ದಿಟ್ಟ ನಿಲುವಿಗೆ ಇಂದಿರಾ ಗಾಂಧಿಯವರನ್ನೂ ಹೊಗಳಿದ್ದೆವು : ಸಚಿವ ಕೆ.ಎಸ್. ಈಶ್ವರಪ್ಪ


Team Udayavani, Oct 20, 2021, 3:24 PM IST

eshwarappa

ಶಿವಮೊಗ್ಗ:’ನಾವು ಕಾಂಗ್ರೆಸ್ ನ ರಾಷ್ಟ್ರೀಯ ನಾಯಕರಿಗೆ ಹಗುರವಾಗಿವಾಗಿ ಇದುವರೆಗೂ ಟೀಕೆ ಮಾಡಿಲ್ಲ.ಪಾಕಿಸ್ತಾನದ ವಿರುದ್ಧ ತೆಗೆದುಕೊಂಡಿದ್ದ ದಿಟ್ಟ ನಿಲುವಿಗೆ ಆಗಿನ ಪ್ರಧಾನಿ ಇಂದಿರಾ ಗಾಂಧಿಯವರನ್ನು ಹೊಗಳಿದ್ದೆವು’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಬುಧವಾರ ಹೇಳಿಕೆ ನೀಡಿದ್ದಾರೆ.

ರಾಹುಲ್ ಗಾಂಧಿಯವರ ಬಗ್ಗೆ ನಳಿನ್ ಕುಮಾರ್ ಕಟೀಲ್ ಅವರು ನೀಡಿದ ಹೇಳಿಕೆ ನೀಡಿದ ವಿಚಾರಕ್ಕೆ ಸುದ್ದಿಗಾರರಿಗೆ ಈ ಪ್ರತಿಕ್ರಿಯೆ ನೀಡಿದ್ದಾರೆ.

‘ಕಾಂಗ್ರೆಸ್ ನವರು ಬಹಳ ನೋವಿನಿಂದ ಟೀಕೆ ಮಾಡುತ್ತಿದ್ದಾರೆ.ಬಿಜೆಪಿ ಕೇವಲ ಅನಿಸಿಕೊಳ್ಳಲು ಮಾತ್ರ ಇಲ್ಲ’ ಎಂದರು.

‘ಆಗಿನ ವಿಪಕ್ಷ ನಾಯಕರಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು, ಇಂದಿರಾಗಾಂಧಿಯವರನ್ನು ದುರ್ಗೆ ಎಂದು ಹೊಗಳಿದ್ದರು. ಆದರೆ, ವಿಶ್ವವೇ ಮೆಚ್ಚಿರುವ ನಾಯಕ, ಪ್ರಧಾನಿ ನರೇಂದ್ರ ಮೋದಿಯವರಿಗೆ ಹೆಬ್ಬೆಟ್ ಗಿರಾಕಿ ಎಂದು ಕಾಂಗ್ರೆಸ್ ನವರು ಟೀಕೆ ಮಾಡಿದ್ದಾರೆ. ಕಾಂಗ್ರೆಸ್ ನವರು ಸೊಕ್ಕಿನಿಂದ ಮಾತನಾಡುತ್ತಾರಲ್ಲಾ.ಹೀಗೆ ಹೇಳಿದಾಗ ನಾವೇನು ಮಂಡಕ್ಕಿ ತಿನ್ನುತ್ತಾ ಕೂರಬೇಕಾ’ ಎಂದು ಕಿಡಿಕಾರಿದರು.

‘ಮೋದಿಗೆ ಟೀಕೆ ಮಾಡಿದ್ದು ಇಡೀ ದೇಶದ, ಪ್ರಪಂಚದ ಜನರಿಗೆ ಇಂತಹ ಹೇಳಿಕೆ ನೋವಾಗಿದೆ. ರಾಹುಲ್ ಗಾಂಧಿ ಬಗ್ಗೆ ಡ್ರಗ್ಸ್ ಪೆಡ್ಲರ್ ಎಂದು ಹೇಳಿದ ಕೂಡಲೇ, ಕಾಂಗ್ರೆಸ್ ನವರ ಹೇಳಿಕೆಗಳು ಬರತೊಡಗಿವೆ.ಕಟೀಲು ಅವರಿಗೆ ನಿಮಾನ್ಸ್ ಗೆ ಸೇರಿಸಿ ಎಂದು ಹೇಳುತ್ತಿದ್ದಾರೆ. ನರೇಂದ್ರ ಮೋದಿಯವರನ್ನು ಟೀಕೆ ಮಾಡಿದ ಅವರಿಗೆ ಯಾವ ಆಸ್ಪತ್ರೆಗೆ ಸೇರಿಸಬೇಕು’ ಎಂದು ಪ್ರಶ್ನಿಸಿದರು.

‘ಸಿದ್ದರಾಮಯ್ಯರಿಗೆ ಯಾವ ಆಸ್ಪತ್ರೆಗೆ ಸೇರಿಸಿದರೂ ಹುಚ್ಚು ವಾಸಿಯಾಗಲ್ಲ’ ಎಂದರು.

‘ನಾವು ಕಾಂಗ್ರೆಸ್ ರಾಷ್ಟ್ರೀಯ ನಾಯಕರುಗಳಿಗೆ ಈ ರೀತಿ ಪದಗಳನ್ನು ಯಾರಿಗೂ ಬಳಸಿದವರಲ್ಲ.ಪ್ರಧಾನಿ ಮೋದಿಯವರಿಗೆ ಟೀಕೆ ಮಾಡಿದ್ದಕ್ಕೆ, ನಮ್ಮ ರಾಜ್ಯಾಧ್ಯಕ್ಷರು, ತಿರುಗೇಟು ನೀಡಿದ್ದಾರಷ್ಟೇ’ ಎಂದರು.

‘ಇದೇ ರೀತಿ ಮುಂದುವರೆಸಿದರೆ, ಈ ರೀತಿ ಹಗುರವಾಗಿ ಮಾತನಾಡಿದರೆ, ನಾವು ಬೇರೆ ಬೇರೆ ರೀತಿಯ ಪದಗಳನ್ನು ನಾವು ಬಳಸಬೇಕಾಗುತ್ತದೆ. ನರೇಂದ್ರ ಮೋದಿಯವರ ಬಗ್ಗೆ ಟೀಕೆ ಮಾಡಿದ ಸಿದ್ಧರಾಮಯ್ಯನವರು, ದೇಶದ ಕ್ಷಮೆ ಕೋರಲಿ.ಕಟೀಲು ಅವರ ಭಾವಚಿತ್ರ ಸುಟ್ಟು ಹಾಕಿದರೆ, ನಾವೇನು ಬೆದರಲ್ಲ.ನಾವು ಶಕ್ತಿಶಾಲಿಯಾಗಿ ಬೆಳೆದಿದ್ದೆವೆ.ಇಡೀ ದೇಶವೇ ನಾವು ಆಳುತ್ತಿದ್ದೆವೆ. ಎಲ್ಲಿದೆ ಕಾಂಗ್ರೆಸ್’ ಎಂದು ಪ್ರಶ್ನಿಸಿದರು.

‘ರಾಷ್ಟ್ರೀಯ ಅಧ್ಯಕ್ಷನ ಆಯ್ಕೆ ಮಾಡುವ ಯೋಗ್ಯತೆ ಇಲ್ಲದವರು ಮೋದಿಯವರ ಬಗ್ಗೆ ಮಾತನಾಡುತ್ತಿದ್ದಾರೆ’ ಎಂದರು.

‘ಆರ್.ಎಸ್.ಎಸ್. ಬಗ್ಗೆ ಮಾಜಿ ಸಿ.ಎಂ. ಕುಮಾರಸ್ವಾಮಿ ಟೀಕೆ ಕೂತಿರುವ ಒಬ್ಬ ಕುಂಟನಿಗೆ ಏಳುವ ಶಕ್ತಿ ಇರುವುದಿಲ್ಲ.ಅಂತಹ ಕುಂಟ, ಪೈಲ್ವಾನನಿಗೆ ಎದ್ದು ಬಂದು ಜಾಡಿಸಿ ಒದೆಯುತ್ತೆನೆ ಎಂದು ಹೇಳುತ್ತಾನೆ. ಆದರೆ, ಆ ಕುಂಟನಿಗೆ ಎದ್ದೆಳಲು ಕೂಡ ಶಕ್ತಿ ಇರುವುದಿಲ್ಲ.ಅಂತಹ ಪರಿಸ್ಥಿತಿ ಜೆಡಿಎಸ್ ದ್ದಾಗಿದೆ’ ಎಂದು ಲೇವಡಿ ಮಾಡಿದರು.

‘ಆರ್ ಎಸ್ಎಸ್ ಈಗ ಸೂರ್ಯನಷ್ಟು ಬೆಳೆದಿದೆ.ಆರ್ ಎಸ್ಎಸ್ ಪ್ರಪಂಚದಲ್ಲಿಯೇ, ಸಂಸ್ಕೃತಿ ಬೆಳೆಸುವ ದೊಡ್ಡ ಸಂಘಟನೆ. ಸೂರ್ಯನಿಗೆ ಉಗಿಯುವ ಕೆಲಸ ಇವರು ಮಾಡುತ್ತಿದ್ದಾರೆ. ಸಿದ್ಧರಾಮಯ್ಯರಿಗೆ ಮತ್ತು ಕುಮಾರಸ್ವಾಮಿಯವರಿಗೆ ಆರ್ ಎಸ್ಎಸ್ ನ ಒಂದು ಕೂದಲು ಕೂಡ ಅಲ್ಲಾಡಿಸಲು ಆಗುವುದಿಲ್ಲ’ ಎಂದರು.

ಟಾಪ್ ನ್ಯೂಸ್

Udupi Gang war; Did the failure of the beat system lead to the incident?

Udupi Gang war; ಬೀಟ್‌ ವ್ಯವಸ್ಥೆ ಲೋಪವೇ ಘಟನೆಗೆ ಕಾರಣವಾಯಿತೇ?

SUNಕನ್ನಡ ಜಾನಪದ ಚಿತ್ರಕ್ಕೆ ಲಾ ಸಿನೆಫ್ ಗೌರವ

ಕನ್ನಡ ಜಾನಪದ ಚಿತ್ರಕ್ಕೆ ಲಾ ಸಿನೆಫ್ ಗೌರವ

Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

Pune-Bangalore ಹೊಸ ಹೆದ್ದಾರಿಗೆ ಚಾಲನೆ ನೀಡಲು ಸಿದ್ಧತೆ

Pune-Bangalore ಹೊಸ ಹೆದ್ದಾರಿಗೆ ಚಾಲನೆ ನೀಡಲು ಸಿದ್ಧತೆ

bjp-jdsವಿಧಾನಪರಿಷತ್‌ ಚುನಾವಣೆ; ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆ

ವಿಧಾನಪರಿಷತ್‌ ಚುನಾವಣೆ; ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆ

ಎಲ್ಲ ಠಾಣೆಗಳಲ್ಲಿಯೂ ಸೈಬರ್‌ ಪ್ರಕರಣ ದಾಖಲು

ಎಲ್ಲ ಠಾಣೆಗಳಲ್ಲಿಯೂ ಸೈಬರ್‌ ಪ್ರಕರಣ ದಾಖಲು

1-24-sunday

Daily Horoscope: ವ್ಯವಹಾರಸ್ಥರಿಗೆ ಅನಿರೀಕ್ಷಿತ ಮೂಲದಿಂದ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Gang war; Did the failure of the beat system lead to the incident?

Udupi Gang war; ಬೀಟ್‌ ವ್ಯವಸ್ಥೆ ಲೋಪವೇ ಘಟನೆಗೆ ಕಾರಣವಾಯಿತೇ?

bjp-jdsವಿಧಾನಪರಿಷತ್‌ ಚುನಾವಣೆ; ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆ

ವಿಧಾನಪರಿಷತ್‌ ಚುನಾವಣೆ; ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆ

ಸಿನೆಮಾ ತಾರೆಯರಿಗೆ ಒತ್ತಡ ಹೇರಬೇಡಿ: ರವಿಚಂದ್ರನ್‌

ಸಿನೆಮಾ ತಾರೆಯರಿಗೆ ಒತ್ತಡ ಹೇರಬೇಡಿ: ರವಿಚಂದ್ರನ್‌

41

MLC Election: ಮೇಲ್ಮನೆಯಲ್ಲಿ ಏಳು ಸ್ಥಾನಗಳು ಕಾಂಗ್ರೆಸ್‌ನಲ್ಲಿ 70 ಆಕಾಂಕ್ಷಿಗಳು

Ultrasound room: ಅಲ್ಟ್ರಾಸೌಂಡ್‌ ಕೊಠಡಿಗೆ ಗರ್ಭಿಣಿ ಹೊರತು ಅನ್ಯರಿಗೆ ಪ್ರವೇಶವಿಲ್ಲ

Ultrasound room: ಅಲ್ಟ್ರಾಸೌಂಡ್‌ ಕೊಠಡಿಗೆ ಗರ್ಭಿಣಿ ಹೊರತು ಅನ್ಯರಿಗೆ ಪ್ರವೇಶವಿಲ್ಲ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Udupi Gang war; Did the failure of the beat system lead to the incident?

Udupi Gang war; ಬೀಟ್‌ ವ್ಯವಸ್ಥೆ ಲೋಪವೇ ಘಟನೆಗೆ ಕಾರಣವಾಯಿತೇ?

SUNಕನ್ನಡ ಜಾನಪದ ಚಿತ್ರಕ್ಕೆ ಲಾ ಸಿನೆಫ್ ಗೌರವ

ಕನ್ನಡ ಜಾನಪದ ಚಿತ್ರಕ್ಕೆ ಲಾ ಸಿನೆಫ್ ಗೌರವ

Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

Pune-Bangalore ಹೊಸ ಹೆದ್ದಾರಿಗೆ ಚಾಲನೆ ನೀಡಲು ಸಿದ್ಧತೆ

Pune-Bangalore ಹೊಸ ಹೆದ್ದಾರಿಗೆ ಚಾಲನೆ ನೀಡಲು ಸಿದ್ಧತೆ

bjp-jdsವಿಧಾನಪರಿಷತ್‌ ಚುನಾವಣೆ; ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆ

ವಿಧಾನಪರಿಷತ್‌ ಚುನಾವಣೆ; ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.