ಡಾ| ನೀಲಾ ಚಿತ್ರ ಅಂತಾರಾಷ್ಟ್ರೀಯ ಆನ್‌ಲೈನ್‌ ಪ್ರದರ್ಶನಕ್ಕೆ ಆಯ್ಕೆ


Team Udayavani, Oct 22, 2021, 9:25 AM IST

1

ಕಲಬುರಗಿ: ಶರಣಬಸವೇಶ್ವರ ಸಂಸ್ಥಾನದ ಮಹಾ ದಾಸೋಹ ಪೀಠಾಧಿಪತಿ ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಬರೆದ ಮಹಾದಾಸೋಹ ಸೂತ್ರದ “ಮದುವೆ ಮಧುರ ಸುಮಧುರ’ ವಿಷಯದ ಮೇಲೆ ಖ್ಯಾತ ಕಲಾವಿದ ಡಾ| ಸುಬ್ಬಯ್ಯ ಎಂ. ನೀಲಾ ರಚಿಸಿದ ವರ್ಣಚಿತ್ರ 4ನೇ ಅಂತಾರಾಷ್ಟ್ರೀಯ ಆನ್‌ಲೈನ್‌ ಕಲಾ ಪ್ರದರ್ಶನದಲ್ಲಿ ಆಯ್ಕೆಯಾಗಿದೆ.

ಚಂಡಿಗಡ್‌ ಮೂಲದ ನಿರಂತರ ಕಲಾ ಬಳಗದ ವತಿಯಿಂದ ಆಯೋಜಿಸಿದ್ದ “ನಿರಂತರ 2021′ ಪ್ರದರ್ಶನದಲ್ಲಿ ಆಯ್ಕೆಯಾಗುವ ಮೂಲಕ ಡಾ| ನೀಲಾ ಭಾರತವನ್ನು ಪ್ರತಿನಿಧಿಸಿದ್ದಾರೆ. ದೇಶದ ವಿವಿಧ ಭಾಗಗಳ 40ಕ್ಕೂ ಹೆಚ್ಚು ಪ್ರಖ್ಯಾತ ಚಿತ್ರಕಾರರಲ್ಲಿ ಡಾ| ನೀಲಾ ತಮ್ಮ ವರ್ಣಚಿತ್ರಗಳನ್ನು ಆಯ್ಕೆಗಾಗಿ ಸಲ್ಲಿಸಿದ್ದರು. ತಜ್ಞರ ತಂಡವು ಮಹಾದಾಸೋಹ ಸೂತ್ರದಲ್ಲಿ ಡಾ| ನೀಲಾ ಅವರ ವರ್ಣಚಿತ್ರವನ್ನು ನಾಲ್ಕನೇ ಅಂತಾರಾಷ್ಟ್ರೀಯ ಆನ್‌ಲೈನ್‌ ಪ್ರದರ್ಶನದಲ್ಲಿ ಪ್ರದರ್ಶಿಸಲು ಆಯ್ಕೆ ಮಾಡಿತು.

ಈ ಕಲಾ ಪ್ರದರ್ಶನವು ಸೆಪ್ಟೆಂಬರ್‌ 30ರಿಂದ ಆರಂಭವಾಗಿದ್ದು, ಅಕ್ಟೋಬರ್‌ 30ಕ್ಕೆ ಮುಕ್ತಾಯ ವಾಗಲಿದೆ. ಯುಎಸ್‌ಎ, ಜಪಾನ್‌, ರಷ್ಯಾ, ಪಾಕಿಸ್ತಾನ, ಶ್ರೀಲಂಕಾ, ದಕ್ಷಿಣ ಕೊರಿಯಾ, ಸೌದಿ ಅರೇಬಿಯಾ, ಬಾಂಗ್ಲಾದೇಶ, ನೇಪಾಳ ಮತ್ತು ಇತರ ದೇಶಗಳ 38 ರಾಷ್ಟ್ರಗಳ ಅಂತಾರಾಷ್ಟ್ರೀಯ ಖ್ಯಾತಿಯ ಚಿತ್ರಕಲಾವಿದರು ಕಲಾ ಪ್ರದರ್ಶನದಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

ಡಾ| ನೀಲಾ ಪ್ರಕಾರ, ಪ್ರದರ್ಶನದ ಆಯೋಜಕರು ಭಾಗವಹಿಸುವ ಪ್ರತಿಯೊಂದು ದೇಶದಿಂದ ಒಂದೊಂದು ವರ್ಣಚಿತ್ರ ಆಯ್ಕೆ ಮಾಡಿ ಅಂತಾರಾಷ್ಟ್ರೀಯ ಕಲಾ ಪ್ರದರ್ಶನದಲ್ಲಿ ಪ್ರದರ್ಶಿಸಲಿದ್ದಾರೆ.

ತಮ್ಮ ಈ ಸಾಧನೆಗೆ ಶರಣಬಸವೇಶ್ವರ ಸಂಸ್ಥಾನದ ಮಹಾದಾಸೋಹ ಪೀಠಾಧಿಪತಿ ಪೂಜ್ಯ ಡಾ| ಶರಣಬಸವಪ್ಪ ಅಪ್ಪ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‌ಪರ್ಸ್‌ನ್‌ ಮಾತೋಶ್ರಿ ಡಾ| ದಾಕ್ಷಾಯಿಣಿ ಅವ್ವ, ಚಿರಂಜೀವಿ ದೊಡ್ಡಪ್ಪ ಅಪ್ಪ ಪ್ರೋತ್ಸಾಹ ಮತ್ತು ಆಶೀರ್ವಾದ ಕಾರಣ ಎಂದು ಅವರು ತಿಳಿಸಿದ್ದಾರೆ.

ಚಿತ್ರಕಲೆಗೆ ಜೀವ ತುಂಬಿದ ಕಾಲ್ಪನಿಕ ಬಣ್ಣ

ಆಕ್ರಿಲಿಕ್‌ ಬಳಸಿ ರಚಿಸಿದ ಈ ಕಲಾಕೃತಿ ನಮ್ಮ ಧಾರ್ಮಿಕ ಲಿಪಿ, ವೇದಗಳಲ್ಲಿ ಬರುವ ಸಿದ್ಧಾಂತಗಳ ಪ್ರಕಾರ ಸದ್ಗುಣ ಮತ್ತು ಧಾರ್ಮಿಕ ಜೀವನ ನಡೆಸಲು ಎರಡು ಮನಸ್ಸುಗಳ ಸಂಗಮವಾಗಿದೆ. ಕ್ಯಾನ್ವಾಸ್‌ನಲ್ಲಿ ಇದನ್ನು ವೀಕ್ಷಿಸಲು ಸಂತೋಷವೆನಿಸುತ್ತದೆ. ಸೃಜನಶೀಲ ಸಾಂಪ್ರದಾಯಿಕ ಮತ್ತು ಅಲಂಕಾರಿಕ ಶೈಲಿಯಲ್ಲಿ ಮಾಡಿದ ಚಿತ್ರಕಲೆ ವಧು ಮತ್ತು ವರನ ಮದುವೆಗೆ ಮುಂಚೆ ಅವರ ಕಣ್ಣುಗಳಲ್ಲಿ ಕನಸುಗಳನ್ನು ಬಿತ್ತುತ್ತದೆ. ಕಲಾವಿದರು ಆಯ್ಕೆ ಮಾಡಿದ ಕಾಲ್ಪನಿಕ ಬಣ್ಣಗಳು ಚಿತ್ರಕಲೆಗೆ ಹೆಚ್ಚು ಜೀವ ತುಂಬಿವೆ.

ಶರಣಬಸವ ವಿಶ್ವವಿದ್ಯಾಲಯದ ಸ್ನಾತಕೋತ್ತರ ದೃಶ್ಯ ಕಲಾ ವಿಭಾಗದ ಮುಖ್ಯಸ್ಥರಾಗಿರುವ ಡಾ| ಸುಬ್ಬಯ್ಯ ಎಂ. ನೀಲಾ ತಮ್ಮ ಸೃಜನಶೀಲ ಕೆಲಸಗಳಿಗಾಗಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಶ್ರೀಲಂಕಾ, ಬಾಂಗ್ಲಾದೇಶದ ಖಾಸಗಿ ಸಂಗ್ರಹಕಾರರ ಗೋಡೆಗಳನ್ನು ಇವರು ತಮ್ಮ ಚಿತ್ರಕಲೆಯಿಂದ ಅಲಂಕರಿಸಿದ್ದಾರೆ. ದೇಶಾದ್ಯಂತದ ಪ್ರಸಿದ್ಧ ವಸ್ತುಸಂಗ್ರಹಾಲಯ ಮತ್ತು ದೇಶದ ವಿವಿಧ ಭಾಗಗಳಲ್ಲಿರುವ ವ್ಯಕ್ತಿಗಳ ಖಾಸಗಿ ಸಂಗ್ರಹಗಳಲ್ಲಿ ಡಾ| ನೀಲಾ ಕಲಾಕೃತಿಗಳು ವಿಜೃಂಭಿಸುತ್ತಿವೆ.

ಟಾಪ್ ನ್ಯೂಸ್

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.