ಡ್ರೋಣ್ ಮೂಲಕ ಕೀಟನಾಶಕ ಸಿಂಪಡಣೆ: ಕೆಕೆಆರ್ ಡಿಬಿಯಿಂದ ಪ್ರಾಯೋಗಿಕ ಜಾರಿ


Team Udayavani, Oct 23, 2021, 6:34 PM IST

Untitled-1

ಕಲಬುರಗಿ: ರೈತರ ಹೊಲಗಳಿಗೆ ಇಸ್ರೇಲ್ ಮಾದರಿಯಲ್ಲಿ ಡ್ರೋಣ್ ಮೂಲಕ ಕೀಟನಾಶಕ ಸಿಂಪಡಿಸುವ ಯೋಜನೆ  ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಪ್ರಾಯೋಗಿಕವಾಗಿ ಜಾರಿ ತರಲು ಮುಂದಾಗಲಾಗಿದೆ ಎಂದು ಮಂಡಳಿಯ ಅಧ್ಯಕ್ಷರಾಗಿರುವ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಹೇಳಿದರು.

ನಗರದ ಬೆಣ್ಣೂರು ಕಲ್ಯಾಣ ಮಂಟಪದಲ್ಲಿ ಕಲಬುರಗಿ ದಕ್ಷಿಣ ಮತಕ್ಷೇತ್ರದ ಒಂಭತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಎರಡು ಸಾವಿರ ರೈತರಿಗೆ ಎರಡು ಕೋ.ರೂ ಬಡ್ಡಿ ರಹಿತ ಬೆಳೆಸಾಲ ವಿತರಿಸಿ ಮಾತನಾಡಿದರು.

ಮಂಡಳಿ ವ್ಯಾಪ್ತಿಯ ಏಳು ಜಿಲ್ಲೆಗಳ ತಲಾ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಡ್ರೋಣ ಮೂಲಕ ಕೀಟನಾಶಕ ಸಿಂಪಡಿಸುವ ಯೋಜನೆಯೊಂದನ್ನು ಜಾರಿಗೆ ತರಲಾಗುತ್ತಿದೆ.‌ ಇದು ಯಶಸ್ವಿ ಯಾದಲ್ಲಿ ಉಳಿದೆಡೆ ವಿಸ್ತರಿಸಲಾಗುವುದು ಎಂದು ಅಪ್ಪುಗೌಡ ವಿವರಿಸಿದರು.

ಅದೇ ರೀತಿ ಕಲಬುರಗಿ ದಕ್ಷಿಣ ಮತಕ್ಷೇತ್ರದ 30 ಹಳ್ಳಿಗಳಲ್ಲಿ 200 ಕೋ.‌ರೂ ವೆಚ್ಚದಲ್ಲಿ 11 ಕೆರೆಗಳನ್ನು ಬೆಣ್ಣೆ ತೋರಾ ಜಲಾಶಯದಿಂದ ನೀರು ಹರಿಸಿ ಭರ್ತಿ ಮಾಡುವ ಹಾಗೂ ರೈತರ ಹೊಲಗಳಿಗೆ ನೀರುಣಿಸುವ ಮಾದರಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆಯಲ್ಲದೇ ಈಗಾಗಲೇ ಈ ಯೋಜನೆಗೆ ಚಾಲನೆ ನೀಡಲಾಗಿದೆ. ಅದೇ ರೀತಿ ಎಂಎಸ್ಕೆ ಮಿಲ್ ಪ್ರದೇಶದಲ್ಲಿ 30 ಕೋ.ರೂ ವೆಚ್ಚದಲ್ಲಿ ಎರಡು ಎಕರೆ ವಿಸ್ತೀರ್ಣ ದಲ್ಲಿ ಸುಸಜ್ಜಿತ ತರಕಾರಿ ಮಾರುಕಟ್ಟೆ ನಿರ್ಮಿಸಲಾಗುತ್ತಿದೆ ಎಂದು ನೆರೆದ ರೈತ ಸಮೂಹಕ್ಕೆ ತಿಳಿ ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹತ್ತಾರು ಯೋಜನೆಗಳನ್ನು ರೂಪಿಸಿದ್ದಾರೆ. ಪ್ರಧಾಮಂತ್ರಿ ಕಿಸಾನ ಸಮ್ಮಾನ ನಿಧಿಯಡಿ ನೇರವಾಗಿ ವರ್ಷಕ್ಕೆ ರೈತರ ಖಾತೆ ಗೆ ಆರು ಸಾವಿರ ಹಾಗೂ ರಾಜ್ಯ ಸರ್ಕಾರದಿಂದ ಆರು ಸಾವಿರ ಜಮಾ ಮಾಡಲಾಗುತ್ತಿದೆ. ಅದೇ ರೀತಿ ಬಸವರಾಜ ಬೊಮ್ಮಾಯಿ ಸಿಎಂ ಆದ ತಕ್ಷಣ ರೈತರ ಮಕ್ಕಳಿಗೆ ಶಿಷ್ಯ ವೇತನ ಜಾರಿ ಯೋಜನೆ ಜಾರಿ ತರಲಾಗಿದೆ. ಹೀಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಅಭಿವೃದ್ಧಿ ಗೆ ಹತ್ತಾರು ಯೋಜನೆಗಳನ್ನು ರೂಪಿಸಿದೆ ಎಂದರು.

ಬೆಳೆಸಾಲ ಹತ್ತು ಪ್ರಮಾಣ ಯತ್ನ:  ಬೇರೆ ಜಿಲ್ಲೆಗಳಲ್ಲಿ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಸಾಲ ಸಿಕ್ತಾ ಇದೆ. ಹೀಗಾಗಿ ಜಿಲ್ಲೆಯಲ್ಲೂ ಈಗ ನೀಡಲಾಗುತ್ತಿರುವ ಸಾಲದ ಪ್ರಮಾಣ ಹತ್ತು ಪಟ್ಟು ದೊರಕುವಂತಾಗಲು ತಾವೂ ಯತ್ನಿಸುವುದಾಗಿ  ದತ್ತಾತ್ರೇಯ ಪಾಟೀಲ್ ರೇವೂರ ಹೇಳಿದರು.

ರೈತರಿಗೆ ಹೆಚ್ಚಿನ ಪ್ರಮಾಣದ ಸಾಲ ದೊರಬೇಕೆಂದರೆ ಬ್ಯಾಂಕ್ ಪುನಶ್ಚೇತನ ಗೊಳ್ಳಬೇಕು. ಹೀಗಾಗಿ ಪಡೆದ ಸಾಲ ಸಕಾಲಕ್ಕೆ ಮರುಪಾವತಿಸಬೇಕೆಂದರು.

ಈ ಹಿಂದೆ ರೈತರಿಗೆ ಸಾಲವನ್ನು ಅತ್ಯಂತ ಕನಿಷ್ಟ ( ಭೀಕ್ಷೆ ರೂಪದಲ್ಲಿ) ವಾಗಿ ನೀಡಲಾಗುತ್ತಿತ್ತು. ಈಗ ಹೆಚ್ಚಿಗೆ ನೀಡಲಾಗುತ್ತಿದೆ. ಇದು ಹೆಚ್ಚಿಸಲಾಗುತ್ಯಿದೆ. ಇದು ತಮ್ಮದು ರೈತಪರ ಎಂಬುದನ್ನು ನಿರೂಪಿಸುತ್ತದೆ ಎಂದರು.

ಉಪಾಧ್ಯಕ್ಷ ಸುರೇಶ ಸಜ್ಜನ್ ಮಾತನಾಡಿ,  ಬ್ಯಾಂಕ್ ಈಗ ಸುಧಾರಣೆಯತ್ತ ಹೆಜ್ಜೆ ಹಾಕುತ್ತಿದೆ. ಹೀಗಾಗಿ ರೈತರಲ್ಲಿ ಮಂದಹಾಸ ಮೂಡಿದೆ. ಮುಂದಿನ ದಿನಗಳಲ್ಲಿ ಹಿರಿಯ ನಿರ್ದೇಶಕರಾಗಿರುವ ಶರಣಬಸಪ್ಪ ಪಾಟೀಲ್ ಅಷ್ಢಗಾ ಅಧ್ಯಕ್ಷರಾಗಲಿದ್ದಾರೆ ಎಂದರು.

ಯುಕೆಪಿ ಕಾಡಾದ ಆಡಳಿತಾಧಿಕಾರಿ ಶರಣಬಸಪ್ಪ ಬೆಣ್ಣೂರು ಮಾತನಾಡಿ, ಸಹಕಾರಿ ಕ್ಷೇತ್ರದ ಬಲವರ್ಧನೆಯಲ್ಲಿ ಪ್ರಮಾಣಿಕತೆಯೇ ಮುಖ್ಯ ವಾಗಿದೆ. ಹೀಗಾಗಿ ಪಡೆದ ಸಾಲ ಸಕಾಲದಲ್ಲಿ ಮರು ಪಾವತಿಸುವುದು ಮುಖ್ಯವಾಗಿದೆ ಎಂದರು.

ಪ್ರಾಸ್ತಾವಿಕ ಮಾತನಾಡಿದ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶರಣಬಸಪ್ಪ ಪಾಟೀಲ್ ಅಷ್ಠಗಾ ಮಾತನಾಡಿ, ರೈತರಿಗೆ ಸಾಲ ನೀಡದಿರುವ ಮಟ್ಟಿಗೆ ತಲುಪಿದ್ದ ಬ್ಯಾಂಕ್ ಪುನಶ್ಚೇತನ ಗೊಳ್ಳಲು ಹಿಂದಿನ ಸಿಎಂ ಬಿ. ಎಸ್. ಯಡಿಯೂರಪ್ಪ ಹಾಗೂ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಇಚ್ಛಾಶಕ್ತಿ ಕಾರಣವಾಗಿದೆ. ಮಧ್ಯಾಮವಧಿ ಸಾಲ ಮನ್ನಾ ಮಾಡಿರುವುದು ಹಾಗೂ 10 ಕೋ. ರೂ ಷೇರು ನೀಡಿರುವುದು ಜತೆಗೆ ಪ್ರಮುಖ ವಾಗಿ 200 ಕೋ ರೂ ಅಪೆಕ್ಸ್ ದಿಂದ ಸಾಲ ದೊರಕಿಸುವಂತೆ ಮಾಡಿರುವುದೇ ಕಾರಣಗಳಾಗಿವೆ ಎಂದು ವಿವರಿಸಿದರು. ಮತ್ತೋರ್ವ ನಿರ್ದೇಶಕ ಅಶೋಕ ಸಾವಳೇಶ್ವರ ಸಹ ಮಾತನಾಡಿದರು.

ಡಿಸಿಸಿ ಬ್ಯಾಂಕ್ ಎಂಡಿ ಚಿದಾನಂದ ನಿಂಬಾಳ, ಜನರಲ್ ಮ್ಯಾನೇಜರ ಮುತ್ತುರಾಜ, ತಹಶಿಲ್ದಾರ ಪ್ರಕಾಶ ಕುದುರೆ, ಸಹಾಯಕ ಕೃಷಿ ನಿರ್ದೇಶಕ ಚಂದರಕಾಂತ ಜೀವಣಗಿ,  ಪ್ರಮುಖರಾದ ರಾಜೇಂದ್ರ ಕರೇಕಲ್, ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರುಗಳಾದ ಲಿಂಗರಾಜ ಧುಳಗೊಂಡ, ಸಂಗಮೇಶ್ವರ ಚೋರಗಸ್ತಿ, ಶಿವರಾಯ ಶಿವಮೂರ್ತಿ, ಶಿವರಾಜ ಎಸ್ ಸಿರಸಗಿ ಕೋಟನೂರ, ಪ್ರಭುಲಿಂಗ ಮೂಲಗೆ, ಗಂಗಾಧರ ಪೊಲೀಸ್ ಪಾಟೀಲ್, ಲಿಂಗಣಗೌಡ ಪಾಟೀಲ್, ಬ್ಯಾಂಕ್ ನ ಅಧಿಕಾರಿ ಗಳಾದ ಬಸವರಾಜ ಕಲ್ಲೂರ, ರುದ್ರಗೌಡ, ಸದಲಾಪುರ, ಪ್ರವೀಣ್, ಮಲ್ಲಿಕಾರ್ಜುನ, ಗಣಪುರ, ಪೂಜಾರಿ ಸೇರಿದಂತೆ ಮುಂತಾದವರಿದ್ದರು.

ಟಾಪ್ ನ್ಯೂಸ್

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.