ನಗರಸಭೆ ಜೆ.ಇ ಪ್ರಸಾದ್ ವಿರುದ್ಧ ಗರಂ ಆದ ಸದಸ್ಯ ಜೈ ಭೀಮ್ ಮುರಳಿ
Team Udayavani, Oct 21, 2021, 2:03 PM IST
ಚಿಂತಾಮಣಿ : ಕೊಳವೆ ಬಾವಿಗೆ ಪೈಪ್ಲೈನ್ ಸಂಪರ್ಕ ನೀಡಿ ಗಂಗಾನಗರಕ್ಕೆ ಕುಡಿಯುವ ನೀರು ಕಲ್ಪಿಸುವಂತೆ ಕಳೆದ ಆರು ತಿಂಗಳುಗಳಿಂದ ಮನವಿ ಮಾಡಿದರೂ ನಗರಸಭೆ ಜೆ.ಇ ಪ್ರಸಾದ್ ಯಾವುದೆ ಕ್ರಮ ಕೈಗೊಂಡಿಲ್ಲವೆಂದು ವಾರ್ಡ್ ನಂ 2 ರ ಸದಸ್ಯ ಜೈ ಭೀಮ್ ಮುರಳಿ ಆರೋಪಿಸಿದ್ದಾರೆ.
ಗುರುವಾರ ನಗರಸಭೆಗೆ ಭೇಟಿ ನೀಡಿ ಪ್ರಸಾದ್ ರವರನ್ನು ತರಾಟೆಗೆ ತೆಗೆದುಕೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಾರ್ಡ್ ನಂ 2ರ ಗಂಗಾನಗರ ಬಡಾವಣೆಯು ಬೆಟ್ಟದ ತಪ್ಪಲಿನಲ್ಲಿದ್ದು ಇಲ್ಲಿಗೆ ಪೈಪ್ ಲೈನ್ ಸಂಪರ್ಕ ಸಹ ಕಲ್ಪಿಸಿ ಅರಣ್ಯ ಇಲಾಖೆಗೆ ಸೇರಿದ ಕೊಳವೆ ಬಾವಿಯನ್ನು ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಮುಖಾಂತರ ಅರಣ್ಯ ಅಧಿಕಾರಿಗಳ ಜೊತೆ ಮಾತನಾಡಿ ಕೊಳವೆ ಬಾವಿ ಬಳಲೆಗೆ ಒಪ್ಪಿಗೆ ಪಡೆದಿದ್ದೆವೆ. ಸದರಿ ಕೊಳವೆ ಬಾವಿಗೆ ಪೈಪ್ ಲೈನ್ ಸಂಪರ್ಕ ಕಲ್ಪಿಸಿ ನೀರು ಬಿಡುವಂತೆ ಕಳೆದ ಆರು ತಿಂಗಳುಗಳಿಂದ ನಗರಸಭೆ ಜೆ.ಇ. ಪ್ರಸಾದ್ ರವರನ್ನು ಕೇಳುತ್ತಿದ್ದರೂ ಪೈಪ್ ಲೈನ್ ಸಂಪರ್ಕ ಮಾಡುತ್ತಿಲ್ಲ ಎಂದು ದೂರಿದರು.
ಇದನ್ನೂ ಓದಿ:ಬಾಲಿವುಡ್ ನಟಿ ಅನನ್ಯ ಪಾಂಡೆ ನಿವಾಸದ ಮೇಲೆ ಎನ್ ಸಿಬಿ ದಾಳಿ, ಫೋನ್, ಲ್ಯಾಪ್ ಟಾಪ್ ವಶಕ್ಕೆ
ನಗರಸಭೆ ಸದಸ್ಯರಾಗಿ ನಾವೆ ಆರು ತಿಂಗಳುಗಳಿಂದ ಕೇಳುತ್ತಿದ್ದರೂ ಕೆಲಸ ಮಾಡದ ಇವರು ಜನಸಾಮಾನ್ಯರ ಮನವಿಗೆ ಹೇಗೆ ಸ್ಪಂದಿಸುತ್ತಾರೆ ಎಂದು ಆಕ್ರೋಶಗೊಂಡ ಅವರು ಪ್ರಸಾದ್ ರವರು ಕೇವಲ ಗುತ್ತಿಗೆದಾರರ ಪರವಾಗಿ ಕೆಲಸಮಾಡಿ ಕಮೀಷನ್ ಗಾಗಿ ಕೆಲಸ ಮಾಡುತ್ತಿದ್ದಾನೆ ಎಂದು ಆರೋಪಿಸಿದರು.
ಈ ಕುರಿತು ಪ್ರತಿಕ್ರಿಯಿಸಿದ ಜೆ.ಇ ಪ್ರಸಾದ್ ಮೂರು ದಿನಗಳೊಳಗೆ ಕೊಳವೆ ಬಾವಿಗೆ ಪೈಪ್ ಲೈನ್ ಸಂಪರ್ಕ ಕಲ್ಪಿಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
MUST WATCH
ಹೊಸ ಸೇರ್ಪಡೆ
ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ
LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ
Tollywood: ಜೂ.ಎನ್ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ
Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ
Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ