ಕಿತ್ತೂರು ನೆಲದಲ್ಲಿ ಉತ್ಸವಕ್ಕೆ ವರ್ಣ ರಂಜಿತ ತೆರೆ

ರಾಣಿ ಚನ್ನಮ್ಮನ ಉತ್ಸವದ ಬೆಳ್ಳಿ ಹಬ್ಬದ ಸಂಭ್ರಮ ಈ ಭಾಗದ ಜನರ ಉತ್ಸಾಹ ಇಮ್ಮಡಿಗೊಳಿಸಿದೆ.

Team Udayavani, Oct 25, 2021, 7:36 PM IST

ಕಿತ್ತೂರು ನೆಲದಲ್ಲಿ ಉತ್ಸವಕ್ಕೆ ವರ್ಣ ರಂಜಿತ ತೆರೆ

ಚನ್ನಮ್ಮನ ಕಿತ್ತೂರು: ಪ್ರವಾಹ ಮತ್ತು ಕೋವಿಡ್‌ ಮಹಾಮಾರಿ ಹಿನ್ನೆಲೆಯಲ್ಲಿ ಎರಡು ವರ್ಷಗಳ ಕಾಲ ಇಲ್ಲವಾಗಿದ್ದ ಕಿತ್ತೂರು ಉತ್ಸವ ಈ ಬಾರಿ ಎರಡು ದಿನಗಳ ಅತ್ಯಂತ ಸಡಗರ ಸಂಭ್ರಮದಿಂದ ಬೆಳ್ಳಿ ಹಬ್ಬ ಆಚರಣೆ ಆಗುವ ಮೂಲಕ ವರ್ಣರಂಜಿತವಾಗಿ ಉತ್ಸವಕ್ಕೆ ತೆರೆ ಬಿದ್ದಿತು.

ಕೋವಿಡ್‌ ಆತಂಕದ ಮಧ್ಯೆಯೂ ಈ ಭಾಗದ ಜನತೆ ಕೋವಿಡ್‌ ಲೆಕ್ಕಕ್ಕೇ ಇಲ್ಲ ಎಂಬಂತೆ ಉತ್ಸಾಹದಿಂದ ಭಾಗವಹಿಸಿದ್ದರು. ಎರಡು ವರ್ಷಗಳ ಕಾಲ ಇಂಥ ಉತ್ಸವ, ಜಾತ್ರೆಗಳ ಸಂಭ್ರಮ ಇಲ್ಲದೇ ಮನೆಯಲ್ಲಿಯೇ ಇದ್ದ ಜನರಿಗೆ ಈ ಬಾರಿ ಉತ್ಸವ ಉತ್ಸಾಹ ಮೂಡಿಸಿತು. ಜನರು ಅತ್ಯಂತ ಸಂಭ್ರಮದಿಂದ ಉತ್ಸವದಲ್ಲಿ ಪಾಲ್ಗೊಂಡು ಚನ್ನಮ್ಮನ ಗತವೈಭವಕ್ಕೆ ಸಾಕ್ಷಿಯಾದರು. ಎರಡು ವರ್ಷಗಳ ಕಾಲ ಸರಳ ಹಾಗೂ ಸಾಂಕೇತಿಕವಾಗಿ ಕಿತ್ತೂರು ಉತ್ಸವ ಆಚರಿಸಲಾಗಿತ್ತು. ವೀರ ಸೇನಾನಿಗಳ ನಾಡಿನಲ್ಲಿ ಯಾವುದೇ ಅಬ್ಬರ ಇರಲಿಲ್ಲ,

ಕಿತ್ತೂರು ಚನ್ನಮ್ಮನ ಇತಿಹಾಸದ ಪುಟಗಳ ಕಲರವ ಕಂಡಿರಲಿಲ್ಲ, ಬ್ರಿಟಿಷರನ್ನು ಸದೆಬಡಿದ ನೆನಪುಗಳನ್ನು ಮೆಲುಕು ಹಾಕುವ ಗೋಜಿಗೂ ಹೋಗಿರಲಿಲ್ಲ. ಈ ಬಾರಿ ಕಾಕತಾಳೀಯ ಎಂಬಂತೆ ಕೋಟೆ ಆವರಣದಲ್ಲಿ ಉತ್ಸವದ 25ನೇ ವರ್ಷಾಚರಣೆ ಹೊಸ ಮೆರಗು ತಂದಿದೆ.
ಸ್ವಾತಂತ್ರ್ಯ ಸಂಗ್ರಾಮದ ಧ್ರುವತಾರೆ ರಾಣಿ ಚನ್ನಮ್ಮನ ಉತ್ಸವದ ಬೆಳ್ಳಿ ಹಬ್ಬದ ಸಂಭ್ರಮ ಈ ಭಾಗದ ಜನರ ಉತ್ಸಾಹ ಇಮ್ಮಡಿಗೊಳಿಸಿದೆ.

ಪ್ರತಿವರ್ಷ ಮೂರು ದಿನಗಳ ಕಾಲ ಕಿತ್ತೂರು ಉತ್ಸವ ನಡೆಯುತ್ತಿತ್ತು. ಈ ಸಲ ಒಂದು ದಿನಕ್ಕೆ ಕಡಿವಾಣ ಹಾಕಿ ಎರಡು ದಿನಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ಈ ಅವ ಧಿಯಲ್ಲಿ ಕಲಾವಾಹಿನಿ ಮೆರವಣಿಗೆ, ಜಾನಪದ ಸೊಗಡು, ವಿವಿಧ ಸಾಂಸ್ಕೃತಿಕ, ಸಂಗೀತ ರಸದೌತಣ, ಚನ್ನಮ್ಮನ ಇತಿಹಾಸ ಸಾರುವ ಗೋಷ್ಠಿಗಳು, ವಿವಿಧ ಕ್ರೀಡಾ ಸ್ಪರ್ಧೆಗಳು ಮತ್ತಷ್ಟು ಮೆರಗು ಹೆಚ್ಚಿಸಿವೆ. ಜನರ ಸಂಭ್ರಮಕ್ಕೆ ಪಾರವೇ ಇರಲಿಲ್ಲ. ಗೋಷ್ಠಿಗಳಲ್ಲೂ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಕಿಕ್ಕಿರಿದ್ದು ಸೇರಿದ್ದ ಜನಸಾಗರ
ಕೋವಿಡ್‌-19 ಇದ್ದರೂ ನಿರೀಕ್ಷೆಗೂ ಮೀರಿ ಜನಸಾಗರ ಹರಿದು ಬಂದಿತ್ತು. ಕಿತ್ತೂರು ತಾಲೂಕಿನ ಹಳ್ಳಿ ಹಳ್ಳಿಗಳಿಂದ ಜನರು ಶನಿವಾರ ಮತ್ತು ರವಿವಾರ ದಿನ ಕಂಡು ಬಂದರು. ರವಿವಾರ ಬೆಳಗಿನ ಜಾವದವರೆಗೂ ಜನ ದಟ್ಟಣೆ ಇತ್ತು. ಕೋಟೆ ಆವರಣದಲ್ಲಿ ಹಾಕಿರುವ ಮಳಿಗೆಗಳ ಬಳಿ ಆಟಿಕೆಗಳ ಸಾಮಾನುಗಳ ಖರೀದಿಯಲ್ಲಿ ತೊಡಗಿದ್ದರು. ಕೋಟೆ ಸುತ್ತಲೂ ಜಾತ್ರೆಯ ಚಿತ್ರಣವೇ ಕಂಡು ಬಂತು. ಕೆಎನ್‌ವಿಎಸ್‌ ಕಾಲೇಜು ಆವರಣದಲ್ಲಿ ಹಾಕಿದ್ದ ವಸ್ತು ಪ್ರದರ್ಶನ ಮಳಿಗೆಗಳಲ್ಲೂ ಜನ ರು ಕಿಕ್ಕಿರಿದ್ದು ಸೇರಿದ್ದರು.

ಮೌಡ್ಯದ ವಿರುದ್ಧ ತೊಡೆ ತಟ್ಟಿದ ಸಿಎಂ
ಕಿತ್ತೂರು ಉತ್ಸವಕ್ಕೆ ಬರುವ ಮುಖ್ಯಮಂತ್ರಿಗಗಳು ಅಧಿ ಕಾರ ಕಳೆದುಕೊಳ್ಳುತ್ತಾರೆ ಎಂಬ ಮೂಢನಂಬಿಕೆ ವಿರುದ್ಧ ಈ ಸಲದ ಉತ್ಸವದಲ್ಲಿ ಭಾಗಿಯಾಗುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಡ್ಡು ಹೊಡೆದಿದ್ದಾರೆ. ಈ ಮುಂಚೆ  ಬಹುತೇಕ ಮುಖ್ಯಮಂತ್ರಿಗಳು ಕಿತ್ತೂರು ಉತ್ಸವದಲ್ಲಿ ಪಾಲ್ಗೊಳ್ಳಲು ಹಿಂದೇಟು ಹಾಕುತ್ತಿದ್ದರು. ಇಂಥ ಕೆಟ್ಟ ಸಂಪ್ರದಾಯಕ್ಕೆ ಕಡಿವಾಣ ಹಾಕಲು ಮುಖ್ಯಮಂತ್ರಿ
ಬೊಮ್ಮಾಯಿ ಅವರು ಬಂದು ಉದ್ಘಾಟಿಸುವ ಮೂಲಕ ಈ ಭಾಗದ ಜನರ ಆಶೋತ್ತರಗಳಿಗೆ ಸ್ಪಂದಿಸಿದರು.

ಕಿತ್ತೂರಿನ ಹೃದಯ ಗೆದ್ದ ಸಿಎಂ
ಅನೇಕ ವರ್ಷಗಳ ಕಿತ್ತೂರು ಭಾಗದ ಸಮಸ್ಯೆಗಳಿಗೆ ಕಿವಿಯಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಮುಖ ಬೇಡಿಕೆಗಳಿಗೆ ಸ್ಪಂದಿಸುವ ಮೂಲಕ ಇಲ್ಲಿಯ ಜನರ ಹೃದಯ ಗೆದ್ದಿದ್ದಾರೆ. ಮುಂಬೈ-ಕರ್ನಾಟಕ ಪ್ರಾಂತ್ಯವನ್ನು ಕಿತ್ತೂರು-ಕರ್ನಾಟಕ ಮಾಡುವ ಬಗ್ಗೆ ಮುಂದಿನ ಸಚಿವ ಸಂಪುಟದಲ್ಲಿ ನಿರ್ಧರಿಸುವುದಾಗಿ ಮುಖ್ಯಮಂತ್ರಿಗಳು ಪ್ರಕಟಿಸಿದ್ದು ಮಹತ್ವದ ನಿರ್ಧಾರವಾಗಿದೆ. ಕಿತ್ತೂರು ಉತ್ಸವವನ್ನು ರಾಜ್ಯ ಉತ್ಸವವಾಗಿ ಮಾಡಲು ಘೋಷಿಸಿದರು. ಜತೆಗೆ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಅನುದಾನ ಹಾಗೂ ಕಿತ್ತೂರು ಅಭಿವೃದ್ಧಿಗಾಗಿ ಮಾಸ್ಟರ್‌ ಪ್ಲಾನ್‌, ಮುಂದಿನ ವರ್ಷದಿಂದ ಜ್ಯೋತಿ ಯಾತ್ರೆಯನ್ನು ರಾಜ್ಯಾದ್ಯಂತ ಸಂಚರಿಸಲು ಆದೇಶಿಸಿದ್ದು ಬಹುತೇಕ ಎಲ್ಲ ಬೇಡಿಕೆಗೂ ಬೊಮ್ಮಾಯಿ ಸ್ಪಂದಿಸಿದ್ದಾರೆ.

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.