ಶ್ರೀಗಂಧ ಚೋರನ ಬಂಧನ, 13 ಕೆ.ಜಿ ಹಸಿ ಗಂಧದ ತುಂಡುಗಳ ವಶ
Team Udayavani, Oct 23, 2021, 4:35 PM IST
ಹನೂರು: ಶ್ರೀಗಂಧದ ಮರವನ್ನು ಕಡಿದು ತುಂಡುಗಳಾಗಿ ಪರಿವರ್ತಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, 13 ಕೆ.ಜಿ ತೂಕದ ಗಂಧದ ತುಂಡುಗಳನ್ನು ವಶಪಡಿಸಿಕೊಳ್ಳುವಲ್ಲಿ ಪಿ.ಜಿ.ಪಾಳ್ಯ ವನ್ಯಜೀವಿ ವಲಯದ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಘಟನೆ ವಿವರ
ಹನೂರು ತಾಲೂಕಿನ ಬೂದಿಪಡುಗ ಗ್ರಾಮದ ಸಿದ್ದೇಗೌಡ (38) ಮತ್ತು ಕೊಳ್ಳೇಗಾಲ ತಾಲೂಕಿನ ಕರಳೆಕಟ್ಟೆ ಗ್ರಾಮದ ರುದ್ರ (30) ಈ ಇಬ್ಬರು ಆರೋಪಿಗಳು ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಪಿ.ಜಿ.ಪಾಳ್ಯ ವನ್ಯಜೀವಿ ವಲಯದ ಆಂಡಿಪಾಳ್ಯ ಗಸ್ತಿನ ಚಿಕ್ಮಮ್ಮನ ಕೆರೆ ಅರಣ್ಯ ಪ್ರದೇಶದಲ್ಲಿ ಗಂಧದ ಮರವನ್ನು ಕಡಿದು ತುಂಡುಗಳಾಗಿ ಪರಿವರ್ತಸುತ್ತಿರುವುದಾಗಿ ಅರಣ್ಯಾಧಿಕಾರಿಗಳಿಗೆ ಮಾಹಿತಿ ದೊರೆತಿದೆ. ಕೂಡಲೇ ಕಾರ್ಯಪ್ರವೃತ್ತರಾದ ಅರಣ್ಯಾಧಿಕಾರಿಗಳ ತಂಡ ಡಿಎಫ್ಓ ಏಡುಕೊಂಡಲು ಮತ್ತು ಎಸಿಎಫ್ ವನಿತಾ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಿದ್ದಾರೆ.
ದಾಳಿಯ ವೇಳೆ ರುದ್ರ ಎಂಬಾತ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದಾನೆ. ಮತ್ತೋರ್ವ ಆರೋಪಿ ಸಿದ್ದೇಗೌಡನನ್ನು ವಶಕ್ಕೆ ಪಡೆದು ಬಂಧಿತನಿಂದ 13 ಕೆ.ಜಿ ತೂಕದ 1 ಹಸಿ ಗಂಧದ ತುಂಡುಗಳು, 1 ಚಿಕ್ಕ ಗರಗಸ, 1 ಮಚ್ಚು, ಮತ್ತು 1 ಕೊಡಲಿಯನ್ನು ವಶಕ್ಕೆ ಪಡೆಯಲಾಗಿದೆ.
ಈ ಸಂಬಂಧ ಪಿ.ಜಿ.ಪಾಳ್ಯ ಅರಣ್ಯ ವಲಯದಲ್ಲಿ ಪ್ರಕರಣ ದಾಖಲಿಸಿಕೊಂಡು ತಲೆಮರೆಸಿಕೊಂಡಿರುವ ಆರೋಪಿ, ರುದ್ರನ ಪತ್ತೆಗೆ ಬಲೆ ಬೀಸಲಾಗಿದೆ.
ದಾಳಿಯಲ್ಲಿ ವಲಯ ಅರಣ್ಯಾಧಿಕಾರಿ ಸೈಯದ ಸಾಬ್ ನಧಾಫ್, ಉಪ ವಲಯ ಅರಣ್ಯಾಧಿಕಾರಿ ನವೀನ್ಕುಮಾರ್.ವಿ, ಅರಣ್ಯ ರಕ್ಷಕ ವಿಠ್ಠಲ ಬೀರಪ್ಪ ಶಿರಗಾಂವಿ, ಹೊರಗುತ್ತಿಗೆ ನೌಕರರಾದ ಮುರುಗೇಶ್, ನಂದೀಶ್, ಮಾದೇಶ್, ವಾಹನ ಚಾಲಕ ಶಿವಕುಮಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ