ಚಾರ್ ಧಾಮ್ ಯಾತ್ರೆ : 2 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳ ಭೇಟಿ
Team Udayavani, Oct 22, 2021, 3:51 PM IST
ಹೊಸದಿಲ್ಲಿ: ದೇವಾಲಯಗಳ ದ್ವಾರಗಳನ್ನು ತೆರೆದ ನಂತರ ಇಲ್ಲಿಯವರೆಗೆ ಎರಡು ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳು ಚಾರ್ ಧಾಮ್ ತಲುಪಿದ್ದಾರೆ ಎಂದು ಉತ್ತರಾಖಂಡ ಚಾರ್ ಧಾಮ್ ದೇವಸ್ಥಾನ ಆಡಳಿತ ಮಂಡಳಿ ಸದಸ್ಯ ಡಾ.ಹರೀಶ್ ಗೌರ್ ಶುಕ್ರವಾರ ಹೇಳಿದ್ದಾರೆ.
ನವೆಂಬರ್ 5 ರಂದು ಗಂಗೋತ್ರಿ ಧಾಮ, ನವೆಂಬರ್ 6 ರಂದು ಕೇದಾರನಾಥ ಧಾಮ, ಯಮುನೋತ್ರಿ ಧಾಮ ಹಾಗೂ ನವೆಂಬರ್ 20 ರಂದು ಶ್ರೀ ಬದರಿನಾಥ ಧಾಮವನ್ನು ಮುಚ್ಚಲಾಗುವುದು ಎಂದು ಅವರು ತಿಳಿಸಿದ್ದಾರೆ.
“ತೃತೀಯ ಕೇದಾರ ಶ್ರೀ ತುಂಗನಾಥ ದೇವಸ್ಥಾನದ ಬಾಗಿಲು ಅಕ್ಟೋಬರ್ 30 ರಂದು ಮತ್ತು ದ್ವಿತೀಯ ಕೇದಾರ ಶ್ರೀ ಮದ್ಮಹೇಶ್ವರ ದೇವಾಲಯ ನವೆಂಬರ್ 22 ರಂದು ಚಳಿಗಾಲದ ಹಿನ್ನೆಲೆಯಲ್ಲಿ ಮುಚ್ಚಲಾಗುವುದು. ನವೆಂಬರ್ 25 ರಂದು ಶ್ರೀ ಮದ್ಮಹೇಶ್ವರ ಜಾತ್ರೆ ನಡೆಯಲಿದೆ” ಎಂದು ಅವರು ತಿಳಿಸಿದರು.
ಇದನ್ನೂ ಓದಿ:- ಹೊಸ ಐಪಿಎಲ್ ತಂಡ ಖರೀದಿಸುತ್ತಾರಂತೆ ದೀಪಿಕಾ- ರಣವೀರ್
ಚಾರ್ ಧಾಮ್ ಯಾತ್ರೆಯು ಸೆಪ್ಟೆಂಬರ್ 16 ರಂದು ನೈನಿತಾಲ್ ಹೈಕೋರ್ಟ್ ಯಾತ್ರೆಯ ಮೇಲಿನ ನಿಷೇಧವನ್ನು ತೆಗೆದುಹಾಕಿದ ನಂತರ ಆರಂಭವಾಗಿತ್ತು. ಸೆಪ್ಟೆಂಬರ್ 18 ರಂದು ಕಡ್ಡಾಯವಾಗಿ ಕೋವಿಡ್ -19 ನೆಗೆಟಿವ್ ವರದಿಯೊಂದಿಗೆ ಕೋವಿಡ್ ಲಸಿಕೆ ಹಾಕಿದ ಭಕ್ತರಿಗೆ ಮಾತ್ರ ಅನುಮತಿ ನೀಡಲಾಗಿತ್ತು.
ಈ ಯಾತ್ರೆಗೆ ಪ್ರತಿ ವರ್ಷ ದೇಶ ಮತ್ತು ವಿದೇಶಗಳಿಂದ ಲಕ್ಷಾಂತರ ಭಕ್ತರು ಆಗಮಿಸುವುದು ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ