ನಿರ್ಗತಿಕ ಮಕ್ಕಳಿಗಾಗಿ ತಲೆಯೆತ್ತುತ್ತಿದೆ “ಚಿಣ್ಣರ ಧಾಮ”

300 ಹೆಣ್ಣು ಮಕ್ಕಳಿಗೆ ಆಶ್ರಯ ನೀಡುವ ಗುರಿ ಗುಣಮಟ್ಟದ ಶಿಕ್ಷಣದ ಜತೆಗೆ ಕೌಶಲ್ಯ ತರಬೇತಿ

Team Udayavani, Oct 22, 2021, 11:17 AM IST

ನಿರ್ಗತಿಕ ಮಕ್ಕಳಿಗಾಗಿ ತಲೆಯೆತ್ತುತ್ತಿದೆ “ಚಿಣ್ಣರ ಧಾಮ”

ಬೆಂಗಳೂರು: ಜಾಗತಿಕ ಮಹಾಮಾರಿ ಕೊರೊನಾ ಹಾವಳಿಯಲ್ಲಿ ಅದೆಷ್ಟೋ ಮಕ್ಕಳು ಅನಾಥವಾದರು. ಅನೇಕರು ಶಾಲೆಗಳನ್ನು ತೊರೆದರು. ಕೆಲ ಪೋಷಕರು ತಮ್ಮ ದುಡಿಮೆ ಸಾಕಾಗದೆ ಅನಿವಾರ್ಯವಾಗಿ ಮಕ್ಕಳನ್ನು ದುಡಿಮೆಗೆ ಹಚ್ಚಿದರು. ಇಂತಹ ಹಲವು ಕಹಿ ಘಟನೆಗಳಿಗೆ ಕೊರೊನಾ ಕಾರಣವಾಯಿತು. ಈಗ ಅಂತಹ ಮಕ್ಕಳಿಗೆ “ಚಿಣ್ಣರ ಧಾಮ’ ಆಶ್ರಯ ನೀಡಲಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರತಿಷ್ಠಾನ (ಕೆಐಎಎಫ್)ವು ಸ್ಪರ್ಶ ಟ್ರಸ್ಟ್‌ ಮತ್ತು ಫೇರ್‌ಫ್ಯಾಕ್ಸ್‌ ಫೈನಾನ್ಷಿಯಲ್‌ ಹೋಲ್ಡಿಂಗ್ಸ್‌ ಲಿ., ಸಹಯೋಗದಲ್ಲಿ ನಗರದ ಹೊರವಲಯದಲ್ಲಿ “ಚಿಣ್ಣರ ಧಾಮ’ ತಲೆಯೆತ್ತುತ್ತಿದೆ. ಹೆಸರೇ ಸೂಚಿಸುವಂತೆ ಇದು ಮಕ್ಕಳ ಶಿಕ್ಷಣ, ವಸತಿ, ಆರೋಗ್ಯ ಸೇರಿದಂತೆ ಸಮಗ್ರ ಬೆಳವಣಿಗೆ ವೇದಿಕೆ ಆಗಲಿದೆ.

ಈ ಕಾರ್ಯಕ್ರಮದಡಿ ಸುಮಾರು 300 ಹೆಣ್ಣುಮಕ್ಕಳನ್ನು ಸಬಲೀಕರಣಗೊಳಿಸುವ ಗುರಿ ಹೊಂದಲಾಗಿದೆ. ಕಾರ್ಪೋರೇಟ್‌ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್‌) ಅಡಿ ಕೆಐಎಎಫ್ ಸೇರಿದಂತೆ ಮೂರೂ ಸಂಸ್ಥೆಗಳು ಮಕ್ಕಳ ಧಾಮ ಅಥವಾ ಚಿಣ್ಣರ ಧಾಮವನ್ನು ಬೆಟ್ಟಕೋಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಿರ್ಮಿಸುತ್ತಿವೆ.

ಅಲ್ಲಿ “ನಮ್ಮ ಶಿಕ್ಷಣ’ ಆರಂಭಿಕ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗುತ್ತಿದ್ದು, ಮಕ್ಕಳಿಗೆ ಸಾಮಾಜಿಕ ಮತ್ತು ಮಾನ ಸಿಕ ಸ್ಥೈರ್ಯ ತುಂಬುವುದರ ಜತೆಗೆ ಬಿಐಎಎಲ್‌ ದತ್ತುಪಡೆದ ಯಾವುದಾದರೂ ಶಾಲೆಯಲ್ಲಿ ಹೆಸರು ನೋಂದಣಿ ಮಾಡಿಸಿ, ಗುಣಮಟ್ಟದ ಶಿಕ್ಷಣ ಒದಗಿ ಸಲಾಗುವುದು ಎಂದು ಬೆಂಗಳೂರು ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ ತಿಳಿಸಿದೆ.

ಉದ್ದೇಶಿತ ಧಾಮಕ್ಕೆ ಗುರುವಾರ ಶಂಕುಸ್ಥಾಪನೆ ನೆರವೇರಿಸಿದ ಬಿಐಎಎಲ್‌ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿ ಮರಾರ್‌, ಕೋವಿಡ್‌ ಸಂದರ್ಭದಲ್ಲಿ ಅಸಂಖ್ಯಾತ ಮಕ್ಕಳು ಅನಾಥವಾಗಿವೆ. ಅಷ್ಟೇ ಅಲ್ಲ, ಪೋಷಕರು, ತಮ್ಮ ಮಕ್ಕಳ ಅವಶ್ಯಕತೆಗಳನ್ನು ಪೂರೈಸಲಿಕ್ಕೂ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ:- ರಾಜ್ಯೋತ್ಸವ: ಸರಳ ಆಚರಣೆಗೆ ನಿರ್ಧಾರ

ಕಲಿಕೆಯಿಂದ ಹಿಡಿದು ಹಲವು ಅವಕಾಶಗಳಿಂದ ವಂಚಿತರಾಗಿದ್ದಾರೆ. ಅಂತಹವರ ನೆರವಿಗೆ ಧಾವಿಸುವುದು ಪ್ರತಿಯೊಬ್ಬ ಜವಾಬ್ದಾರಿಯುತ ನಾಗರಿಕನ ಕರ್ತವ್ಯ. ಈ ನಿಟ್ಟಿನಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಚಿಣ್ಣರ ಧಾಮಕ್ಕೆ ಬಿಐಎಎಲ್‌ ಮುಂದಾಗಿದೆ. ಇದರಡಿ 300 ಹೆಣ್ಣು ಮಕ್ಕಳನ್ನು ಬೆಳೆಸಿ, ಭವಿಷ್ಯದ ಜವಾಬ್ದಾರಿಯುತ ಪ್ರಜೆಗಳನ್ನಾಗಿ ಮಾಡಲಾಗುವುದು’ ಎಂದು ಹೇಳಿದರು. ಸ್ಪರ್ಶ ಟ್ರಸ್ಟ್‌ ಆಡಳಿತ ಸಮಿತಿ ಸದಸ್ಯ ಜಿ. ರಾಘವನ್‌ ಉಪಸ್ಥಿತರಿದ್ದರು.

2 ಎಕರೆಯಲ್ಲಿ ನಿರ್ಮಾಣ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹತ್ತಿರದ ಬೆಟ್ಟಕೋಟೆ ಗ್ರಾಪಂ ವ್ಯಾಪ್ತಿಯಲ್ಲಿ ಸುಮಾರು ಎರಡು ಎಕರೆ ಜಾಗದಲ್ಲಿ ಈ ಚಿಣ್ಣರ ಧಾಮ ನಿರ್ಮಿಸಲಾ ಗುತ್ತಿದ್ದು, ಇದರ ಮೊದಲ ಹಂತದ ನಿರ್ಮಾಣ ಕಾರ್ಯವು 2021ರ ಅಕ್ಟೋಬರ್‌ ಅಂತ್ಯ ದೊಳಗೆ ಪೂರ್ಣಗೊಳಿಸುವ ಗುರಿ ಹೊಂದ ಲಾಗಿದೆ.

ಸಂಪೂರ್ಣವಾಗಿ 2022ರ ಜೂನ್‌ಗೆ ಮುಗಿಯಲಿದೆ. ಮಕ್ಕಳ ವಾಸಕ್ಕೆ ವಸತಿ, ಆಹಾರ, ಆರೋಗ್ಯ, ಶಿಕ್ಷಣ, ವೃತ್ತಿ ಕೌಶಲ್ಯ ತರಬೇತಿ ಮತ್ತಿತರ ಸೌಲಭ್ಯಗಳನ್ನು ಇದು ಒಳಗೊಂಡಿರಲಿದೆ. ರಾಜ್ಯದ ಯಾವುದೇ ಹೆಣ್ಣುಮಗುವಿಗೆ ಇಲ್ಲಿ ಆಶ್ರಯ ನೀಡಲಾಗು ತ್ತದೆ. ಇದರ ನಿರ್ವಹಣೆಗಾಗಿ ಪ್ರತ್ಯೇಕ ತಂಡ ವನ್ನು ರಚಿಸಲಾಗಿದ್ದು, ಅದರಲ್ಲಿ ಉದ್ಯಮಿಗಳು, ಕಾರ್ಪೋರೇಟ್‌ ಪ್ರತಿನಿಧಿಗಳು, ರಕ್ಷಣಾ ವಲ ಯದ ಅನುಭವಿಗಳು ಮತ್ತಿತರರು ತಮ್ಮನ್ನು ತಾವು ಸ್ವಯಂಪ್ರೇರಿತವಾಗಿ ತೊಡಗಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.