ವಾಕ್ಸಮರದ ಮಧ್ಯೆ ಮತದಾನಕ್ಕೆ ದಿನಗಣನೆ


Team Udayavani, Oct 25, 2021, 3:52 PM IST

23election

ಹಾವೇರಿ: ಹಾನಗಲ್ಲ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವಿನ ಜಿದ್ದಾಜಿದ್ದಿ ಕಣವಾಗಿ ಮಾರ್ಪಟ್ಟಿದೆ.

ಎರಡೂ ಪಕ್ಷಗಳ ನಾಯಕರ ವಾಕ್ಸಮರದ ನಡುವೆ ಚುನಾವಣೆಗೆ ಕೌಂಟ್‌ಡೌನ್‌ ಶುರುವಾಗಿದ್ದು, ಇನ್ನುಳಿದ 5 ದಿನಗಳು ಎರಡೂ ಪಕ್ಷಗಳಿಗೆ ನಿರ್ಣಾಯಕವಾಗಿವೆ. ಬಿಜೆಪಿಯ ಶಿವರಾಜ ಸಜ್ಜನರ, ಕಾಂಗ್ರೆಸ್‌ನಿಂದ ಶ್ರೀನಿವಾಸ ಮಾನೆ ಅಬ್ಬರದ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಎರಡೂ ಪಕ್ಷ‌ಗಳ ನಾಯಕರು ಕ್ಷೇತ್ರದಲ್ಲೇ ಠಿಕಾಣಿ ಹೂಡಿ ತಮ್ಮ ಪಕ್ಷದ ಅಭ್ಯರ್ಥಿ ಪರ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.

ಕಾರ್ಯಕರ್ತರು ಹಗಲಿರುಳು ಪಕ್ಷ‌ ವಹಿಸಿದ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ. ಮತದಾನದ ದಿನಕ್ಕೆ ಇನ್ನು 5 ದಿನಗಳಷ್ಟೇ ಬಾಕಿ ಉಳಿದಿರುವುದರಿಂದ ಮತದಾರರನ್ನು ಓಲೈಸಲು ಎಲ್ಲ ಪಕ್ಷ‌ಗಳು ನಾನಾ ತಂತ್ರ ಹೂಡುತ್ತಿವೆ. ಆಡಳಿತಾರೂಢ ಬಿಜೆಪಿಗೆ ಕ್ಷೇತ್ರ ಉಳಿಸಿಕೊಳ್ಳುವುದು ಅನಿವಾರ್ಯ ಎನಿಸಿದೆ.

ಈ ಉಪಚುನಾವಣೆಯಲ್ಲಿ ಗೆದ್ದು ಬಿಜೆಪಿಗೆ ಪಾಠ ಕಲಿಸುವ ಉತ್ಸಾಹದಲ್ಲಿ ಕಾಂಗ್ರೆಸ್‌ ನಾಯಕರಿದ್ದಾರೆ. ಜೆಡಿಎಸ್‌ ಅಭ್ಯರ್ಥಿ ಸದ್ಯ ಮನೆಮನೆ ಪ್ರಚಾರದಲ್ಲಿ ತೊಡಗಿಕೊಂಡಿದ್ದು, ಸಂಘಟನೆ ಹಾಗೂ ಕಾರ್ಯಕರ್ತರ ಕೊರತೆ ಎದುರಿಸುತ್ತಿದೆ.

ಕಾರ್ಯಕರ್ತರಲ್ಲಿ ಹೊಸ ಹುರುಪು

ನಾಮಪತ್ರ ಸಲ್ಲಿಕೆ ದಿನದಿಂದಲೇ ಹಾನಗಲ್ಲ ಕ್ಷೇತ್ರ ರಾಜಕೀಯ ನಾಯಕರ ವಾಕ್ಸಮರಕ್ಕೆ ಸಾಕ್ಷಿಯಾಗುತ್ತಾ ಬಂದಿದೆ. ಸಿದ್ದರಾಮಯ್ಯ, ಡಿಕೆಶಿ ಅವರು ಕ್ಷೇತ್ರದಲ್ಲಿ ಈಗಾಗಲೇ ಬೀಡು ಬಿಟ್ಟು ಪ್ರಚಾರ ನಡೆಸಿ ಬಿಜೆಪಿ ವಿರುದ್ಧ ಮುಗಿಬಿದ್ದಿದ್ದಾರೆ. ಸಿ.ಎಂ. ಬಸವರಾಜ ಬೊಮ್ಮಾಯಿ ಅವರೂ ಕಾಂಗ್ರೆಸ್‌ ನಾಯಕರ ಆರೋಪಕ್ಕೆ ಸೆಡ್ಡು ಹೊಡೆದು ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಜನರ ಮುಂದೆ ತೆರೆದಿಟ್ಟಿದ್ದಾರೆ. ಬಹಿರಂಗ ಪ್ರಚಾರಕ್ಕೆ ಇನ್ನೂ ಮೂರು ದಿನ ಬಾಕಿ ಇದ್ದು, ಚುನಾವಣಾ ಕಣ ರಂಗೇರಿದ್ದರಿಂದ ಎರಡೂ ಪಕ್ಷ‌ಗಳ ಕಾರ್ಯಕರ್ತರಲ್ಲಿ ಹೊಸ ಹುರುಪು ಬಂದಂತಾಗಿದೆ.

ಇದನ್ನೂ ಓದಿ: ಸಕಲೇಶಪುರ: ಪಾಕಿಸ್ತಾನದ ವಿರುದ್ಧ ಸೋತ ಭಾರತ; ಅಭಿಮಾನಿಯಿಂದ ಟಿವಿ ಒಡೆದು ಹಾಕಿ ಆಕ್ರೋಶ

ರಂಗೇರಿದ ಚುನಾವಣಾ ಕಣ

ಈಗಾಗಲೇ ಎರಡು ಸುತ್ತಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಾಯಕರ ವಾಕ್ಸಮರವನ್ನು ಕ್ಷೇತ್ರದ ಮತದಾರರು ನೋಡಿದ್ದಾರೆ. ಬಹಿರಂಗ ಪ್ರಚಾರಕ್ಕೆ ಇನ್ನೂ ಮೂರು ದಿನ ಬಾಕಿ ಇರುವ ಹಿನ್ನೆಲೆ ಸೋಮವಾರದಿಂದ ಮತ್ತೊಂದು ಸುತ್ತಿನಲ್ಲಿ ಮೂರೂ ಪಕ್ಷ‌ಗಳ ನಾಯಕರು ಪ್ರಚಾರದಲ್ಲಿ ತೊಡಗಿಕೊಳ್ಳಲಿದ್ದಾರೆ. ಸಿಎಂ ಬೊಮ್ಮಾಯಿ ಸೇರಿದಂತೆ ಹತ್ತಾರು ಸಚಿವರು ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲು ಆಗಮಿಸುತ್ತಿದ್ದಾರೆ. ಕಾಂಗ್ರೆಸ್‌ ನಾಯಕರೂ ಪ್ರಚಾರ ನಡೆಸಲಿದ್ದಾರೆ. ಅ.27ರಂದು ಕಾಂಗ್ರೆಸ್‌ ಬೃಹತ್‌ ಸಮಾವೇಶ ಆಯೋಜಿಸಲು ಸಿದ್ಧತೆಯಲ್ಲಿ ತೊಡಗಿದ್ದು, ಕಾಂಗ್ರೆಸ್‌ನ ಘಟಾನುಘಟಿ ನಾಯಕರಿಗೆ ಈ ಸಮಾವೇಶದ ವೇದಿಕೆ ಸಾಕ್ಷಿಯಾಗಲಿದೆ. ಇನ್ನು ಜೆಡಿಎಸ್‌ ಪಕ್ಷ ಅಭ್ಯರ್ಥಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದು, ಶನಿವಾರ ಕ್ಷೇತ್ರದಲ್ಲಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರೂ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸಿ ಕಾಂಗ್ರೆಸ್‌-ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದರು. ಇದರೊಂದಿಗೆ ಮೂರೂ ಪಕ್ಷ‌ಗಳ ನಾಯಕರ ವಾಕ್ಸಮರಕ್ಕೆ ಹಾನಗಲ್ಲ ಕ್ಷೇತ್ರದ ಜನತೆ ಸಾಕ್ಷಿಯಾದಂತಾಗಿದೆ.

ದಿ.ಸಿಎಂ.ಉದಾಸಿ ಅವರು ಕಳೆದ ಮೂರು ವರ್ಷದಲ್ಲಿ 1530ಕೋಟಿ ಗೂ. ಹೆಚ್ಚು ಹಣವನ್ನು ತಾಲೂಕಿಗೆ ತಂದಿದ್ದಾರೆ. 600ಕೋಟಿಗೂ ಹೆಚ್ಚು ಹಣವನ್ನು ಏತನೀರಾವರಿ ಯೋಜನೆಗೆ ತಂದಿದ್ದಾರೆ. ಕೇಂದ್ರ, ರಾಜ್ಯ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳನ್ನು ಜನರಿಗೆ ಮುಟ್ಟಿಸಬೇಕಾದರೆ ನಮ್ಮ ಪಕ್ಷದ ಶಾಸಕರು ಬೇಕಾಗುತ್ತೆ. ಹೀಗಾಗಿ ನಮ್ಮವರೇ ಆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕೈಬಲಪಡಿಸಲು ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರಿಗೆ ಮತ ನೀಡಬೇಕು. -ಶಿವಕುಮಾರ ಉದಾಸಿ, ಸಂಸದರು

ಹಾನಗಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪರ ಅಲೆ ಇದೆ. ಶ್ರೀನಿವಾಸ ಮಾನೆ ಅವರು ಕಳೆದ ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ಇದ್ದುಕೊಂಡು ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. ಕ್ಷೇತ್ರದಲ್ಲಿ ಪಕ್ಷದ ಹಿರಿಯ ಮುಖಂಡರು, ಪಕ್ಷದ ಶಾಸಕರು, ಮಾಜಿ ಶಾಸಕರು, ವೀಕ್ಷಕರು, ಹಾಗೂ ನಿಯೋಜಿತ ಉಸ್ತುವಾರಿಗಳು ಎಲ್ಲ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಚಾರ ಕೈಗೊಂಡು ಅವರ ಗೆಲುವಿವಾಗಿ ಶ್ರಮಿಸಲಾಗುತ್ತಿದೆ. ಹಾನಗಲ್ಲ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರ ಗೆಲುವು ಖಚಿತ. -ಸಲೀಂ ಅಹ್ಮದ್‌, ಕೆಪಿಸಿಸಿ ಕಾರ್ಯಾಧ್ಯಕ್ಷ.

-ವೀರೇಶ ಮಡ್ಲೂರ

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.