ನಾಲ್ಕು ದಿನಗಳ ಆಮರಣಾಂತ ಸತ್ಯಾಗ್ರಹ ಅಂತ್ಯ


Team Udayavani, Oct 24, 2021, 2:01 PM IST

ballari news

ಬಳ್ಳಾರಿ: ಎಸ್‌ಟಿ ಮೀಸಲಾತಿ ಹೆಚ್ಚಿಸುವಂತೆಒತ್ತಾಯಿಸಿ ನಗರದ ಡಿಸಿ ಕಚೇರಿ ಎದುರು ಎಸ್‌ಟಿಮೀಸಲಾತಿ ಹೋರಾಟ ಸಮಿತಿ ಕಳೆದ ನಾಲ್ಕುದಿನಗಳಿಂದ ಹಮ್ಮಿಕೊಂಡಿದ್ದ ಆಮರಣಾಂತ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ಶನಿವಾರ ಅಂತ್ಯಗೊಳಿಸಲಾಯಿತು.

ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿದ ಕೂಡ್ಲಿಗಿ ಶಾಸಕಎನ್‌.ವೈ. ಗೋಪಾಲಕೃಷ್ಣ, ಮಾಜಿ ಶಾಸಕ ನಾರಾಸೂರ್ಯನಾರಾಯಣರೆಡ್ಡಿ, ವಾಲ್ಮೀಕಿ ಪೀಠದಮರಡಿ ಜಂಬಯ್ಯ ನಾಯಕ ಅವರು, ಸತ್ಯಾಗ್ರಹಕ್ಕೆಕೂತಿದ್ದ ಯುವ ಮುಖಂಡರಾದ ಬಿ.ಆರ್‌.ಎಲ್‌.ಶ್ರೀನಿವಾಸ್‌, ಗಡ್ಡಂ ತಿಮ್ಮಪ್ಪ ಅವರಿಗೆ ಮನವೊಲಿಸಿ ಎಳೆನೀರು ಕುಡಿಸುವ ಮೂಲಕ ಆಮರಣಾಂತ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ಅಂತ್ಯಗೊಳಿಸಿದರು.

ಈ ವೇಳೆ ಮಾತನಾಡಿದ ಶಾಸಕ ಎನ್‌.ವೈ. ಗೋಪಾಲಕೃಷ್ಣ, ವಾಲ್ಮೀಕಿ ಸಮುದಾಯಕ್ಕೆಮೀಸಲಾತಿ ಪ್ರಮಾಣವನ್ನು ಶೇ.3 ರಿಂದ ಶೇ.7.5ಕ್ಕೆಹೆಚ್ಚಿಸಬೇಕೆಂಬ ಸಮುದಾಯದ ಬೇಡಿಕೆನ್ಯಾಯಯುತವಾಗಿದೆ. ಇಂಥ ಹೋರಾಟವು ಸಹನಡೆಯಲೇಬೇಕಿತ್ತು. ಅದು ಬಳ್ಳಾರಿಯಿಂದಲೇನಡೆದಿರುವುದು ಇಲ್ಲಿನ ನಾಯಕರ ಕೆಚ್ಚನ್ನುತೋರಿಸುತ್ತದೆ.

ಮೀಸಲಾತಿ ಹೆಚ್ಚಳಕ್ಕಾಗಿ ಸತ್ಯಾಗ್ರಹಕೈಗೊಂಡಿರುವ ಯುವ ಮುಖಂಡರಾದ ಬಿ.ಆರ್‌.ಎಲ್‌.ಶ್ರೀನಿವಾಸ್‌, ಗಡ್ಡಂ ತಿಮ್ಮಪ್ಪ ಅವರುಹೋರಾಟವನ್ನು ಆರಂಭಿಸಿದ್ದಾರೆ. ಮುಂದೆ ಇನ್ನುಸಾಕಷ್ಟು ಇದೆ. ಸಮುದಾಯದ ಎಲ್ಲ ಶಾಸಕರನ್ನುಬೆಂಗಳೂರಿನಲ್ಲಿ ಸಭೆ ಕರೆದು ಒಮ್ಮತದ ನಿರ್ಣಯಕೈಗೊಂಡು ಅದಕ್ಕೊಂದು ಮಾರ್ಗಸೂಚಿಗಳನ್ನು ರೂಪಿಸಬೇಕು. ಮುಖ್ಯಮಂತ್ರಿಗಳನ್ನು ಸಹಭೇಟಿಯಾಗಿ ಒತ್ತಡ ಹೇರಲಾಗುವುದು ಎಂದವರು ಭರವಸೆ ನೀಡಿದರು.

ಮಾಜಿ ಶಾಸಕ ನಾರಾ ಸೂರ್ಯನಾರಾಯಣರೆಡ್ಡಿ ಮಾತನಾಡಿ, ಸತ್ಯಾಗ್ರಹ ನಡೆಸಿರುವಶ್ರೀನಿವಾಸ್‌ ಪಾಲಿಕೆ ಚುನಾವಣೆಗೂ ಮುನ್ನ ನನ್ನಬಳಿಗೆ ಬಂದಿದ್ದರು. ನಾನೇ ಟಿಕೆಟ್‌ ಕೊಡಿಸಿದೆ.

ಅವರು ಜಯಗಳಿಸಿ ಬಂದಿದ್ದಾರೆ. ಅಲ್ಲಿವರೆಗೂಶ್ರೀನಿವಾಸ್‌ ಎಂದರೆ ಯಾರಿಗೂ ಗೊತ್ತಿರಲಿಲ್ಲ.ವಾಲ್ಮೀಕಿ ಶ್ರೀಗಳಿಗೆ ನೂರು ಕೆಜಿ ತುಲಾಭಾರಮಾಡಿಸಿದ್ದೇನೆ. ಸಮುದಾಯದ ಬೇಡಿಕೆನ್ಯಾಯಯುತವಾಗಿದೆ ಎಂದು ತಿಳಿಸಿದರು.

ವಾಲ್ಮೀಕಿ ಪೀಠದ ಧರ್ಮದರ್ಶಿ ಮರಡಿಜಂಬಯ್ಯ ನಾಯಕ ಮಾತನಾಡಿ, ಅ.20ರಂದು ನಡೆದ ವಾಲ್ಮೀಕಿ ಜಯಂತಿಸರ್ಕಾರಿ ಕಾರ್ಯಕ್ರಮವನ್ನು ಬಹಿಷ್ಕಾರ ಹಾಕಿಆಮರಣಾಂತ ಸತ್ಯಾಗ್ರಹ ಕೂತಿರುವುದುಬಳ್ಳಾರಿಯಲ್ಲೇ ಮೊದಲು. ಈ ಮೊದಲುಸ್ವಾಮೀಜಿಗಳ ನೇತೃತ್ವದಲ್ಲಿ 20 ದಿನಗಳ ಕಾಲ400 ಕಿಮೀ ಪಾದಯಾತ್ರೆ ನಡೆಸಿ, ವಿಧಾನಸೌಧಕ್ಕೆಮುತ್ತಿಗೆ ಹಾಕಿದ್ದೇವೆ.

1958ರಿಂದ ಸಮುದಾಯಕ್ಕೆಶೇ.3 ರಷ್ಟು ಮೀಸಲಾತಿ ನೀಡಲಾಗಿದ್ದು, ಅದುಇಂದಿಗೂ ಮುಂದುವರೆದಿದೆ. ಬಾಕಿ ಉಳಿದಿರುವಮೀಸಲಾತಿಯನ್ನು ನೀಡುವಂತೆ ಕಳೆದ 30ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂಸರ್ಕಾರಗಳು ಎಚ್ಚೆತ್ತುಕೊಳ್ಳುತ್ತಿಲ್ಲ. ಮೀಸಲಾತಿಪ್ರಮಾಣ ಶೇ.50 ಮೀರಬಾರದು ಎಂದು ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದ್ದರೂ, ಬೇರೆ ರಾಜ್ಯಗಳಲ್ಲಿ ಹೆಚ್ಚಿಸಲಾಗಿದೆ.

ಈ ನಿಟ್ಟಿನಲ್ಲಿರಾಜ್ಯ ಸರ್ಕಾರವು ಕ್ರಮಕೈಗೊಳ್ಳಬೇಕು ಎಂದವರುಆಗ್ರಹಿಸಿದರು.ಸತ್ಯಾಗ್ರಹದಲ್ಲಿ ವಿ.ಎಸ್‌.ಶಿವಶಂಕರ್‌,ಮುಖಂಡರಾದ ಅಸುಂಡಿ ಹೊನ್ನೂರಪ್ಪ,ಜಗನ್ನಾಥ್‌, ವಿಜಯಕುಮಾರ್‌, ಎರಗುಡಿಮಲ್ಲಯ್ಯ, ರುದ್ರಪ್ಪ, ಹುಲಿಗೇಶಿ,ವಿಜಯಕುಮಾರ್‌ ಸೇರಿದಂತೆ ಸಮುದಾಯದನೂರಾರು ಜನರು ಇದ್ದರು.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.