ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್ ಮೂಡ್ಗೆ ದರ್ಶನ್
Team Udayavani, Oct 25, 2021, 9:26 AM IST
ದರ್ಶನ್ ನಟನೆಯ 55ನೇ ಚಿತ್ರ “ಕ್ರಾಂತಿ’ಗೆ ಮುಹೂರ್ತ ಇತ್ತೀಚೆಗೆ ನಡೆದಿರೋದು ನಿಮಗೆ ಗೊತ್ತೇ ಇದೆ. ಈಗ ಚಿತ್ರೀಕರಣದ ಸಮಯ.
ಹೌದು, ದರ್ಶನ್ ಅವರ “ಕ್ರಾಂತಿ’ ಚಿತ್ರದ ಚಿತ್ರೀಕರಣ ಇಂದಿನಿಂದ ಆರಂಭವಾಗುತ್ತಿದೆ. ಮೊದಲ ಹಂತವಾಗಿ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಈ ಮೂಲಕ ದರ್ಶನ್ ತುಂಬಾ ದಿನಗಳ ನಂತರ ಮತ್ತೆ ಚಿತ್ರೀಕರಣದ ಅಖಾಡಕ್ಕೆ ಇಳಿಯುತ್ತಿದ್ದಾರೆ. ದರ್ಶನ್ ಕೂಡಾ ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಚಿತ್ರದ ಮುಹೂರ್ತದ ದಿನ ತಾವು ಸಿದ್ಧವಾಗುತ್ತಿದ್ದ ವಿಡಿಯೋವನ್ನು ಚಿತ್ರೀಕರಿಸಿ ಅಭಿಮಾನಿಗಳ ಮುಂದಿಟ್ಟಿದ್ದರು. ಈ ವಿಡಿಯೋ ದೊಡ್ಡ ಮಟ್ಟದಲ್ಲಿ ವೈರಲ್ ಆಗಿತ್ತು.
ಇದನ್ನೂ ಓದಿ:ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ
ಇನ್ನು, “ಕ್ರಾಂತಿ’ಗೆ ನಾಯಕಿಯಾಗಿ ರಚಿತಾ ರಾಮ್ ಆಯ್ಕೆಯಾಗಿದ್ದು, ಕ್ರೇಜಿಸ್ಟಾರ್ ರವಿಚಂದ್ರನ್, ದರ್ಶನ್ ತಂದೆ ಪಾತ್ರದಲ್ಲಿ ನಟಿಸಲಿದ್ದಾರೆ. ಇನ್ನು, ಈ ಚಿತ್ರವನ್ನು ವಿ.ಹರಿಕೃಷ್ಣ ನಿರ್ದೇಶಿಸುತ್ತಿದ್ದಾರೆ. ಈ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗುತ್ತಿದ್ದಾರೆ. ಕಳೆದ ಬಾರಿ “ಯಜಮಾನ’ ಚಿತ್ರದ ನಿರ್ದೇಶನದಲ್ಲೂ ಹರಿಕೃಷ್ಣ ಅವರು ತೊಡಗಿಕೊಂಡಿದ್ದರು. ಜೊತೆಗೆ ಪಿ.ಕುಮಾರ್ ಕೂಡಾ ನಿರ್ದೇಶಕರಾಗಿದ್ದರು. ಈ ಬಾರಿ ವಿ.ಹರಿಕೃಷ್ಣ ಅವರು ದರ್ಶನ್ ಅವರ 55ನೇ ಚಿತ್ರವನ್ನು ನಿರ್ದೇಶಿಸಲು ಅಣಿಯಾಗಿದ್ದಾರೆ.
ಈ ಚಿತ್ರವನ್ನು “ಮೀಡಿಯಾ ಹೌಸ್ ಸ್ಟುಡಿಯೋ’ದಡಿ ಶೈಲಜಾ ನಾಗ್ ಹಾಗೂ ಬಿ.ಸುರೇಶ್ ನಿರ್ಮಿಸುತ್ತಿದ್ದಾರೆ. ಈಗಾಗಲೇ ಇವರು ದರ್ಶನ್ ಅವರ “ಯಜಮಾನ’ ಚಿತ್ರವನ್ನು ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ