ಕೋಳಿಗಳಲ್ಲಿ ಕೊಕ್ಕರೆ ರೋಗ! : ನೂರಾರು ಕೋಳಿಗಳ ಸಾವು


Team Udayavani, Oct 22, 2021, 9:53 PM IST

hunasuru news

ಹುಣಸೂರು: ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಾಟಿ ಕೋಳಿಗಳಿಗೆ ಕೊಕ್ಕರೆ ರೋಗ ಕಾಣಿಸಿಕೊಂಡು ನಾಟಿ ಕೋಳಿಗಳು ಸಾವನ್ನಪ್ಪುತ್ತಿದ್ದು, ಕೋಳಿ ಸಾಕಣೆದಾರರದಲ್ಲಿ ಆತಂಕ ಮೂಡಿಸಿದೆ.

ತಾಲೂಕಿನ ನೇರಳಕುಪ್ಪೆ, ಕಚುವಿನಹಳ್ಳಿ, ಚಿಲ್ಕುಂದ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಕೋಳಿಗಳಿಗೆ ಕೊಕ್ಕರೆ ರೋಗ ಹರಡಿದ್ದು, ನಿತ್ಯ ನೂರಾರು ಕೋಳಿಗಳು ಸಾಯುತ್ತಿವೆ.

ನೇರಳಕುಪ್ಪೆಯ ಸಣ್ಣತಮ್ಮೇಗೌಡ, ಕೃಷ್ಣ, ಮಧುರ, ದೇವರಾಜು, ನಾಗರಾಜು, ಮಲ್ಲಮ್ಮ ಚಿಲ್ಕುಂದ ಗ್ರಾಮದ ರಾಮಚಂದ್ರಯ್ಯ, ನಂಜುಂಡಯ್ಯ ಹಾಗೂ ಮಹದೇವಮ್ಮ ಮತ್ತಿತರಿಗೆ ಸೇರಿದ ನೂರಾರು    ಕೋಳಿಗಳು ಸಾವನ್ನಪ್ಪುತ್ತಿದ್ದು, ಕೊಳಿ ಸಾಕಣೆಯಿಂದಲೇ ಜೀವನೋಪಾಯ ನಡೆಸಿ ಬದುಕು ಕಟ್ಟಿಕೊಂಡಿದ್ದವರ ಸ್ಥಿತಿ ಅತಂತ್ರವಾಗುವ ಭೀತಿ ಎದುರಾಗಿದ್ದು.  ಕೋಳಿ ಸಾವು ಮುಂದುವರೆಯುತ್ತಲೇ ಇದೆ.

ಇದನ್ನೂ ಓದಿ:ಅನಾಥ ಜೀವಕ್ಕೆ ಆಧಾರವಾಗಿ ಮಾನವೀಯತೆ ಮೆರೆದ ಎಸ್.ಆರ್.ಗಜಾಕೋಶ

ಮಲಗಿದಲ್ಲೇ ಕೋಳಿಸಾವು;  ಕೋಳಿಗಳು ಮೇವು-ನೀರನ್ನು ಬಿಟ್ಟು ಕುಳಿತಲ್ಲೇ ತೂಕಡಿಸುತ್ತಲೇ ಒಂದೇ ದಿನದಲ್ಲಿ ಸಾವನ್ನಪ್ಪುತ್ತವೆ. ಇದು ಸಾಂಕ್ರಾಮಿಕ ರೋಗವಾಗಿದ್ದು, ಒಂದು ಕೋಳಿಗೆ ರೋಗ ಕಾಣಿಸಿಕೊಂಡಲ್ಲಿ ಇಡೀ ಊರಿಗೆ ಹರಡಿ ನಾಟಿ ಕೋಳಿಗಳ ಸರಣಿ ಸಾವು ಮುಂದುವರೆದಿದೆ.

ಗ್ರಾಮೀಣ ಪ್ರದೇಶದ ನಾಟಿ ಕೋಳಿ ಸಾಕಣೆಯನ್ನೇ ಉಪ ಕಸುಬನ್ನಾಗಿಸಿಕೊಂಡಿದ್ದರೆ, ಕೆಲ ಕುಟುಂಬಗಳು ಜೀವನೋಪಾಯಕ್ಕಾಗಿ ನಾಟಿಕೋಳಿ ಸಾಕುತ್ತಿದ್ದಾರೆ, ಈ ರೋಗದಿಂದ ಕೋಳಿಗಳ ಸಾವು ಆರ್ಥಿಕವಾಗಿ ನಷ್ಟ ಉಂಟು ಮಾಡಿದ್ದರೆ, ಮಾರುಕಟ್ಟೆಯಲ್ಲಿ ನಾಟಿ ಕೋಳಿ ಮಾಂಸ ಹಾಗೂ ಮೊಟ್ಟೆಗೂ ದೊಡ್ಡ ಹೊಡೆತ ಬೀಳಲಿದೆ.

ನಾಟಿಕೋಳಿ ಸಾಕಣೆಯಿಂದ ಜೀವನ ಸಾಗಿಸುತ್ತಿರುವ ನಮ್ಮಂತ ಅನೇಕ ಕುಟುಂಬಗಳು ಕೊಕ್ಕರೆ ರೋಗದಿಂದ ತತ್ತರಿಸಿದ್ದಾರೆ. ಇದರಿಂದ ಹಳ್ಳಿಗಳಲ್ಲಿ ನಾಟಿಕೋಳಿ ಮಾಂಸ ಹಾಗೂ ಮೊಟ್ಟೆ ಕೊರತೆ ಉಂಟಾಗಲಿದ್ದು, ಪಶುವೈದ್ಯ ಇಲಾಖೆ ರೋಗನಿಯಂತ್ರಣಕ್ಕೆ ತಕ್ಷಣವೇ ಕ್ರಮವಹಿಸಿ, ಸಾಕಣೆದಾರರ ನೆರವಿಗೆ ನಿಲ್ಲಬೇಕು

-ರಾಮಚಂದ್ರಯ್ಯ, ಚಿಲ್ಕುಂದ.

ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು:

ಬಹುತೇಕರು ಲಸಿಕೆ ಹಾಕಿಸುವುದಿಲ್ಲ. ಬದಲಾಗಿ ರೋಗ ಬಂದ ನಂತರ ಕೋಳಿ ತರುತ್ತಾರೆ. ಪಶುವೈದ್ಯ ಇಲಾಖೆವತಿಯಿಂದ ಪ್ರತಿ ಗುರುವಾರ ಎಲ್ಲಾ ಪಶು ಆಸ್ಪತ್ರೆಗಳಲ್ಲಿ ಕೊಕ್ಕರೆ ರೋಗಕ್ಕೆ ಮುಂಜಾಗ್ರತೆಯಾಗಿ ಉಚಿತವಾಗಿ ಲಸಿಕೆ ನೀಡಲಾಗುತ್ತದೆ. ಕೋಳಿ ಸಾಕಣೆದಾರರು ಕಡ್ಡಾಯವಾಗಿ ಲಸಿಕೆ ಹಾಕಿಸುವುದು ಒಳಿತು.

-ಜಿಲ್ಲಾ ಪಶುವೈದ್ಯಕೀಯಇಲಾಖೆ ಉಪನಿರ್ದೇಶಕ ಡಾ. ಷಡಕ್ಷರಸ್ವಾಮಿ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.