ಸೊರಬ: ಸಂಭ್ರಮದ ಸೀಗೆ ಹುಣ್ಣಿಮೆ ಆಚರಣೆ


Team Udayavani, Oct 20, 2021, 7:31 PM IST

soraba news

ಸೊರಬ: ಭೂಮಿ ತಾಯಿಗೆ ಪೂಜೆ ಸಲ್ಲಿಸಿ, ಸಂಪ್ರದಾಯದಂತೆ ಭೂತಾಯಿಗೆ ಉಡಿ ತುಂಬುವ ಸೀಗೆಹುಣ್ಣಿಮೆಯನ್ನು ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಬುಧವಾರ ರೈತರು ಸಂಭ್ರಮದಿಂದ ಆಚರಿಸಿದರು.

ಎತ್ತಿನ ಗಾಡಿ, ಟ್ರ್ಯಾಕ್ಟರ್ ಇತ್ಯಾದಿ ವಾಹನಗಳನ್ನು ಶೃಂಗರಿಸಿ ಹೊಲಕ್ಕೆ ತೆರಳಿ ಅಲ್ಲಿ ಬೆಳೆದು ನಿಂತ ಫಸಲಿಗೆ ಪೂಜೆ ಸಲ್ಲಿಸಿ, ನಂತರ ಭೂ ತಾಯಿಗೆ ಉಡಿ ತುಂಬಿ ನೈವೇದ್ಯ ಅರ್ಪಿಸಿದರು. ಮುಂಜಾನೆ ಗದ್ದೆ ಹೊಲಗಳಿಗೆ ತೆರಳಿ ಚರಗ ಚೆಲ್ಲಿದರು.

ಭೂಮಿಯನ್ನು ಹೆಣ್ಣಿನಂತೆ ಗೌರವಿಸಿ, ಗರ್ಭಿಣಿಗೆ ಸೀಮಂತಶಾಸ್ತ್ರ ಮಾಡುವಂತೆ, ತೆನೆಯೊಡೆಯುವ ಬೆಳೆಗೆ ಕೃಷಿ ಕುಟುಂಬಗಳು ಪೂಜೆ ಸಲ್ಲಿಸಿ ಎಡೆ ಅರ್ಪಿಸುವ ಸಂಪ್ರದಾಯ ಮಲೆನಾಡ ಭಾಗದಲ್ಲಿದೆ. ಮುಂಜಾನೆಯೇ ಅಲಂಕೃತ ಭೂಮಣ್ಣಿ ಬುಟ್ಟಿಯಲ್ಲಿ ಚರಗವನ್ನು ತುಂಬಿಕೊಂಡು ರೈತರು ’ಹಚ್ಚಂಬ್ಲಿ ಹರಬಿಸೊಪ್ಪು ಹಿತ್ತಲಾಗಿರೋ ದಾರಿರೆಕಾಯಿ ಭೂಂಕವ್ವನ ಬಯ್ಕೆಬಾನ ಎದ್ದೆದ್ ಉಣ್ಣೆ ಭೂಂಕವ್ವೋ.. ಹೋಯ್ ಹೋಯ್’ ಎಂದು ಕೂಗುತ್ತಾ ಹೊಲಕ್ಕೆಲ್ಲಾ ಚೆಲ್ಲಿದರು.

ಮಧ್ಯಾಹ್ನ 12 ಗಂಟೆ ನಂತರ ತಮ್ಮ ಕುಟುಂಬದವರೆಲ್ಲರೂ ತಮ್ಮ ಬೆಳೆಗೆ ಸೀರೆ-ಕುಬಸ, ತಾಳಿ, ಮೂಗುತಿ ತೊಡಿಸಿ ವಿಶೇಷ ಪೂಜೆ ಸಲ್ಲಿಸಿ ಅಲ್ಲಿಯೇ ಊಟ ಮಾಡಿದರು. ಬೆಳೆಗೆ, ಗೂಳಿ(ಕಾಗೆ)ಗೆ, ಇಲಿಗಳಿಗೆ ಒಂದೊಂದು ಎಡೆ ನೀಡಿದರು. ಒಂದು ಕೊಟ್ಟೆ ಕಡುಬನ್ನು ಜಮೀನಿನಲ್ಲಿ ಹೂತು, ಆ ಜಮೀನಿನ ಬೆಳೆಯನ್ನು ಒಕ್ಕಲು ಮಾಡುವ ಸಂದರ್ಭದಲ್ಲಿ ಕಿತ್ತು ತಿನ್ನುವ ಸಂಪ್ರದಾಯ ಮಲೆನಾಡಿನವರದ್ದಾಗಿದೆ.

ಸೀಗೆಹುಣ್ಣಿಮೆಗೆ ವಿಶೇಷವಾಗಿ ಹೋಳಿಗೆ, ಕೊಟ್ಟೆಕಡುಬು, ಸಿಹಿ ಕಡುಬು, ಸಾಂಬಾರು ಬುತ್ತಿ, ಕಜ್ಜಾಯ, ಹುಳಿ ಚಿತ್ರನ್ನ, ಮೊಸರಿನ ಬುತ್ತಿ, ಕರ್ಚಿಕಾಯಿ, ರೊಟ್ಟಿ, ಕಟಕಲು ರೊಟ್ಟಿ, ಪುಂಡಿ ಪಲ್ಯೆ, ಎಣಗಾಯಿ ಪಲ್ಯೆ, ಕಿಚಡಿ, ಅಕ್ಕಿಹುಗ್ಗಿ, ಚೆಟ್ನಿ, ಕರಿಂಡಿ, ಇತ್ಯಾದಿ ಭಕ್ಷ್ಯಗಳನ್ನು ತಯಾರಿಸಿ ಮನೆಯ ಮಂದಿಯ ಜೊತೆಗೆ ಸುತ್ತಮುತ್ತಲಿನ ಜನರನ್ನು ಕರೆದುಕೊಂಡು ಹೊಲಗಳಿಗೆ ತೆರಳಿ ಭೋಜನ ಮಾಡಿದರು.

ಹೊಲ, ಗದ್ದೆ, ತೋಟಗಳಲ್ಲಿ ಫಸಲು ಉತ್ತಮವಾಗಿ ಬರಲಿ, ನಾಡಿನಲ್ಲಿ ಸಮೃದ್ಧಿ ನೆಲೆಸಲಿ ಎಂದು ರೈತರು ಭೂ ತಾಯಿಯನ್ನು ಪ್ರಾರ್ಥಿಸಿದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.