಆದರೂ ಸಮಸ್ಯೆ ತಪ್ಪುತ್ತಿಲ್ಲ. ಜಿಲ್ಲಾಧಿಕಾರಿಯ ಕಟಾವು ಯಂತ್ರದ ಬಾಡಿಗೆ ದರ ನಿಗದಿಯು ಕೇವಲ ಆದೇಶಕ್ಕೆ ಸೀಮಿತವಾಗಿರದೆ ಹೆಚ್ಚುವರಿಯಾಗಿ ಕಟಾವು ಯಂತ್ರಗಳನ್ನು ಒದಗಿಸಿ ರೈತರಿಗೆ ಬೆನ್ನೆಲುಬಾಗಿ ನಿಲ್ಲಬೇಕು ಎಂಬುದು ನಮ್ಮ ಮನವಿ.
– ಸಂತೋಷ್‌ ಮಟ್ಟು, ಕೃಷಿಕರು, ಮಟ್ಟು

ಖಾಸಗಿ ಕಟಾವು ಯಂತ್ರಗಳಿಗೆ ಅನ್ವಯಿಸಲ್ಲ
ಕಾಪು ತಾಲೂಕಿನಲ್ಲಿ ಕೃಷಿ ಕೇಂದ್ರದ ರೈತರಿಗೆ ಸೇವೆಯನ್ನು ನೀಡಲು ಸಿ.ಎಚ್‌.ಎಸ್‌ .ಮೂಲಕ ಒಂದು ಕಟಾವು ಯಂತ್ರ ಇದೆ. ಜಿಲ್ಲಾಧಿಕಾರಿ ಅವರು ಕಟಾವು ಯಂತ್ರದ ಬಾಡಿಗೆ ದರವನ್ನು 1,800 ರೂ. ಎಂದು ನಿಗದಿಪಡಿಸಿದ್ದಾರೆ. ಅದನ್ನು ಬುಕ್ಕಿಂಗ್‌ ಮಾಡಿದಲ್ಲಿ ಸೀನಿಯಾರಿಟಿ ಮೇಲೆ ಸೇವೆಯನ್ನು ಕೊಡಲಾಗುತ್ತದೆ. ರೈತರು ಖಾಸಗಿಯಾಗಿ ಬ್ರೋಕರ್‌ ಮೂಲಕ ತರಿಸುವ ಕಟಾವು ಯಂತ್ರದ ಬಾಡಿಗೆ ದರ ಹೆಚ್ಚು ಪಡೆದುಕೊಳ್ಳುವ ಬಗ್ಗೆ ಕ್ರಮ ಕೈಗೊಳ್ಳಲು ಅವಕಾಶ ಇಲ್ಲ. ಖಾಸಗಿ ಕಟಾವು ಯಂತ್ರಗಳಿಗೆ ದರ ಕಡಿಮೆ ಮಾಡುವಂತೆ ಹೇಳುವಂತಿಲ್ಲ.
-ಪುಷ್ಪಲತಾ, ಕೃಷಿ ಅಧಿಕಾರಿ, ಕಾಪು ತಾಲೂಕು ಕೃಷಿ ಕೇಂದ್ರ

ಟಾಪ್ ನ್ಯೂಸ್

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.