8 ವರ್ಷಗಳ ಬಳಿಕ ರಸ್ತೆಗಳಲ್ಲಿ ಭದ್ರತಾ ಬಂಕರ್‌!

ಉಗ್ರರಿಂದ ಟಾರ್ಗೆಟೆಡ್‌ ದಾಳಿ ಹಿನ್ನೆಲೆ ಈ ಕ್ರಮ; ಕಣಿವೆಯಲ್ಲಿ ಕಟ್ಟೆಚ್ಚರ ವಹಿಸಲು ಹೆಚ್ಚುವರಿ ಸಿಬ್ಬಂದಿ ನಿಯೋಜನೆ

Team Udayavani, Oct 22, 2021, 9:15 PM IST

8 ವರ್ಷಗಳ ಬಳಿಕ ರಸ್ತೆಗಳಲ್ಲಿ ಭದ್ರತಾ ಬಂಕರ್‌!

ಶ್ರೀನಗರ: ಕಳೆದ ಎರಡು ವಾರಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ “ನಾಗರಿಕರನ್ನು ಗುರಿಯಾಗಿಸಿ ಹತ್ಯೆ’ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕಣಿವೆಯ ರಸ್ತೆಗಳಲ್ಲಿ ಸೆಕ್ಯೂರಿಟಿ ಬಂಕರ್‌ಗಳನ್ನು ನಿಯೋಜಿಸಲಾಗಿದೆ. ಅಲ್ಲದೇ, ಹೆಚ್ಚಿನ ಸಂಖ್ಯೆಯ ಅರೆಸೇನಾ ಪಡೆ ಸಿಬ್ಬಂದಿಯನ್ನೂ ಕರೆಸಿಕೊಳ್ಳಲಾಗಿದೆ.

ಈ ಮೂಲಕ, ಕೇಂದ್ರ ಸಶಸ್ತ್ರ ಅರೆಸೇನಾಪಡೆ (ಸಿಎಪಿಎಫ್) ಯೋಧರನ್ನು ಒಳಗೊಂಡ ಭದ್ರತಾ ಬಂಕರ್‌ಗಳು ಶ್ರೀನಗರದ ರಸ್ತೆಗಳಲ್ಲಿ ಸುಮಾರು 8 ವರ್ಷಗಳ ಬಳಿಕ ಮರುನಿಯೋಜನೆಗೊಂಡಂತಾಗಿದೆ. ಕಾಶ್ಮೀರದಲ್ಲಿ ಭದ್ರತಾ ಪರಿಸ್ಥಿತಿ ಸುಧಾರಣೆಗೊಂಡ ಹಿನ್ನೆಲೆಯಲ್ಲಿ 2011 ಮತ್ತು 2014ರ ಮಧ್ಯೆ ಈ ಎಲ್ಲ ಬಂಕರ್‌ಗಳನ್ನೂ ತೆರವು ಮಾಡಲಾಗಿತ್ತು. ಈಗ ಮತ್ತೆ ಸಮಸ್ಯೆ ತಲೆದೋರಿರುವ ಕಾರಣ ಇವುಗಳನ್ನು ಮರುನಿಯೋಜಿಸಲಾಗಿದೆ.

ಏಕೆ ಬೇಕು ಈ ಬಂಕರ್‌?:
ಉಗ್ರರ ಮುಕ್ತ ಸಂಚಾರಕ್ಕೆ ತಡೆಯೊಡ್ಡುವುದೇ ಇದರ ಉದ್ದೇಶ. ಉಗ್ರರು ನಾಗರಿಕರ ಮೇಲೆ ದಾಳಿ ನಡೆಸಿ ಕ್ಷಣಮಾತ್ರದಲ್ಲೇ ಆ ಸ್ಥಳದಿಂದ ಮತ್ತೂಂದೆಡೆಗೆ ತೆರಳುತ್ತಾರೆ. ಅವರು ಈ ರೀತಿ ಮುಕ್ತವಾಗಿ ಸಂಚರಿಸುವುದನ್ನು ತಡೆಯುವುದಕ್ಕಾಗಿ ಬಂಕರ್‌ಗಳನ್ನು ಸ್ಥಾಪಿಸಲಾಗಿದೆ. ಹೆಚ್ಚುವರಿ ಅರೆಸೇನಾ ಪಡೆಯ 50 ಕಂಪನಿಗಳನ್ನು ಇಲ್ಲಿ ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಸಿದ್ದರಾಮಯ್ಯ, ನಿಮಗೂ 2 ಡೋಸ್ ಲಸಿಕೆ ಸಿಕ್ಕಿದೆಯಲ್ಲವೇ? : ಬಿಜೆಪಿ ಪ್ರಶ್ನೆ

ನಿರ್ಗತಿಕನ ಶವ ಪತ್ತೆ
ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯಲ್ಲಿ ಶುಕ್ರವಾರ ಸ್ಥಳೀಯೇತರ ನಿರ್ಗತಿಕನೊಬ್ಬರ ಮೃತದೇಹ ಪತ್ತೆಯಾಗಿದೆ. ತಲೆಗೆ ಗಾಯಗಳಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಇದು ಉಗ್ರರ ಕೃತ್ಯವೇ ಎಂಬುದು ದೃಢಪಟ್ಟಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.