ಬೇಕಾಬಿಟ್ಟಿ ಪೈಪ್‌ಲೈನ್‌ ಕಾಮಗಾರಿಗೆ ವ್ಯಾಪಕ ಆಕ್ರೋಶ


Team Udayavani, Oct 24, 2021, 3:11 PM IST

17pipe

ಸಿಂಧನೂರು: ಜಲಜೀವನ್‌ ಮಿಷನ್‌ ಯೋಜನೆಯಡಿ ಮನೆ-ಮನೆಗೆ ಕುಡಿವ ನೀರು ಕಲ್ಪಿಸುವ ಪೈಪ್‌ಲೈನ್‌ ಕಾಮಗಾರಿ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಸಿಸಿ ರಸ್ತೆಗಳನ್ನು ಒಡೆದು ಪೈಪ್‌ಲೈನ್‌ ಹಾಕಲಾಗುತ್ತಿದ್ದು, ಕೆಲವು ಕಡೆ ನೆಲಕ್ಕೆ ಹೊಂದಿಕೊಂಡಂತೆ ಮಣ್ಣು ಹಾಕಿ ಪೈಪ್‌ ಗಳನ್ನು ಬೇಕಾಬಿಟ್ಟಿಯಾಗಿ ಮುಚ್ಚುತ್ತಿರುವುದು ಆಕ್ಷೇಪಕ್ಕೆ ಕಾರಣವಾಗಿದೆ. ಕುಡಿವ ನೀರಿನ ಅಭಾವ ತಪ್ಪಿಸಲು ಪೂರಕವಾಗಿರುವ ಯೋಜನೆ ಅನುಷ್ಠಾನ ವಿಷಯದಲ್ಲಿ ಗ್ರಾಮಸ್ಥರಿಂದಲೇ ಬೇಸರ ವ್ಯಕ್ತವಾಗುತ್ತಿದೆ.

ಬೇಕಾಬಿಟ್ಟಿ ಕೆಲಸ

ತಾಲೂಕಿನ ಬೆಳಗುರ್ಕಿ ಗ್ರಾಮದಲ್ಲಿ 439 ಮನೆಗಳಿಗೆ ಕುಡಿವ ನೀರು ಪೂರೈಸಲು ಹಾಗೂ ಮನೆಮನೆಗೆ ನಳದ ಸಂಪರ್ಕ ಕಲ್ಪಿಸಲು 1.23 ಕೋಟಿ ರೂ. ವೆಚ್ಚದಲ್ಲಿ ಜಲಜೀವನ ಮಿಷನ್‌ ಕೆಲಸಕ್ಕೆ ಚಾಲನೆ ನೀಡಲಾಗಿದೆ. ಗ್ರಾಮದ ಹೊರಭಾಗದಲ್ಲಿ ಯೋಜನೆಯಡಿ ಕೆರೆ ನಿರ್ಮಿಸಲಾಗುತ್ತಿದೆ. ನೀರಿನ ಟ್ಯಾಂಕ್‌ ನಿರ್ಮಿಸಿ ಅಲ್ಲಿಂದ ಪೈಪ್‌ ಲೈನ್‌ ಮೂಲಕ ಮನೆ-ಮನೆಗೆ ಶುದ್ಧ ನೀರು ಒದಗಿಸುವುದು ಈ ಯೋಜನೆ ಉದ್ದೇಶ. ಪೈಪ್‌ಲೈನ್‌ ಹಾಕಿರುವುದು ಸಮರ್ಪಕವಾಗಿಲ್ಲ ಎಂಬ ದೂರು ವ್ಯಕ್ತವಾಗಿದೆ. ಕನಿಷ್ಠ ಎರಡು ಅಡಿಯಷ್ಟು ಅಗೆದು ಪೈಪ್‌ಗ್ಳನ್ನು ಒಳಗೆ ಹಾಕಿದರೆ, ವಾಹನಗಳು ಸಂಚರಿಸಿದಾಗ ಪೈಪ್‌ ಗಳು ಒಡೆಯುವುದಿಲ್ಲ. ನೆಲಕ್ಕೆ ಹೊಂದಿಕೊಂಡ ರೀತಿಯಲ್ಲಿ ಪೈಪ್‌ ಹಾಕುತ್ತಿರುವುದರಿಂದ ಸಮಸ್ಯೆಯಾಗುತ್ತದೆ ಎಂದು ಗ್ರಾಮಸ್ಥರು ಆಕ್ಷೇಪಿಸಿದ್ದಾರೆ.

ಇದನ್ನೂ ಓದಿ: ಕಲುಷಿತ ನೀರು ಸೇವನೆ: ಇಬ್ಬರು ಸಾವು

ಅಧಿಕಾರಿಗಳ ಮೇಲೆ ಒತ್ತಡ

ಗ್ರಾಮೀಣ ನೀರು ಪೂರೈಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ, ಈ ಬಗ್ಗೆ ಸಮಸ್ಯೆ ಹೇಳಿದಾಗಲೂ ಸರಿಪಡಿಸಿಲ್ಲ ಎಂದು ಇಲ್ಲಿನ ಗ್ರಾಪಂ ಸದಸ್ಯರು ದೂರಿದ್ದಾರೆ. ಕುಡಿವ ನೀರಿನ ಕೆರೆ ನಿರ್ಮಾಣ ಸ್ಥಳಕ್ಕೆ ಎಇಇ ಮತ್ತು ಜೆಇ ಭೇಟಿ ನೀಡಿ ಹೋಗಿದ್ದು, ಗ್ರಾಮದಲ್ಲಿ ಪೈಪ್‌ಲೈನ್‌ ಗಳನ್ನು ನೋಡಲು ಬಂದಿಲ್ಲ. ನಿರಂತರವಾಗಿ ದೂರು ಸಲ್ಲಿಸಿದಾಗಲೂ ಸ್ಪಂದಿಸಿಲ್ಲ ಎಂದು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೇ.50 ಕೆರೆ ಕಾಮಗಾರಿ ಮುಗಿದಿದ್ದರೆ, ನೀರಿನ ಟ್ಯಾಂಕ್‌ ನಿರ್ಮಾಣಕ್ಕೆ ಪಿಲ್ಲರ್‌ ಹಾಕಲಾಗಿದೆ. ನೀರು ಬಿಟ್ಟಾಗ ಅರೆಬರೆ ನೆಲ ಅಗೆದು ಹಾಕಿರುವ ಪೈಪ್‌ಲೈನ್‌ ಕೈ ಕೊಡುವ ಸಾಧ್ಯತೆ ಕಾಣಿಸಿದೆ. ಎಲ್ಲೆಂದರಲ್ಲಿ ಸಿಸಿ ರಸ್ತೆಗಳನ್ನು ಅಗೆದಿರುವುದರಿಂದ ಅವುಗಳನ್ನು ಮರು ನಿರ್ಮಾಣ ಮಾಡಿಕೊಡಬೇಕೆಂಬ ಬೇಡಿಕೆಯೂ ವ್ಯಕ್ತವಾಗಿದೆ. ಇತ್ತೀಚೆಗೆ ಹೊಸಳ್ಳಿ ಕ್ಯಾಂಪಿನಲ್ಲಿ ಕೆರೆ ನಿರ್ಮಿಸುತ್ತಿದ್ದಾಗ ಅಲ್ಲಿ ನೀರಿಗೆ ಸುತ್ತಲಿನ ಗದ್ದೆಯ ಬಸಿ ಸೇರುವ ಬಗ್ಗೆ ಆಕ್ಷೇಪಿಸಿದ್ದರು. ಇಲ್ಲಿ ಪೈಪ್‌ ಲೈನ್‌ ಬಗ್ಗೆ ಅಪಸ್ವರ ಕೇಳಿ ಬಂದಿದ್ದು, ಜೆಜೆಎಂ ಯೋಜನೆ ಆರಂಭದಲ್ಲೇ ಜನರ ಆಕ್ರೋಶಕ್ಕೆ ಗುರಿಯಾಗುತ್ತಿದೆ.

ಕೆರೆ ಹಸ್ತಾಂತರ ಬಾಕಿ

ಬೆಳಗುರ್ಕಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರಿಂದ ಖರೀದಿ ಮಾಡಿದ ಭೂಮಿಯಲ್ಲಿ ಕೆರೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಇಲ್ಲಿನ ಕೆರೆ ಜಾಗ ಇದುವರೆಗೂ ಗ್ರಾಪಂನವರಿಗೆ ಹಸ್ತಾಂತರ ಆಗಿಲ್ಲ. ತಾತ್ಕಾಲಿಕವಾಗಿ ಜನಪ್ರತಿನಿಧಿಗಳು ಮಧ್ಯಸ್ಥಿಕೆ ವಹಿಸಿ ಕಾಮಗಾರಿ ಆರಂಭಿಸಿದ್ದಾರೆ. ಜಮೀನು ಹಸ್ತಾಂತರ ಆಗದ ಸ್ಥಳದಲ್ಲಿ ಕೆರೆ ನಿರ್ಮಾಣವಾಗುತ್ತಿದ್ದು, ಈ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಒತ್ತಾಯವೂ ಕೇಳಿ ಬಂದಿದೆ.

ನೀರಿನ ಪೈಪ್‌ಗ್ಳನ್ನು ಎರಡು ಫೀಟ್‌ ಒಳಗೆ ಹಾಕಬೇಕು. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಮೇಲ್ಗಡೆ ಹಾಕಿದ ಪೈಪ್‌ ತೆಗೆದು, ಒಳಗೆ ಹಾಕುವಂತೆ ಸೂಚಿಸಲಾಗಿದೆ. ಎಲ್ಲೆಲ್ಲಿ ಸಮಸ್ಯೆ ಇದೆ ಎಂಬುದನ್ನು ಪರಿಶೀಲಿಸಿ, ಸರಿಪಡಿಸಲಾಗುವುದು. -ಧನರಾಜ್‌, ಜೆಇ, ಗ್ರಾಮೀಣ ನೀರು ಸರಬರಾಜು ಇಲಾಖೆ, ಸಿಂಧನೂರು

-ಯಮನಪ್ಪ ಪವಾರ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.