ಕಿತ್ತೂರು ಉತ್ಸವ ಮಾಡುವ ಭಾಗ್ಯ ದೊರೆತಿರುವುದು ಪುಣ್ಯದ ಕಾರ್ಯ: ಸಿಎಂ ಬೊಮ್ಮಾಯಿ
Team Udayavani, Oct 23, 2021, 1:36 PM IST
ಹುಬ್ಬಳ್ಳಿ: ರಾಣಿ ಚನ್ನಮ್ಮಳ ನಗರದಲ್ಲಿ ಮೂರ್ತಿ ಮಾಡಬೇಕಾದರೆ ಅದು ದೊಡ್ಡ ಹೋರಾಟವಾಗಿತು. ನಮ್ಮ ತಂದೆಯವರು ಉಸ್ತುವಾರಿ ಸಚಿವರಿದ್ದಾಗ ಎರಡು ವರ್ಷದ ಸುದೀರ್ಘ ಹೋರಾಟದ ಫಲವಾಗಿ ಈ ವೃತ್ತದಲ್ಲಿ ಮೂರ್ತಿ ಪ್ರತಿಷ್ಠಾಪಿಸಲಾಯಿತು. ಈಗ ಕಿತ್ತೂರು ಉತ್ಸವ ಮಾಡುವ ಭಾಗ್ಯ ನನ್ನ ಪಾಲಿಗೆ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ಶನಿವಾರ ಕಿತ್ತೂರ ರಾಣಿ ಚನ್ನಮ್ಮಳ ಜಯಂತಿ ಅಂಗವಾಗಿ ಇಲ್ಲಿಯ ಚನ್ನಮ್ಮನ ಮೂರ್ತಿಗೆ ಮಾಲಾರ್ಪಣೆ ಮಾಡಿ ನಂತರ ಮಾತನಾಡಿದ ಅವರು, ಬ್ರಿಟೀಷರ ವಿರುದ್ಧ ರಣಕಹಳೆ ಮೊಳಗಿಸಿದ ರಾಣಿ ಚನ್ನಮ್ಮ ಮೂರ್ತಿಯನ್ನು ನಗರದಲ್ಲಿ ಸ್ಥಾಪನೆ ಮಾಡಲು ಸಾಕಷ್ಟು ಹೋರಾಟಗಳು ನಡೆದವು. ಆದರೆ ಅದು ಕೆಲ ವರ್ಷಗಳಲ್ಲೇ ಈಡೇರಿತು. ಇದೀಗ ವೀರ ವನಿತೆಯ ಉತ್ಸವ ಮಾಡುವ ಭಾಗ್ಯ ನನಗೆ ದೊರೆತಿರುವುದು ಪುಣ್ಯದ ಕಾರ್ಯ ಎಂದರು.
ಇದನ್ನೂ ಓದಿ:ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ: ಎಚ್ ಡಿ ಕುಮಾರಸ್ವಾಮಿ
2011ರಲ್ಲಿ ನಾನು ಉಸ್ತುವಾರಿ ಸಚಿವನಿದ್ದಾಗ ಕಿತ್ತೂರ ಪ್ರಾಧಿಕಾರ ಮಾಡಿ ಅಂದು ಎಂಟು ಕೋಟಿ ರೂ. ಬಿಡುಗಡೆಗೊಳಿಸಿ ಆ ಕೆಲಸ ಪ್ರಾರಂಭಿಸಲಾಗಿತ್ತು. ಈ ವರ್ಷ 50 ಕೋಟಿ ಕ್ರಿಯಾಯೋಜನೆಗೆ ಅನುಮೋದನೆ ಕೊಡಲಾಗಿದೆ. ಹಣವನ್ನು ಸಹ ಬಿಡುಗಡೆ ಮಾಡುತ್ತಿದ್ದೇವೆ. ಬರುವ ದಿನಗಳಲ್ಲಿ ಕಿತ್ತೂರ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನ ಎಲ್ಲ ಸೂತ್ರಗಳನ್ನು ಬಿಜೆಪಿ ಸರ್ಕಾರ ಈಡೇರಿಸುತ್ತದೆ ಎಂದು ಹೇಳಿದರು.
ಬೃಹತ್ ಕೈಗಾರಿಕೆ ಸಚಿವ ಮುರಗೇಶ ನಿರಾಣಿ, ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕ ರಾಜುಗೌಡ, ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ