ಪರಿಸರ ತತ್ತ್ವಗಳ ಪ್ರಕಾರ ಜೀವನ ಶೈಲಿಯನ್ನು ಬದಲಾಯಿಸಿ :ಮಮತಾ ರೈ
ಪರಿಸರ ಬಿಕ್ಕಟ್ಟನ್ನು ತಡೆಯಲು ಉಳಿದಿರುವ ಏಕೈಕ ಆಯ್ಕೆ
Team Udayavani, Oct 23, 2021, 2:23 PM IST
ಮಣಿಪಾಲ: “ಪರಿಸರ ತತ್ತ್ವಗಳ ಪ್ರಕಾರ ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳುವುದು ಮಾತ್ರ ನಾವು ಎದುರಿಸುತ್ತಿರುವ ಪರಿಸರ ಬಿಕ್ಕಟ್ಟನ್ನು ತಡೆಯಲು ಉಳಿದಿರುವ ಏಕೈಕ ಆಯ್ಕೆಯಾಗಿದೆ” ಎಂದು ಕಡಿಕೆ ಟ್ರಸ್ಟ್, ಕಾರ್ಕಳದ ಅಧ್ಯಕ್ಷೆ ಶ್ರೀಮತಿ ಮಮತಾ ರೈ ಹೇಳಿದರು.
ಮಾಹೆಯ ಗಾಂಧಿಯ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ನ ವಿದ್ಯಾರ್ಥಿಗಳು ಆಯೋಜಿಸಿದ್ದ ‘ಇಕೋಸ್ಪಾಟ್’ ಕಾರ್ಯಕ್ರಮದಲ್ಲಿ ಭಾಗವಹಿಸಿ ‘ಸುಸ್ಥಿರ ಜೀವನಶೈಲಿ’ ಯ ಕುರಿತು ಮಾತನಾಡಿದ ಅವರು, ”ಸುಸ್ಥಿರ ಜೀವನದ ಹಲವಾರು ಉದಾಹರಣೆಗಳನ್ನು ನೀಡಿ, ಈ ಮೂಲಕ ನಾವು ಒಟ್ಟಾಗಿ ಇಂಗಾಲದ ಹೆಜ್ಜೆಗುರುತನ್ನು ಇಳಿಸಲು ಸಾಧ್ಯ” ಎಂದರು.
“ನಾವು ಬಳಸುವ ವಸ್ತುಗಳ ಮೇಲೆಯೇ ಉತ್ಪಾದನೆ ಅವಲಂಭಿತವಾಗಿರುವುದರಿಂದ, ಜನರು ತಮ್ಮ ಜೀವನವನ್ನು ಪರಿಸರಮಯವಾಗಿಸಿದಾಗ, ಉತ್ಪಾದಕರೂ ಕೂಡ ತಮ್ಮ ನಿಲುವನ್ನು ಬದಲಾಯಿಸ ಬೇಕಾಗುತ್ತದೆ.” ಎಂದು ಅವರು ಹೇಳಿದರು.
ಮಮತಾ ರೈ ಅವರ ಅವಿರತ ಕೆಲಸವು ಉಡುಪಿ ಸೀರೆ ನೇಯ್ಗೆಯನ್ನು ಅಳಿವಿನ ಹಂತದಿಂದ ಪುನರುಜ್ಜೀವನದ ಹಾದಿಗೆ ತಿರುಗಿಸಿದೆ. ಪ್ರಸ್ತುತ ಉಡುಪಿ ಸೀರೆ ನೇಕಾರರ ಸಂಖ್ಯೆ ತಾಳಿಪಾಡಿ ನೇಕಾರರ ಸೊಸೈಟಿಯಲ್ಲಿ 8 ರಿಂದ 34 (ಅವಿಭಜಿತಜಿಲ್ಲೆಗಳಲ್ಲಿ 42 ರಿಂದ 74) ಕ್ಕೆ ಹೆಚ್ಚಾಗಿದೆ. ಅವರ ಪ್ರಯತ್ನದಿಂದಾಗಿ ಎರಡು ದಶಕಗಳ ನಂತರ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಯುವಕರು ನೇಕಾರಿಕೆಯನ್ನು ಕೈಗೆತ್ತಿಗೊಳ್ಳುತ್ತಿದ್ದಾರೆ.ಸರಳ ಮತ್ತು ಪರಿಸರ ಪ್ರಜ್ಞೆಯ ಜೀವನ, ತೋಟಗಾರಿಕೆ, ಮನೆ ಅಡುಗೆ ಮತ್ತು ಕೈಮಗ್ಗ ಮತ್ತು ಕೈಯಿಂದ ಮಾಡಿದ ವಸ್ತುಗಳನ್ನು ಧರಿಸಲು ಮಮತಾ ರೈ ಅನೇಕರಿಗೆ ಸ್ಫೂರ್ತಿ ನೀಡಿದ್ದಾರೆ.
ತಮ್ಮ ಅಧ್ಯಕ್ಷೀಯ ಮಾತಿನಲ್ಲಿ, GCPAS ನ ನಿರ್ದೇಶಕರಾದ ಪ್ರೊಫೆಸರ್ ವರದೇಶ್ ಹಿರೇಗಂಗೆ, ”ಸ್ಪರ್ಧಾ ಮನೋಭಾವದ ಬದಲಾಗಿ ಸಹಕಾರ ಮನೋಭಾವವೇ ಮೌಲ್ಯವಾದಾಗ ಮಾನವಕುಲದ ಸರ್ವೋದಯ ಸಾಧ್ಯ; ನಾವು ನಡೆಸುವ ಬದುಕಿಗೂ ಮತ್ತು ಹವಾಮಾನ ವೈಪರೀತ್ಯಕ್ಕೂ ನೇರವಾದ ಸಂಬಂಧವಿದೆ” ಎಂದರು.
ಆಕರ್ಷಿಕಾ ಸಿಂಗ್ ಕಾರ್ಯಕ್ರಮವನ್ನು ನಿರೂಪಿಸಿದರು, ಪ್ರಿಯಾ ಗಾರ್ಗ್ ಸ್ವಾಗತಿಸಿ, ಮುಖ್ಯ ಅತಿಥಿಯನ್ನು ಪರಿಚಯಿಸಿದರು. ಮನಸ್ವಿನಿ ಶ್ರೀರಂಗಂ ‘ಇಕೋಸ್ಪಾಟ್’ ನ ಕುರಿತು ಮಾತನಾಡಿದರು. ವೆಲಿಕಾ ವಂದನಾರ್ಪಣೆ ಮಾಡಿದರು. ‘ಬಿಎ- ಎಸ್ಥೆಟಿಕ್ಸ್ ಅಂಡ್ ಪೀಸ್ ಸ್ಟಡೀಸ್’ ನ ತಮ್ಮ ನಡೆಸುತ್ತಿರುವ ‘ ಇಕೋಸ್ಪಾಟ್ ‘ ನ ಭಾಗವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
‘ಇಕೋಸ್ಪಾಟ್’ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ನ ವಿದ್ಯಾರ್ಥಿಗಳು ‘ಸುಸ್ಥಿರ ಜೀವನ’ ಕ್ರಮದ ಕುರಿತು ನಡೆಸುತ್ತಿರುವ ಕಾರ್ಯಕ್ರಮವಾಗಿದೆ. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಅಭಿಯಾನವನ್ನು ಜನರಿಗೆ ತಲುಪಿಸಲು ಮತ್ತು ಸುಸ್ಥಿರ ಜೀವನಶೈಲಿಯ ಬಗ್ಗೆ ಜಾಗೃತಿ ಮೂಡಿಸಲು ಇದನ್ನು ಸಂಘಟಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ