ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ


Team Udayavani, Oct 25, 2021, 9:05 AM IST

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಕೊಹ್ಲಿ ಹೇಳಿದ್ದೇನು?

ದುಬೈ: ಐಸಿಸಿ ಟಿ20 ವಿಶ್ವಕಪ್ ನ ಹೈವೋಲ್ಟೆಜ್ ಮುಖಾಮುಖಿಯಲ್ಲಿ ಭಾರತ ತಂಡದ ವಿರುದ್ದ ಪಾಕಿಸ್ಥಾನ ಗೆಲುವು ಸಾಧಿಸಿದೆ. ಈ ಮೂಲಕ ವಿಶ್ವಕಪ್ ನಲ್ಲಿ ತನ್ನ ಸೋಲಿನ ಸರಪಣಿಯನ್ನು ತುಂಡರಿಸಿದೆ.

ಏಕಪಕ್ಷೀಯವಾಗಿ ಸಾಗಿದ ರವಿವಾರದ ಟಿ20 ವಿಶ್ವಕಪ್‌ ಲೀಗ್‌ ಪಂದ್ಯದಲ್ಲಿ ಬಾಬರ್‌ ಆಜಂ ಪಡೆ 10 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್‌ ಸೋತು ಬ್ಯಾಟಿಂಗಿಗೆ ಇಳಿಸಲ್ಪಟ್ಟ ಭಾರತ 7 ವಿಕೆಟಿಗೆ 151 ರನ್‌ ಗಳಿಸಿದರೆ, ಪಾಕಿಸ್ಥಾನ 17.5 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೆ 152 ರನ್‌ ಬಾರಿಸಿ ಜಯಭೇರಿ ಮೊಳಗಿಸಿತು.

ಕಪ್ತಾನನ ಆಟವಾಡಿದ ವಿರಾಟ್‌ ಕೊಹ್ಲಿ ಅವರ ಅರ್ಧ ಶತಕ (57), ರಿಷಭ್‌ ಪಂತ್‌ ಅವರ ಬಿರುಸಿನ ಬ್ಯಾಟಿಂಗ್‌ (39) ಟೀಮ್‌ ಇಂಡಿಯಾ ಸರದಿಯ ಹೈಲೈಟ್‌ ಆಗಿತ್ತು. ಆದರೆ ಪಾಕಿಸ್ಥಾನದ ಆರಂಭಿಕರಾದ ಮೊಹಮ್ಮದ್‌ ರಿಜ್ವಾನ್‌ (79) ಮತ್ತು ಬಾಬರ್‌ ಆಜಂ ( 68) ಇಬ್ಬರೇ ಸೇರಿಕೊಂಡು ಈ ಮೊತ್ತವನ್ನು ಬೆನ್ನಟ್ಟಿದರು. ಒಂದೂ ವಿಕೆಟ್‌ ಕೀಳಲಾಗದಿದ್ದುದು ಭಾರತೀಯ ಬೌಲಿಂಗಿನ ಮಹಾ ದುರಂತವೆನಿಸಿತು.

ಇದನ್ನೂ ಓದಿ:ಅಫ್ಘಾನ್‌-ಸ್ಕಾಟ್ಲೆಂಡ್‌: ಸಮಬಲರ ಸೆಣಸಾಟ

ಭಾರತದ ಆರಂಭಿಕರಾದ ರೋಹಿತ್ ಶರ್ಮ ಮತ್ತು ಕೆ.ಎಲ್.ರಾಹುಲ್ ನಿರಾಸೆ ಅನುಭವಿಸಿದರು. ರೋಹಿತ್ ಮೊದಲ ಎಸೆತಕ್ಕೆ ಔಟಾದರೆ, ಮೂರು ರನ್ ಗೆ ಆಟ ಮುಗಿಸಿದರು. ಇಬ್ಬರೂ ಶಹೀನ್ ಶಾ ಅಫ್ರಿದಿ ಎಸೆತಕ್ಕೆ ಔಟಾದರು.

ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ನಾಯಕ ವಿರಾಟ್ ಕೊಹ್ಲಿ ವಿಚಿತ್ರ ಪ್ರಶ್ನೆಯೊಂದನ್ನು ಎದುರಿಸಿದರು. ”ತಂಡದ ಆಯ್ಕೆಗೆ ಸಂಬಂಧಿಸಿದಂತೆ ಅಭ್ಯಾಸ ಪಂದ್ಯದಲ್ಲಿ ಇಶಾನ್ ಕಿಶನ್ ಚೆನ್ನಾಗಿ ಆಡಿದರು. ಇಶಾನ್ ಕಿಶನ್ ಆಡಿದರೆ ಅದು ತಪ್ಪು ಎಂದು ನೀವು ಭಾವಿಸುತ್ತೀರಾ ಮತ್ತು ಅವರು ರೋಹಿತ್ ಶರ್ಮಾ ಅವರಿಗಿಂತ ಉತ್ತಮವಾಗಿ ಮಾಡಬಹುದು?” ಎಂದು ಪತ್ರಕರ್ತರೊಬ್ಬರು ಕೇಳಿದಾಗ ವಿರಾಟ್ ನಕ್ಕರು.

“ಇದು ತುಂಬಾ ಧೈರ್ಯದ ಪ್ರಶ್ನೆ. ನಿಮ್ಮ ಅಭಿಪ್ರಾಯವೇನು ಸರ್? ನಾನು ಅತ್ಯುತ್ತಮ ಎಂದು ಭಾವಿಸಿದ ತಂಡವನ್ನು ಆಡಿದ್ದೇನೆ. ನಿಮ್ಮ ಅಭಿಪ್ರಾಯ ಏನು?” ಎಂದು ವಿರಾಟ್ ಮರುಪ್ರಶ್ನೆ ಎಸೆದರು.

“ನೀವು ರೋಹಿತ್ ಶರ್ಮಾ ಅವರನ್ನು ಟಿ 20 ಅಂತರಾಷ್ಟ್ರೀಯ ಪಂದ್ಯದಿಂದ ಕೈಬಿಡುತ್ತೀರಾ? ನೀವು ‘ರೋಹಿತ್ ಶರ್ಮಾ’ ಅವರನ್ನು ಕೈಬಿಡುತ್ತೀರಾ? ನಾವು ಆಡಿದ ಕೊನೆಯ ಪಂದ್ಯದಲ್ಲಿ ಆತ ಏನು ಮಾಡಿದನೆಂದು ನಿಮಗೆ ತಿಳಿದಿದೆಯೇ? ಇದು ನಂಬಲಾಗದು” ಎಂದು ವಿರಾಟ್ ಮುಖಕ್ಕೆ ಕೈ ಅಡ್ಡ ಹಿಡಿದು ನಕ್ಕರು.

ಮುಂದುವರಿದು ವಿರಾಟ್, ”ಸರ್, ನಿಮಗೆ ವಿವಾದ ಬೇಕಾದರೆ, ದಯವಿಟ್ಟು ಮೊದಲು ನನಗೆ ತಿಳಿಸಿ. ನಾನು ಅದಕ್ಕೆ ತಕ್ಕಂತೆ ಉತ್ತರಿಸುತ್ತೇನೆ, “ಎಂದು ನೇರವಾಗಿಯೇ ಹೇಳಿದರು.

ಟಾಪ್ ನ್ಯೂಸ್

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

28

T20: ಬಾಂಗ್ಲಾ ವಿರುದ್ಧ 7 ವಿಕೆಟ್‌ ಜಯ: ಭಾರತದ ವನಿತೆಯರ ಸರಣಿ ವಿಕ್ರಮ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

ಪೆನ್‌ಡ್ರೈವ್‌ ಪ್ರಕರಣ: ಕುತೂಹಲ ಕೆರಳಿಸಿದ ಪ್ರೀತಮ್‌ ಗೌಡ ಮೌನ

ಪೆನ್‌ಡ್ರೈವ್‌ ಪ್ರಕರಣ: ಕುತೂಹಲ ಕೆರಳಿಸಿದ ಪ್ರೀತಮ್‌ ಗೌಡ ಮೌನ

21

H.D. Revanna: ಇಂದು ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.