300ರ ಬದಲು ಇರುವುದು 22 ಯಂತ್ರಗಳು !

ಉಭಯ ಜಿಲ್ಲೆಗಳಲ್ಲಿ 47 ಸಾವಿರ ಹೆಕ್ಟೇರ್‌ ಭತ್ತ ಕೃಷಿ

Team Udayavani, Oct 23, 2021, 6:50 AM IST

300ರ ಬದಲು ಇರುವುದು 22 ಯಂತ್ರಗಳು !

ಉಡುಪಿ: ಕರಾವಳಿಯಲ್ಲಿ ಭತ್ತದ ಬೆಳೆ ಕಟಾವಿಗೆ ಬಂದಿದ್ದು, ಕಟಾವು ಯಂತ್ರಗಳಿಗೆ ಬೇಡಿಕೆ ಕಂಡುಬರುತ್ತಿದೆ. ಎರಡೂ ಜಿಲ್ಲೆಗಳಲ್ಲಿ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಕಟಾವು ಯಂತ್ರಗಳಿದ್ದರೂ ಗದ್ದೆಗಳು ಏಕಕಾಲದಲ್ಲಿ ಕಟಾವಿಗೆ ಬರುವುದರಿಂದ ಯಂತ್ರಗಳ ಕೊರತೆ ಉಂಟಾಗುತ್ತಿದೆ. ಖಾಸಗಿ ಯಂತ್ರಗಳನ್ನು ಅವಲಂಬಿಸಬೇಕಾಗಿದ್ದು, ದುಬಾರಿ ದರ ವಿಧಿಸದಂತೆ ಜಿಲ್ಲಾಡಳಿತದಿಂದ ಸೂಚನೆ ನೀಡಲಾಗಿದೆ. ಈ ನಡುವೆ ಆಗಾಗ ಮಳೆಯೂ ಬರುತ್ತಿದ್ದು, ತುರ್ತಾಗಿ ಕಟಾವು ಮುಗಿಸದೆ ಇದ್ದರೆ ನಷ್ಟಕ್ಕೆ ಒಳಗಾಗುವ ಚಿಂತೆಯಲ್ಲಿ ರೈತರಿದ್ದಾರೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಒಟ್ಟು 47 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಭತ್ತದ ಬೇಸಾಯ ಮಾಡಲಾಗಿದ್ದು, ಬಹುತೇಕ ಕಟಾವು ಹಂತದಲ್ಲಿದೆ.

ಯಂತ್ರದ ಕೊರತೆ
ಕೂಲಿಯಾಳುಗಳ ಸಮಸ್ಯೆಯಿಂದ ಉಭಯ ಜಿಲ್ಲೆಗಳಲ್ಲಿ ಬಹುತೇಕ ಯಂತ್ರದ ಮೂಲಕ ಕಟಾವು ನಡೆಯುತ್ತಿದೆ. ಉಡುಪಿ ಜಿಲ್ಲೆಯ ಕೃಷಿಯಂತ್ರಧಾರೆ ಕೇಂದ್ರದಲ್ಲಿರುವುದು ಕೇವಲ 8 ಯಂತ್ರಗಳು ಮಾತ್ರ. ಒಟ್ಟು 36 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದ್ದು, ಕನಿಷ್ಟ 250ರಿಂದ 300ರಷ್ಟು ಯಂತ್ರಗಳ ಆವಶ್ಯಕತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 11 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದೆ. ಇಲ್ಲಿ 14 ಕಟಾವು ಯಂತ್ರಗಳಿವೆ. ಗದ್ದೆಗಳು ಏಕಕಾಲದಲ್ಲಿ ಕಟಾವಿಗೆ ಬರುವಾಗ ಸಮಸ್ಯೆ ಎದುರಾಗುತ್ತದೆ.

ಹೆಚ್ಚು ದರ ನೀಡಿದರೂ ಯಂತ್ರವಿಲ್ಲ
ಉಡುಪಿ ಜಿಲ್ಲೆಯ ಕುಂದಾಪುರ, ಬೈಂದೂರು, ಬ್ರಹ್ಮಾವರ ಭಾಗಗಳಲ್ಲಿ ಕಟಾವು ಆರಂಭಗೊಂಡಿದೆ. ಕೃಷಿ ಯಂತ್ರಧಾರೆಯ ಯಂತ್ರಗಳು ಅದಾಗಲೇ ಬುಕಿಂಗ್‌ ಆಗಿವೆ. ತಮಿಳುನಾಡು ಭಾಗದಿಂದ ಕಟಾವು ಯಂತ್ರಗಳು ಆಗಮಿಸಿವೆ. ಇವರು ತಾಲೂಕು, ಗ್ರಾಮವಾರು ಬುಕಿಂಗ್‌ ಆಗಿರುವ ಕಟಾವು ಮುಗಿಸಿ ಬೇರೆ ಭಾಗಗಳಿಗೆ ತೆರಳುವುದರಿಂದ ಇನ್ನುಳಿದವರು ಕಾಯಬೇಕಾದ ಸ್ಥಿತಿ ಇದೆ.

ಇದನ್ನೂ ಓದಿ:ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಹೊರೆಯಾಗದ ದರಕ್ಕೆ ಸೂಚನೆ
ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಲಭ್ಯವಿರುವ ಕರ್ತಾರ್‌ ಮಾದರಿಯ ಕಂಬೈನ್ಡ್ ಹಾರ್ವೆಸ್ಟರ್‌ನಿಂದ ಕಟಾವಿಗೆ ಜಿಲ್ಲಾ ಸಮಿತಿಯಿಂದ ಪ್ರತೀ ಗಂಟೆಗೆ 1,800 ರೂ. ಬಾಡಿಗೆ ನಿಗದಿಪಡಿಸಲಾಗಿದೆ. ಖಾಸಗಿ ಕಟಾವು ಯಂತ್ರಗಳ ಮಾಲಕರು ರೈತರ ಹಿತವನ್ನು ಗಮನದಲ್ಲಿರಿಸಿ, ಕೃಷಿ ಯಂತ್ರಧಾರೆ ಕೇಂದ್ರದ ಬಾಡಿಗೆ ದರವನ್ನು ಮಾನದಂಡವಾಗಿಟ್ಟುಕೊಂಡು ರೈತರೊಂದಿಗೆ ಸ್ಥಳೀಯವಾಗಿ ಚರ್ಚಿಸಿ, ನ್ಯಾಯೋಚಿತ ದರ ವಿಧಿಸಬೇಕು ಎಂದು ಜಿಲ್ಲಾಧಿಕಾರಿಗಳು ಈಗಾಗಲೇ ಸೂಚನೆ ನೀಡಿದ್ದಾರೆ. ಜಿಲ್ಲಾಡ ಳಿತ ನಿಗದಿಪಡಿಸಿರುವ ದರ 2017ರದು, ಅನಂತರ ಪರಿಷ್ಕರಣೆ ಮಾಡ ಲಾಗಿಲ್ಲ. ಈಗ ಯಂತ್ರೋಪ ಕರಣ ಗಳ ಬಿಡಿಭಾಗ ಗಳು, ಇಂಧನ ವೆಚ್ಚ, ಚಾಲಕನ ಭತ್ತೆ ಹೆಚ್ಚಳ ವಾದ ಪರಿಣಾಮ ಕೆಲವು ಕಂಬೈನ್‌x ಹಾರ್ವೆಸ್ಟರ್‌ಗಳು 2,500 ರೂ.ವರೆಗೂ ದರ ತೆಗೆದುಕೊಳ್ಳುತ್ತಿದ್ದಾರೆ.

ಹೆಚ್ಚುವರಿ
ಯಂತ್ರಕ್ಕೆ ಬೇಡಿಕೆ
ಜಿಲ್ಲೆಯ 2-3 ಪಂಚಾಯತ್‌ಗಳಿಗೆ ತಲಾ 1ರಂತೆ ಕಟಾವು ಯಂತ್ರ ನೀಡಬೇಕೆಂದು ಕೃಷಿ ಇಲಾಖೆ ಮೂಲಕ ಸರಕಾರಕ್ಕೆ ಹಲವಾರು ಬಾರಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ ಸರಕಾರ ಕ್ರಮ ತೆಗೆದುಕೊಂಡರೆ ಮತ್ತಷ್ಟು ಯಂತ್ರಗಳು ಯಂತ್ರಧಾರೆಯ ಮೂಲಕ ಕೃಷಿಕರ ಸೇವೆಗೆ ಲಭ್ಯವಾಗಲಿವೆ.

ದ.ಕ. ಜಿಲ್ಲೆಯ 11 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಕೃಷಿ ಮಾಡಲಾಗಿದೆ. ಕೃಷಿಯಂತ್ರಧಾರೆ ಕೇಂದ್ರಗಳಲ್ಲಿ 14 ಕಟಾವು ಯಂತ್ರಗಳಿವೆ. ಏಕಕಾಲದಲ್ಲಿ ಕಟಾವಿಗೆ ಬರುವಾಗ ಸಮಸ್ಯೆ ಎದುರಾಗುತ್ತದೆ. ಶಿವಮೊಗ್ಗ, ತಮಿಳುನಾಡು ಭಾಗದಲ್ಲಿ ಕಟಾವು ಮುಗಿದ ಬಳಿಕ ಯಂತ್ರಗಳು ಇಲ್ಲಿಗೆ ಆಗಮಿಸುತ್ತವೆ.
-ಸೀತಾ, ಜಂಟಿ ನಿರ್ದೇಶಕರು, ಕೃಷಿ ಇಲಾಖೆ, ದ.ಕ.

ಉಡುಪಿ ಜಿಲ್ಲೆಯಲ್ಲಿ ಕಟಾವು ಆರಂಭಗೊಂಡಿದೆ. ಹೊರಗಿನಿಂದ ಬರುವ ಯಂತ್ರಗಳ ಸಾಮರ್ಥ್ಯಕ್ಕನು ಗುಣವಾಗಿ ದರ ನಿಗದಿ ಮಾಡಲಾಗುತ್ತಿದೆ. ರೈತರಿಗೆ ಯಾವುದೇ ಹೊರೆಯಾಗದ ದರ ವಿಧಿಸುವಂತೆ ಹಾರ್ವೆಸ್ಟರ್‌ಗಳಿಗೆ ಸೂಚನೆ ನೀಡಲಾಗಿದೆ.
-ಡಾ| ಎಚ್‌. ಕೆಂಪೇಗೌಡ, ಜಂಟಿ ಕೃಷಿ ನಿರ್ದೇಶಕರು, ಉಡುಪಿ

-ಪುನೀತ್‌ ಸಾಲ್ಯಾನ್‌

 

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.