ಗೋಡೆ ನಾರಾಯಣ ಹೆಗಡೆಯವರಿಗೆ ಒಲಿದ ಅನಂತ ಶ್ರೀ ಪ್ರಶಸ್ತಿ
Team Udayavani, Oct 22, 2021, 2:11 PM IST
ಶಿರಸಿ: ಯಕ್ಷಗಾನದ ಗೋಡೆ ಎಂದೇ ಹೆಸರಾದ, ಸಾವಿರಕ್ಕೂ ಮಿಕ್ಕಿ ಕೌರವನ ಪಾತ್ರ ಮಾಡಿದ ಗೋಡೆ ನಾರಾಯಣ ಹೆಗಡೆ ಅವರಿಗೆ ಅನಂತ ಶ್ರೀ ಪ್ರಶಸ್ತಿ ಪ್ರಕಟವಾಗಿದೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀಅನಂತ ಯಕ್ಷಕಲಾ ಪ್ರತಿಷ್ಠಾನದ ಕಾರ್ಯದರ್ಶಿ ಕೇಶವ ಹೆಗಡೆ ಕೊಳಗಿ, ವಿ.ಉಮಾಕಾಂತ ಭಟ್ಟ ಕೆರೇಕೈ ಈ ವಿಷಯ ತಿಳಿಸಿ, ಗೋಡೆ ಅವರು ಯಕ್ಷಗಾನಕ್ಕೆ ಮಾಡಿದ ಅನವರತ ಕಾರ್ಯ ಕೊಡುಗೆ ಗಮನಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಕೊಳಗಿ ಅನಂತ ಹೆಗಡೆ ಅವರು ನಾಲ್ಕು ದಶಕಗಳ ಕಾಲ ಯಕ್ಷಗಾನದಲ್ಲಿ ಕೆಲಸ ಮಾಡಿದವರು. ಅವರ ನೆನಪಿನ ಪ್ರಶಸ್ತಿ ಇದಾಗಿದೆ. ಅ.31ರ ಮದ್ಯಾಹ್ನ 3:3೦ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ಉತ್ತರ ಕನ್ನಡದ ಶಿರಸಿ ಟಿಎಂಎಸ್ ಸಭಾಂಗಣದಲ್ಲಿ ನಡೆಯಲಿದೆ.
ಈ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಶಿವರಾಮ ಹೆಬ್ಬಾರ್, ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ , ಪತ್ರಕರ್ತ ರವೀಂದ್ರ ಭಟ್ಟ, ಎಪಿಐಟಿ ಮುಖ್ಯಸ್ಥ ಶಶಿಕುಮಾರ್ ತಿಮ್ಮಯ್ಯ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’