ಅಕ್ರಮ ಮರಳುಗಾರಿಕೆ: ಸ್ಥಳೀಯಾಡಳಿತದಿಂದ ಪರಿಶೀಲನೆ


Team Udayavani, Oct 22, 2021, 7:12 PM IST

shirva news

ಶಿರ್ವ: ಶಿರ್ವ ಕಲ್ಲೊಟ್ಟು ತೆಂಕಬೆಟ್ಟು ಸೇತುವೆಯ ಸಮೀಪ ಕೇರಳ ಮೂಲದ ಕೋಶಿ ಎಂಬಾತನ ತೋಟದ ಬಳಿಯ ಜಾಗದಲ್ಲಿ ಪಾಪನಾಶಿನಿ ನದಿಯಿಂದ ದೋಣಿ ಹಾಗೂ ಹಿಟಾಚಿ ಯಂತ್ರ ಬಳಸಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ.

ರಾತ್ರಿ ಹಗಲು ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ನಾಗರಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಶಿರ್ವ ಗ್ರಾ.ಪಂ. ಅಧ್ಯಕ್ಷ ಕೆ.ಆರ್‌.ಪಾಟ್ಕರ್‌,ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಅನಂತ ಪದ್ಮನಾಭ ನಾಯಕ್‌ ಮತ್ತು ಸಿಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಅಕ್ರಮ ದಂಧೆಕೋರರು ಯಂತ್ರ ಬಳಸಿ ಮರಳುಗಾರಿಕೆ ನಡೆಸುತ್ತಿದ್ದು ನಾಗರಿಕರಿಂದ ಗ್ರಾ.ಪಂ.ಗೆ  ದೂರು ಬಂದಿತ್ತು. ಪರಿಶೀಲನೆ ವೇಳೆ ಸ್ಥಳದಲ್ಲಿ 2 ಹಿಟಾಚಿ,1 ಲಾರಿ ಮತ್ತು 1 ದೋಣಿ ಇದ್ದು ನದಿಗೆ ಪೈಪ್‌ ಅಳವಡಿಸಿ ಯಂತ್ರದಿಂದ ಅಕ್ರಮ ಮರಳುಗಾರಿಕೆ ನಡೆಸಲಾಗುತ್ತಿರುವ ಸಂಗತಿ ಬೆಳಕಿಗೆ ಬಂದಿದೆ. ಜಾಗದ ಮಾಲಕ ಕೋಶಿ ಪರಾರಿಯಾಗಿದ್ದಾನೆ.

ಇದನ್ನೂ ಓದಿ:ಬಾಕಿ ಪಿಂಚಣಿ ಬಿಡುಗಡೆಗೆ ದೇವದಾಸಿಯರ ಒತ್ತಾಯ

ಅಧಿಕಾರಿಗಳಿಂದ ಉಡಾಫೆಯ ಉತ್ತರ

ಅಕ್ರಮ ಮರಳುಗಾರಿಕೆ ನಡೆಸಿ ಸರಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡುತ್ತಿರುವ ಬಗ್ಗೆ ಗಣಿ ಇಲಾಖೆಯ ಅಧಿಕಾರಿಗಳಿಗೆ ತಿಳಿಸಲು ಕರೆ ಮಾಡಿದರೆ ಸ್ವೀಕರಿಸುತ್ತಿಲ್ಲ. ಹಲವು ಬಾರಿ ಕರೆ ಮಾಡಿದಾಗ ಸ್ವೀಕರಿಸಿದ ಅಧಿಕಾರಿಯೋರ್ವರು ಸ್ಥಳೀಯ ಅಧಿಕಾರಿಗಳಿಗೆ ಮರಳುಗಾರಿಕೆಯ ಬಗ್ಗೆ ಮಾಹಿತಿ ಸಿಗದೇ ಇರುವಾಗ ಮಪಾಲದಲ್ಲಿರುವ ಇಲಾಖೆಯ ಅಧಿಕಾರಿಗಳಿಗೆ ಹೇಗೆ ಮಾಹಿತಿ ಸಿಗುತ್ತದೆ ಎಂಬ ಉಡಾಫೆಯ ಉತ್ತರ ಸಿಗುತ್ತದೆ.

ಕಳೆದ ಜುಲೈ ತಿಂಗಳಲ್ಲಿ ಕಾಪು ತಹಶೀಲ್ದಾರ್‌ ಪ್ರತಿಭಾ ಆರ್‌. ಮತ್ತು ಗಣಿ ಇಲಾಖೆಯ ಅಧಿಕಾರಿಗಳು ಶಿರ್ವ ಪೊಲೀಸರ ಸಮಕ್ಷಮದಲ್ಲಿ 3 ಲಾರಿ ಮತ್ತು ಒಂದು ಜೆಸಿಬಿಯನ್ನು ವಶಪಡಿಸಿಕೊಂಡಿದ್ದು, ದಾಳಿಯ ವೇಳೆ ಆರೋಪಿಗಳು ಪರಾರಿಯಾಗಿದ್ದರು. ಇದೀಗ ಅದೇ ಸ್ಥಳದಲ್ಲಿ ಗಣಿ ಇಲಾಖಾಧಿಕಾರಿಗಳ ಕೃಪಾಕಟಾಕ್ಷದಲ್ಲಿ ರಾಜಾರೋಷವಾಗಿ ಹಗಲು ರಾತ್ರಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದು, ಸುಲಭವಾಗಿ ಕೈಗೆಟಕುವ ದರದಲ್ಲಿ ಬಡ ಜನರಿಗೆ ಮರಳು ಸಿಗುತ್ತಿಲ್ಲ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಂಚಾಯತ್‌ ಸಿಬಂದಿಗಳಾದ ಪ್ರೇಮನಾಥ್‌,ಮಾಧವ ಮತ್ತು ಗ್ರಾಮ ಕರಣಿಕರ ಸಹಾಯಕ ಭಾಸ್ಕರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.