ಜೈಲಿಗೆ ಬಂದು ಪುತ್ರನ ಭೇಟಿಯಾದ ಶಾರುಖ್; ಹೈಕೋರ್ಟ್ ನಲ್ಲಿ ಜಾಮೀನು?
Team Udayavani, Oct 21, 2021, 11:18 AM IST
ಮುಂಬಯಿ: ಡ್ರಗ್ಸ್ ಸೇವನೆ ಹಿನ್ನೆಲೆಯಲ್ಲಿ ಆರ್ಥರ್ ರೋಡ್ ಜೈಲಿನಲ್ಲಿರುವ ಪುತ್ರ ಆರ್ಯನ್
ಖಾನ್ನನ್ನು ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಗುರುವಾರ ಭೇಟಿಯಾಗಿ ಮಾತುಕತೆ ನೆಡೆಸಿದ್ದಾರೆ.
ಜಾಮೀನು ನೀಡಲು ಮುಂಬಯಿಯ ವಿಶೇಷ ನ್ಯಾಯಾಲಯ ನಿರಾಕರಿಸಿದ ಹಿನ್ನಲೆಯಲ್ಲಿ ಆರ್ಯನ್ ಪರ
ವಕೀಲರು ಬಾಂಬೆ ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಬಾಂಬೆ ಹೈಕೋರ್ಟ್ ಅಕ್ಟೋಬರ್ 26 ರಂದು ಜಾಮೀನು ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ನಿರ್ಧರಿಸಿದ್ದರಿಂದ ಆರ್ಯನ್ ಕನಿಷ್ಠ 5 ದಿನಗಳ ಕಾಲ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲೇ ಇರಬೇಕಾಗಿದೆ.
ಆರ್ಯನ್ ಬಂಧನದ ಬಳಿಕ ಇದೆ ಮೊದಲ ಬಾರಿ ಶಾರುಖ್ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು, ಪುತ್ರನ ಭೇಟಿಗಾಗಿ ಜೈಲಿಗೆ ಆಗಮಿಸಿದ್ದಾರೆ.
“ಆರ್ಯನ್ ಡ್ರಗ್ಸ್ ಸಂಬಂಧಿ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದಾರೆ ಎನ್ನಲು ಅವರ ವಾಟ್ಸ್ಆ್ಯಪ್ ಚಾಟ್ನಲ್ಲಿ ಸಾಕ್ಷಿಗಳಿವೆ. ಹಾಗಾಗಿ ಅವರನ್ನು ಬಿಡುಗಡೆಗೊಳಿಸಲು ಸಾಧ್ಯವಿಲ್ಲ.ಬಿಡುಗಡೆ ಮಾಡಿದ ಮೇಲೆ ಅವರು ಇದೇ ಕೃತ್ಯವನ್ನು ಮುಂದುವರಿಸುವುದಿಲ್ಲ ಎನ್ನುವುದಕ್ಕೂ ಆಧಾರವಿಲ್ಲ’ ಎಂದು ನ್ಯಾಯಾಲಯ ಹೇಳಿತ್ತು.
“ಆರ್ಯನ್ ದೊಡ್ಡ ಜಾಲದ ಭಾಗವಾಗಿದ್ದಾರೆ. ಅವರ ವಾಟ್ಸ್ ಆ್ಯಪ್ ಚಾಟಿಂಗ್ನಲ್ಲಿ ಸಾಬೀತಾಗಿದೆ. ಹಿಂದೆಯೂ ಅದನ್ನೇ ಮಾಡಿರುವುದಕ್ಕೆ ಸಾಕ್ಷ್ಯಗಳಿವೆ. ಅವರು ಡ್ರಗ್ ಸಾಗಣೆದಾರರೊಂದಿಗೆ ಸಂಬಂಧ ಹೊಂದಿರುವುದು ಖಚಿತವಾಗಿದೆ’ ಎಂದು ನ್ಯಾಯಾಧೀಶರು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ