ಎಸ್‌ಟಿ ವರ್ಗಕ್ಕೆ ಶೇ.7.5 ಮೀಸಲು ಕಲ್ಪಿಸಿ


Team Udayavani, Oct 21, 2021, 12:09 PM IST

ವಾಲ್ಮೀಕಿ ಜಯಂತಿ

ಮೈಸೂರು: ಪರಿಶಿಷ್ಟ ಪಂಗಡಕ್ಕೆ ಪರಿವಾರ ಜನಾಂಗವನ್ನು ಸೇರಿಸಲಾಗಿದ್ದು, ಫ‌ಲಾನುಭವಿಗಳಿಗೆ ಜಾತಿ ಪ್ರಮಾಣ ನೀಡಲು ಅಧಿಕಾರಿಗಳು ಸತಾಯಿಸಬಾರದು. ಯಾವುದೇ ತೊಂದರೆ ನೀಡದೇ ಸಿಂಧುತ್ವ ಮಾಡಿಕೊಡಬೇಕು ಎಂದು ಶಾಸಕ ಜಿ.ಟಿ. ದೇವೇಗೌಡ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮೈಸೂರು ನಗರ ಮತ್ತು ತಾಲೂಕು ನಾಯಕ ಜನಾಂಗದ ಸಂಘಗಳ ಸಹಯೋಗದಲ್ಲಿ ಬುಧವಾರ ಕಲಾಮಂದಿರದ ಕಿರುರಂಗಮಂದಿರದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಮಾತನಾಡಿದರು.

ತಳವಾರ-ಪರಿಹಾರ ಸಮಾಜವನ್ನು ಎಸ್‌ಟಿಗೆ ಸೇರಿಸಬೇಕೆಂದು 1988-89ರಲ್ಲಿ ನಿಯೋಗ ಹೋಗಿದ್ದೆವು. ಆಗ ಕೆಲವು ಸಂಗತಿಗಳು ಬಿಟ್ಟು ಹೋದ ಕಾರಣ ಸಮಸ್ಯೆಯಾಯಿತು. ಸದ್ಯಕ್ಕೆ ಈಗ ಪರಿಶಿಷ್ಟ ಪಂಗಡಕ್ಕೆ ಪರಿವಾರ ಜನಾಂಗವನ್ನು ಸೇರಿಸಲಾಗಿದೆ. ಆದರೆ, ಫ‌ಲಾನುಭವಿಗಳಿಗೆ ಜಾತಿ ಪ್ರಮಾಣ ನೀಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ ದೂರುಗಳು ಬಂದಿವೆ.

ಅಧಿಕಾರಿಗಳು ಯಾವುದೇ ತೊಂದರೆ ನೀಡದೇ ಸಿಂಧುತ್ವ ಮಾಡಿಕೊಡಬೇಕು. ಜತೆಗೆ ಈ ಹಿಂದೆ ಎಸ್‌ಟಿ ಪ್ರಮಾಣ ಪತ್ರ ಪಡೆದಿರುವವರ ಮೇಲೆ ದಾಖಲಾಗಿರುವ ಪ್ರಕರಣವನ್ನು ರಾಜ್ಯ ಸರ್ಕಾರ ವಾಪಸ್‌ ಪಡೆಯಬೇಕು. ಈ ವಿಚಾರವನ್ನು ಕ್ಯಾಬಿನೆಟ್‌ನಲ್ಲಿ ಚರ್ಚಿಸಲಾಗುವುದು. 30ರ ಬಳಿಕ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಈ ಕುರಿತು ಮನವಿ ಸಲ್ಲಿಸುವುದಾಗಿ ತಿಳಿಸಿದರು.

ಇದನ್ನೂ ಓದಿ;- ಡಿಸಿಸಿ ಬ್ಯಾಂಕ್‌ ನಿರ್ದೇಶಕರಾಗಿ ಕಲ್ಯಾಣಪ್ಪ ಮಳಖೇಡ

 ನಿರ್ಣಯ: ತೀರ ಹಿಂದುಳಿದುವರು ಹಾಗೂ ದುಡಿಯುವ ವರ್ಗ ಪರಿಶಿಷ್ಟ ಪಂಗಡಕ್ಕೆ ಶೇ.7.5 ಮೀಸಲು ನೀಡಬೇಕೆಂದು ಸಮುದಾಯ ಸ್ವಾಮೀಜಿಗಳ ನೇತೃತ್ವದಲ್ಲಿ ಹೋರಾಟ ನಡೆದಿದೆ. ಇದಕ್ಕೆ ನಮ್ಮ ಬೆಂಬಲವಿದೆ. ಸರ್ಕಾರ ಕೂಡಲೇ ಈ ಬಗ್ಗೆ ನಿರ್ಣಯ ತೆಗದುಕೊಳ್ಳಬೇಕು. ಸಂಸದ ಪ್ರತಾಪ್‌ಸಿಂಹ ಸಹ ಕೇಂದ್ರದಲ್ಲಿ ಈ ಬಗ್ಗೆ ದನಿ ಎತ್ತಬೇಕು ಎಂದು ಒತ್ತಾಯಿಸಿದರು. ಕಾರ್ಯಕ್ರಮದಲ್ಲಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಈ ವೇಳೆ ಮೇಯರ್‌ ಸುನಂದ ಪಾಲನೇತ್ರ, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ. ಶಿವಣ್ಣ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್‌, ಎಸ್ಪಿ ಆರ್‌. ಚೇತನ್‌, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಆರ್ಥಿಕ ಸಲಹೆಗಾರ ಕೆ.ಮಹದೇವನಾಯಕ, ಸಮುದಾಯ ಮುಖಂಡ ಕೆಂಪನಾಯಕ, ವಾಲ್ಮೀಕಿ ಅಭಿವೃದ್ಧಿ ಮಂಡಳಿ ಜಿಲ್ಲಾ ಅಧಿಕಾರಿ ಕೆ.ಎಂ.ಮಲ್ಲೇಶ್‌, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಭ ಅರಸ್‌, ಸುಧಾಮಣಿ ಇತರರಿದ್ದರು.

ಮಂಥರೆ ಪಾತ್ರ ಬಗ್ಗೆ ಎಚ್ಚರವಹಿಸಿ: ಜಿಟಿಡಿ ಮಹರ್ಷಿ ವಾಲ್ಮೀಕಿ ಅವರ ರಾಮಾಯಣ ಮಹಾಕಾವ್ಯ ಮೌಲ್ಯಯುತ, ಮಾನವೀಯ ಬದುಕನ್ನು ಕಲಿಸುತ್ತದೆ. ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ರಾಮಾಯಣದ ಮಂಥರೆ ಪಾತ್ರ ಪ್ರತಿ ಮನೆಯಲ್ಲೂ ಇರುತ್ತಾರೆ. ಈ ಬಗ್ಗೆ ಎಚ್ಚರವಹಿಸಬೇಕೆಂದು ಶಾಸಕ ಜಿ.ಟಿ.ದೇವೇಗೌಡ ಕಿವಿಮಾತು ಹೇಳಿದರು.

 ವಿಶ್ವಕ್ಕೆ ದಾರಿದೀವಿಗೆ: ಕೌಟಿಲ್ಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮ ಅಧ್ಯಕ್ಷ ಆರ್‌.ಕೌಟಿಲ್ಯ ಮಾತನಾಡಿ, ಶ್ರೇಷ್ಠ ಕೃತಿ ರಾಮಾಯಣ ವಿಶ್ವಕ್ಕೆ ದಾರಿದೀವಿಗೆಯಾಗಿದೆ. ಮಾನವೀಯತೆ, ಸಮಯ ಮತ್ತು ಬದ್ಧತೆಯ ಪಾಠ ಹೇಳುತ್ತದೆ. ಒಂದು ಕೂಡು ಕುಟುಂಬ ಹೇಗಿರಬೇಕೆಂಬುದನ್ನು ತಿಳಿಸುತ್ತದೆ. ರಾಮಾಯಣವನ್ನು ಅನುಸರಿಸಿ ನಡೆಯಬೇಕು ಎಂದು ಸಲಹೆ ನೀಡಿದರು.

ಟಾಪ್ ನ್ಯೂಸ್

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.