ಕೋವಿಡ್ ಲಸಿಕೆ ಕಡ್ಡಾಯ ಪ್ರಶ್ನಿಸಿದ ಅರ್ಜಿ ವಜಾ: ಅರ್ಜಿದಾರ ವಕೀಲರಿಗೆ ಹೈಕೋರ್ಟ್ ತರಾಟೆ
Team Udayavani, Oct 25, 2021, 10:00 PM IST
ಬೆಂಗಳೂರು: ಕೋವಿಡ್ ಲಸಿಕೆಯನ್ನು ಉದ್ಯೋಗದೊಂದಿಗೆ ಜೋಡಿಸಲಾಗಿದೆ ಎಂದು ಆರೋಪಿಸಿ ಕೈಗಾರಿಕೆಗಳು ಹಾಗೂ ವಾಣಿಜ್ಯ ಸಂಸ್ಥೆಗಳ ಸಿಬ್ಬಂದಿಗೆ ಕೋವಿಡ್ ಲಸಿಕೆ ಕಡ್ಡಾಯಗೊಳಿಸಿ ಬಿಬಿಎಂಪಿ ಹೊರಡಿಸಿದ್ದ ಸುತ್ತೋಲೆ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಸುತ್ತೋಲೆ ಪ್ರಶ್ನಿಸಿ ವಕೀಲ ಸೈಯದ್ ಶುಜಾತ್ ಮೆಹಿª ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.
ಈ ವೇಳೆ ಅರ್ಜಿಯಲ್ಲಿನ ಅಂಶಗಳನ್ನು ಗಮನಿಸಿದ ನ್ಯಾಯಪೀಠ, ಅರ್ಜಿದಾರ ವಕೀಲರನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು. ಸ್ವಯಂ ಲಸಿಕೆ ಪಡೆದುಕೊಂಡು ಲಸಿಕೆ ವಿರುದ್ಧ ಅರ್ಜಿ ಸಲ್ಲಿಸಿರುವ ನೀವು ಕೋವಿಡ್ ಲಸಿಕೆ ಬಗ್ಗೆ ಸಾರ್ವಜನಿಕರ ಹಾದಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದೀರಿ. ನಿವೊಬ್ಬ ವಕೀಲರಾಗಿದ್ದೀರಿ ಎಂಬುದನ್ನು ನೆನಪಿಟ್ಟುಕೊಳ್ಳಿ. ಅರ್ಜಿ ವಾಪಸ್ ಪಡೆದುಕೊಳ್ಳಿ. ಇಲ್ಲದಿದ್ದರೆ ದೊಡ್ಡ ಮೊತ್ತದ ದಂಡ ವಿಧಿಸಿ ಅರ್ಜಿಯನ್ನು ವಜಾಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿತು.
ಅರ್ಜಿದಾರರು ವಾದ ಮಂಡಿಸಿ, ನಾನೂ ಸ್ವಪ್ರೇರಣೆಯಿಂದ ಮೊದಲ ಡೋಸ್ ಪಡೆದುಕೊಂಡಿದ್ದೇನೆ. ಲಸಿಕೆಯ ಸಾಮರ್ಥಯ ಅಥವಾ ಲಸೀಕಾಕರಣವನ್ನು ನಾನು ಪ್ರಶ್ನಿಸುತ್ತಿಲ್ಲ. ಬಿಬಿಎಂಪಿ ಅನುಸರಿಸುತ್ತಿರುವ ಲಸೀಕಾರಣದ ವಿಧಾನವನ್ನಷ್ಟೇ ಆಕ್ಷೇಪಿಸುತ್ತಿದ್ದೇನೆ. ವಾಣಿಜ್ಯ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಹೋಟೆಲ್ ಮತ್ತು ರೆಸ್ಟೋರೆಂಟ್ಗಳ ಸಿಬ್ಬಂದಿಗೆ ಕೋವಿಡ್ ಲಸಿಕೆ ಕಡ್ಡಾಯಗೊಳಿಸಿದೆ. ಲಸಿಕಾ ಅಭಿಯಾನವೇ ಬೇರೆ, ಉದ್ಯೋಗವೇ ಬೇರೆ. ಆದರೆ, ಪಾಲಿಕೆ ಇವೆರಡಕ್ಕೂ ಸಂಪರ್ಕ ಕಲ್ಪಿಸುತ್ತಿದೆ. ಇದು ಜೀವಿಸುವ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ವಿವರಿಸಿದರು.
ಇದನ್ನೂ ಓದಿ:ಕನ್ನಡ ಪ್ರೇಕ್ಷಕರಿಗೆ ಸಿನಿಮಾ ಕ್ಷೇತ್ರದಲ್ಲಿ ಬಹುದೊಡ್ಡ ಗೌರವವಿದೆ ರೋಷನ್ ಶ್ರೀಕಾಂತ್
ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದಲೇ ಲಸಿಕೆ ನೀಡಲಾಗುತ್ತಿದೆ. ಈಗಾಗಲೇ ನೀವೂ ಲಸಿಕೆ ಪಡೆದಿದ್ದೀರಿ. ಹೀಗಿರುವಾಗ ಈ ವಿಚಾರದಲ್ಲಿ ಆಕ್ಷೇಪವೆತ್ತಲು ನಿಮಗೆ ಯಾವುದೇ ಹಕ್ಕಿಲ್ಲ. ನಿಜಕ್ಕೂ ಇದರಿಂದ ಯಾರಿಗೆ ತೊಂದರೆಯಾಗುತ್ತಿದೆಯೋ ಅವರು ಮುಂದೆ ಬಂದು ಪ್ರಶ್ನಿಸಲಿ. ಮತ್ತೂಬ್ಬರ ವಿಚಾರದಲ್ಲಿ ಆಕ್ಷೇಪವೆತ್ತಲು ನೀವ್ಯಾರು ಎಂದು ಪ್ರಶ್ನಿಸಿತು.
ಅರ್ಜಿಯಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಅಡಗಿಲ್ಲ. ಕೇವಲ ಪ್ರಚಾರದ ಉದ್ದೇಶದಿಂದ ಸಲ್ಲಿಸಿರುವ ಅರ್ಜಿ ಇದಾಗಿದೆ. ಒಂದೊಮ್ಮೆ ಅರ್ಜಿ ಹಿಂಪಡೆಯಲು ಬಯಸಿದರೆ ಕೋರ್ಟ್ ಅದಕ್ಕೆ ಅವಕಾಶ ನೀಡಲಿದೆ. ಇಲ್ಲವಾದರೆ, ಭಾರಿ ದಂಡ ವಿಧಿಸಿ ಅರ್ಜಿ ವಜಾಗೊಳಿಸಲಾಗುತ್ತದೆ ಎಂದು ನ್ಯಾಯಪೀಠ ಹೇಳಿತು. ಆಗ ಅರ್ಜಿದಾರರು ಅರ್ಜಿಯನ್ನು ಹಿಂಪಡೆಯುವುದಾಗಿ ತಿಳಿಸಿದರು. ಅದನ್ನು ಪರಿಗಣಿಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
MUST WATCH
ಹೊಸ ಸೇರ್ಪಡೆ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ