ರಾಜ್ಯದಲ್ಲಿ ಏಕರೂಪ ದರ ನಿಗದಿಯಿಂದ ಕಡಿವಾಣ ಸಾಧ್ಯ

ಭತ್ತ ಕಟಾವು ಯಂತ್ರಗಳ ದುಬಾರಿ ಬಾಡಿಗೆ

Team Udayavani, Oct 25, 2021, 6:30 AM IST

ರಾಜ್ಯದಲ್ಲಿ ಏಕರೂಪ ದರ ನಿಗದಿಯಿಂದ ಕಡಿವಾಣ ಸಾಧ್ಯ

ಉಡುಪಿ: ಭತ್ತ ಕಟಾವು ಯಂತ್ರಗಳ ದುಬಾರಿ ಬಾಡಿಗೆಗೆ ಕಡಿವಾಣ ಹಾಕಬೇಕಾದರೆ ರಾಜ್ಯದೆಲ್ಲೆಡೆ ಏಕರೂಪದ ಬಾಡಿಗೆ ಜಾರಿಗೆ ಬರಬೇಕು. ಈ ರೀತಿ ಮಾಡಿದರಷ್ಟೇ ಬಾಡಿಗೆ ದರ ನಿಯಂತ್ರಣ ಸಾಧ್ಯ ಎಂಬುದು ಅಧಿಕಾರಿಗಳ ಅಭಿಪ್ರಾಯ.
ಏಕರೂಪದ ದರ ಇಲ್ಲದಿರುವುದರಿಂದ ಈಗ ಕಟಾವು ಯಂತ್ರ ಮಾಲಕರು ಎಲ್ಲಿ ಹೆಚ್ಚು ಬಾಡಿಗೆ‌ ಸಿಗುತ್ತದೆಯೋ ಅಲ್ಲಿಗೆ ಹೋಗುತ್ತಿದ್ದಾರೆ. ಇದರಿಂದ ಕೆಲವೆಡೆ ಸಕಾಲದಲ್ಲಿ ಯಂತ್ರಗಳು ಸಿಗುತ್ತಿಲ್ಲ. ಇದರಿಂದ ಕೃಷಿಕರಿಗೆ ಸಮಸ್ಯೆಯಾಗಿದೆ.

ಇಂತಹ ಒಂದು ಪ್ರಸ್ತಾವವನ್ನು ಈಗಾಗಲೇ ಸರಕಾರದ ಮುಂದಿಡಲಾಗಿರುವುದರಿಂದ ಕೃಷಿಗೆ ಇನ್ನಷ್ಟು ಉತ್ತೇಜನ ನೀಡುವ ಹಿನ್ನೆಲೆಯಲ್ಲಿ ಸರಕಾರ ಬೇಗನೆ ಕ್ರಮ ಕೈಗೊಳ್ಳುವುದು ಅಗತ್ಯ. ಹೆಚ್ಚಿನ ಕಟಾವು ಯಂತ್ರಗಳನ್ನು ಸರಕಾರದ ಸಬ್ಸಿಡಿಯಲ್ಲಿಯೇ ಖರೀದಿ ಸಿರುತ್ತಾರೆ. ಆದುದರಿಂದ ಬಾಡಿಗೆ ದರದ ಮೇಲೆ ನಿಯಂತ್ರಣ ಹೇರುವುದು ಕಷ್ಟವೇನಲ್ಲ. ಬಸ್‌ ಪ್ರಯಾಣ ದರದ ಮೇಲೆ ನಿಯಂತ್ರಣ ಇರುವಂತೆ ಇಲ್ಲಿಯೂ ಸರಕಾರಿ ವ್ಯವಸ್ಥೆಯಿಂದ ಕಾರ್ಯನಿರ್ವಹಣೆ ಸಾಧ್ಯವಿದೆ ಎಂಬುದು ಕೃಷಿಕರ ಅಭಿಪ್ರಾಯವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿಯವರಿಗೆ ಏಕರೂಪದ ದರ ನಿಗದಿಪಡಿಸಿದರೆ ಹೆಚ್ಚು ದರ ನೀಡುವ ಜಿಲ್ಲೆಗಳತ್ತ ಕಟಾವು ಯಂತ್ರ ಮಾಲಕರು ತೆರಳುವ ಸಾಧ್ಯತೆಗಳಿರುತ್ತವೆ. ರಾಜ್ಯ ಮಟ್ಟದಲ್ಲಿ ಭತ್ತ ಕಟಾವು ಬಗ್ಗೆ ಏಕರೂಪದ ದರ ನಿಗದಿಪಡಿಸಿದರೆ ಸಮಸ್ಯೆಗೆ ಪರಿಹಾರ ಸಾಧ್ಯ. ಈ ಬಗ್ಗೆ ಈಗಾಗಲೇ ರಾಜ್ಯಮಟ್ಟದ ಸಭೆಗಳಲ್ಲಿಯೂ ಪ್ರಸ್ತಾವಿಸಲಾಗಿದೆ.
-ಡಾ| ವೈ. ನವೀನ್‌ ಭಟ್‌, ಉಡುಪಿ ಜಿ.ಪಂ. ಸಿಇಒ

ಇದನ್ನೂ ಓದಿ:ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಏಕಕಾಲದಲ್ಲಿ ಭತ್ತ ಕಟಾವು ಪ್ರಕ್ರಿಯೆ ಬರುವ ಕಾರಣದಿಂದಾಗಿ ಕಟಾವು ಯಂತ್ರಗಳ ಅಭಾವ ಕಂಡುಬರುತ್ತಿದೆ. ವಿವಿಧೆಡೆಗಳಿಂದ ಯಂತ್ರಗಳು ಆಗಮಿಸುತ್ತಿದ್ದು, ಹೆಚ್ಚುವರಿ ಬಾಡಿಗೆ ದರ ವಸೂಲಿಯ ದೂರು ಬಂದರೆ ಕ್ರಮ ತೆಗೆದುಕೊಳ್ಳಲಾಗುವುದು. ಸಬ್ಸಿಡಿ ದರದಲ್ಲಿ ರೈತರಿಗೆ ಇಂಧನ ಒದಗಿಸುವ ಬಗ್ಗೆ ಮನವಿಗಳು ಬಂದರೆ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು.
-ಡಾ| ಕುಮಾರ್‌, ದ.ಕ. ಜಿ.ಪಂ. ಸಿಇಒ

ಖಾಸಗಿ ಯಂತ್ರಗಳ ಬಗ್ಗೆ ಸ್ಥಳೀಯ ರೈತ ಸಂಪರ್ಕ ಕೇಂದ್ರ ಗಳಿಗೆ ಮಾಹಿತಿ ಲಭ್ಯವಾದರೆ ಉತ್ತಮ. ಹೆಚ್ಚಿನ ದರ ವಸೂಲಿ ಬಗ್ಗೆ ಶೀಘ್ರ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. ರೈತರು ಎಫ್ಪಿಒ ಮಾಡಿ 5ರಿಂದ 6 ಯಂತ್ರಗಳನ್ನು ಖರೀದಿಸಿ ಆಯಾ ವಲಯ ವ್ಯಾಪ್ತಿಯಲ್ಲಿ ಭತ್ತ ಕಟಾವು ಕಾರ್ಯಗಳನ್ನೂ ಮಾಡಬಹುದು. ಹೆಚ್ಚು ದರ ತೆಗೆದುಕೊಳ್ಳುವ ಬಗ್ಗೆ ದೂರು ಬಂದರೆ ಮೇಲಧಿ ಕಾರಿಗಳಿಗೆ ತಿಳಿಸಲಾಗುವುದು.
– ಅಬ್ದುಲ್‌ ಬಷೀರ್‌, ಕೃಷಿ ಅಧಿಕಾರಿ,
ಮೂಲ್ಕಿ ಹೋಬಳಿ

ಹೊರ ರಾಜ್ಯ ಅಥವಾ ಜಿಲ್ಲೆಗಳಿಂದ ಆಗಮಿಸುವ ಭತ್ತ ಕಟಾವು ಯಂತ್ರಗಳನ್ನು ಜಿಲ್ಲೆಯ ಆಯಾ ಹೋಬಳಿಗೆ ವಿಂಗಡನೆ ಮಾಡಿ ಕಟಾವು ಪ್ರಕ್ರಿಯೆ ನಡೆಸಬೇಕು. ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆಯ ಮೂಲಕ ಯಂತ್ರಗಳ ಹಂಚಿಕೆಯಾದರೆ ಇದು ಸಾಧ್ಯವಾಗಬಹುದು. ಯಂತ್ರಗಳನ್ನು ಮೊದಲೇ ನೋಂದಣಿ ಮಾಡಿಸಿಕೊಂಡರೆ ಹೆಚ್ಚುವರಿ ದರ ಪಡೆಯುವವರನ್ನು ಗುರುತಿಸಿ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗಲಿದೆ.
– ರಮೇಶ್‌ ಉಳ್ಳಾಗಡ್ಡಿ, ಸಹಾಯಕ ಕೃಷಿ ಅಧಿಕಾರಿ,
ಕಾರ್ಕಳ ಹೋಬಳಿ ರೈತ ಸಂಪರ್ಕ ಕೇಂದ್ರ

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.