100 ಕೋಟಿ ಜನರಿಗೆ ಲಭಿಸಿದೆ ಲಸಿಕೆ ಲಾಭ
Team Udayavani, Oct 22, 2021, 10:54 AM IST
ಚಿಂಚೋಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಕೊರೊನಾಕ್ಕೆ ಲಸಿಕೆ ಕಂಡು ಹಿಡಿಯಲು ವಿಜ್ಞಾನಿಗಳಿಗೆ ಪ್ರೇರಣೆ ನೀಡಿದ್ದರಿಂದ 100 ಕೋಟಿ ಜನರಿಗೆ ಕೋವಿಡ್ ಲಸಿಕೆ ಲಭಿಸಿದೆ ಎಂದು ತಾಪಂ ಇಒ ಅನಿಲಕುಮಾರ ರಾಠೊಡ ಹೇಳಿದರು.
ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಗುರುವಾರ ಏರ್ಪಡಿಸಿದ್ದ ವೈದ್ಯರ ತಂಡದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬೇರೆ ಕಡೆ ಕೆಲಸ ಅರಸಿ ಗುಳೆ ಹೋಗಿದ್ದ ಕಾರ್ಮಿಕರು ಮರಳಿ ತಮ್ಮ ಊರುಗಳಿಗೆ ಬಂದ ಸಂದರ್ಭದಲ್ಲಿ ಅವರಿಗೆ ಕ್ಯಾರಂಟೈನ್ ಮಾಡಲು ಸಮಾಜ ಕಲ್ಯಾಣ ಮತ್ತು ಬಿಸಿಎಂ ವಸತಿ ನಿಲಯದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ತಾಲೂಕಿನ ಸಮಗ್ರ ಇಲಾಖೆಗಳ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ, ಆರೋಗ್ಯ ಸಿಬ್ಬಂದಿ ಪರಿಶ್ರಮದಿಂದ ಸಾಧನೆ ಮಾಡಲಾಗಿದೆ ಎಂದರು.
ಇದನ್ನೂ ಓದಿ: ಆಸ್ಪತ್ರೆಗೆ 50ಲಕ್ಷ ಮೌಲ್ಯದ ಉಪಕರಣ ವಿತರಣೆ
ತಾಲೂಕು ಆರೋಗ್ಯಾಧಿಕಾರಿ ಮಹ್ಮದ್ ಗಫಾರ ಅಹಮೆದ್ ಮಾತನಾಡಿ, ದೇಶದಲ್ಲಿ ವಿಜ್ಞಾನಿಗಳು 3ನೇ ಅಲೆ ಹಬ್ಬಲಿದೆ ಎಂದು ಎಚ್ಚರಿಕೆ ನೀಡಿದ್ದರು. ಕೋವಿಡ್ ಲಸಿಕೆ ನೀಡಿರುವುದರಿಂದ ಅದನ್ನು ಹತೋಟಿಗೆ ತರಲಾಗಿದೆ. ಲಸಿಕೆ ನೀಡುವಲ್ಲಿ ಜಿಲ್ಲೆಯಲ್ಲಿ ತಾಲೂಕು 2ನೇ ಸ್ಥಾನ ಪಡೆದಿದೆ. ಒಟ್ಟು 1,84,050 ಜನರಿಗೆ ಮೊದಲ ಹಂತದ ಲಸಿಕೆ ನೀಡಲಾಗಿದ್ದು, ಶೇ. 71ರಷ್ಟು ಸಾಧನೆ ಮಾಡಲಾಗಿದೆ. ಎರಡನೇ ಡೋಸ್ 56,140 ಜನರಿಗೆ ನೀಡಲಾಗಿದ್ದು, ಒಟ್ಟು ಶೇ. 43ರಷ್ಟು ಸಾಧನೆ ಮಾಡಲಾಗಿದೆ ಎಂದು ಹೇಳಿದರು.
ತಹಶೀಲ್ದಾರ್ ಅಂಜುಮ ತಬ್ಸುಮ್ ಮಾತನಾಡಿ, ಜನರ ಮನವೊಲಿಸಿ ಲಸಿಕೆ ನೀಡಿ ಉತ್ತಮ ಸಾಧನೆ ಮಾಡಿರುವುದಕ್ಕೆ ಅಧಿಕಾರಿಗಳನ್ನು ಅಭಿನಂದಿಸಿದರು. ಸಿಡಿಪಿಒ ಗುರುಪ್ರಸಾದ, ಹಣಮಂತ ಭೋವಿ, ಪುರಸಭೆ ಮುಖ್ಯಾಧಿಕಾರಿ ಕಾಶಿನಾಥ ಧನ್ನಿ, ಇಂಜಿನಿಯರ್ ದೇವೇಂದ್ರಪ್ಪ ಕೋರವಾರ, ಮಂಜುನಾಥ ಹಾಗೂ ಆರೋಗ್ಯ ಸಿಬ್ಬಂದಿ ಭಾಗವಹಿಸಿದ್ದರು. ಆಸ್ಪತ್ರೆ ಆಡಳಿತಾಧಿಕಾರಿ ಡಾ| ಸಂತೋಷ ಪಾಟೀಲ ಸ್ವಾಗತಿಸಿದರು, ಸುಧಾ ಕುಲಕರ್ಣಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
MUST WATCH
ಹೊಸ ಸೇರ್ಪಡೆ
ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್ ಇದ್ದಂತೆ…
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ