ಯುರೋಪ್‌ ಮಾದರಿ ಕಸದ ವಿಲೇ !

ಪ್ರಥಮ ಹಂತದಲ್ಲಿ 30 ಕಡೆಗಳಲ್ಲಿ ಭೂಗತ ಕಸದತೊಟ್ಟಿಗಳನ್ನು ನಿರ್ಮಾಣ ಮಾಡುವದು.

Team Udayavani, Oct 25, 2021, 9:39 PM IST

ಯುರೋಪ್‌ ಮಾದರಿ ಕಸದ ವಿಲೇ !

ಬೆಳಗಾವಿ: ಯುರೋಪ್‌ ಮಾದರಿಯ ಅತ್ಯಾಧುನಿಕ ಕಸ ಸಂಗ್ರಹಣೆ ವ್ಯವಸ್ಥೆ ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಬೆಳಗಾವಿ ನಗರದಲ್ಲಿ ಜಾರಿಯಾಗುತ್ತಿದೆ. ಈ ಮೂಲಕ ಬೆಳಗಾವಿ ಹೈಟೆಕ್‌ ನಗರವಾಗುವ ನಿಟ್ಟಿನಲ್ಲಿ ಮತ್ತೂಂದು ದಿಟ್ಟ ಹೆಜ್ಜೆಯಿಟ್ಟಿದೆ. ಬೆಳಗಾವಿ ನಗರ ಅದರಲ್ಲೂ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ದಿನಕ್ಕೊಂದು ಹೊಸ ವಿಶಿಷ್ಟ ಯೋಜನೆಗಳನ್ನು ಅಳವಡಿಸುತ್ತಿರುವ ಶಾಸಕ ಅಭಯ ಪಾಟೀಲ ಈ ವಿನೂತನ ಯೋಜನೆ ಮೂಲಕ ಪ್ರಗತಿಯ ಹಾದಿಯಲ್ಲಿ ಹೊಸ ಹೆಜ್ಜೆ ತುಳಿದಿದ್ದಾರೆ.

ಈಗಾಗಲೇ ದಕ್ಷಿಣ ಕ್ಷೇತ್ರದಲ್ಲಿ ಹೈಟೆಕ್‌ ಡಿಜಿಟಲ್‌ ಲೈಬ್ರರಿ, ಬುದ್ಧಿಮಾಂದ್ಯ-ವಿಕಲ ಚೇತನ ಮಕ್ಕಳ ಮನರಂಜನೆಗೆ ವಿಶೇಷ ಪಾರ್ಕ್‌, ತಿನಿಸು ಕಟ್ಟೆ (ಖಾವು ಕಟ್ಟಾ) ನಿರ್ಮಾಣ ಜೊತೆಗೆ ವ್ಯಾಕ್ಸಿನ್‌ ಡಿಪೋ ಆವರಣದಲ್ಲಿ ಎವಿಯೇಶನ್‌ ಸೆಂಟರ್‌ ಮತ್ತು ನಾಥ ಪೈ ಸರ್ಕಲ್‌ ಬಳಿಯ ರಸ್ತೆಯ ಡಿವೈಡರ್‌ ಜಾಗದಲ್ಲಿ ಬೀದಿ ವ್ಯಾಪಾರಿಗಳಿಗೆ ವಿಶೇಷ ಮಳಿಗೆ ನಿರ್ಮಾಣ ಸೇರಿದಂತೆ ಹತ್ತು ಹಲವು ವಿಶೇಷ ಸವಲತ್ತುಗಳನ್ನು ತಂದು ಕೊಟ್ಟಿರುವ ಅಭಯ ಪಾಟೀಲ ಈಗ ಸ್ವತ್ಛತೆಯ ವಿಚಾರದಲ್ಲೂ ಹೈಟೆಕ್‌ ಮಾದರಿ ಅನುಸರಿಸಲು ಮುಂದಾಗಿದ್ದಾರೆ.

ನಗರದಲ್ಲಿ ಕಸದ ಸಂಗ್ರಹ ಹಾಗೂ ವಿಲೇವಾರಿ ಸಮಸ್ಯೆ ಹೊಸದೇನಲ್ಲ. ಸಾರ್ವಜನಿಕರು ಪದೇ ಪದೇ ಕಸದ ವಿಲೇವಾರಿ ಸಮಸ್ಯೆ ಬಗ್ಗೆ ದೂರು ನೀಡುತ್ತಿದ್ದರೂ ಅದಕ್ಕೆ ಪರಿಹಾರ ಸಿಕ್ಕಿಲ್ಲ. ಮಹಾನಗರಪಾಲಿಕೆ ಇದಕ್ಕಾಗಿ ಕೋಟಿಗಟ್ಟಲೇ ಹಣ ವೆಚ್ಚ ಮಾಡುತ್ತಿದ್ದರೂ ಸಮಸ್ಯೆಹಾಗೆಯೇ ಉಳಿದಿದೆ. ಪಾಲಿಕೆಯ ನಿರ್ಲಕ್ಷದಿಂದ ಬೇಸತ್ತಿದ್ದ ಪಾಟೀಲ ಸ್ವತಃ ಪಾಲಿಕೆ ಆಯುಕ್ತರ ಮನೆಯ ಮುಂದೆ ಕಸ ಚೆಲ್ಲಿ ಪ್ರತಿಭಟನೆ ವ್ಯಕ್ತಪಡಿಸಿದ್ದರು. ಶಾಸಕರ ಈ ಕ್ರಮ ಭಾರೀ ಸುದ್ದಿಮಾಡಿತ್ತು.

ಪಾಲಿಕೆಯಲ್ಲಿ ಮೊದಲೇ ಸಿಬ್ಬಂದಿಗಳ ಕೊರತೆ ಇದೆ. ಇನ್ನೊಂದು ಕಡೆ ಕಸ ಸಂಗ್ರಹಣೆ ವಿಷಯದಲ್ಲಿ ಸಾರ್ವಜನಿಕರು ಹಾಗೂ ಪೌರ ಕಾರ್ಮಿಕರ ನಡುವೆ ಪರಸ್ಪರ ದೂರುಗಳಿವೆ. ಸಮರ್ಪಕ ಕಸ ವಿಲೇವಾರಿ ಆಗುತ್ತಿಲ್ಲ ಎಂಬು ದೂರು ಒಂದು ಕಡೆಯಾದರೆ ಸಾರ್ವಜನಿಕರು ಸರಿ ಯಾಗಿ ಸಹಕಾರ ನೀಡುತ್ತಿಲ್ಲ ಎಂಬ ಆರೋಪ ಸಹ ಇದೆ. ಈ ಎಲ್ಲ ಕಾರಣಗಳಿಂದ ಕಸದ ಸಮಸ್ಯೆ ಬಗೆಹರಿಯದೇ ಇರುವುದನ್ನು ಮನಗಂಡ ಅಭಯ ಪಾಟೀಲ ಈಗ ತಾವೇ ಹೊಸ ವ್ಯವಸ್ಥೆಯನ್ನು ಅಳವಡಿಸಲು ಮುಂದಾಗಿದ್ದಾರೆ.

ಅಂಡರ್‌ಗ್ರೌಂಡ್‌ ಹೈಡ್ರೋಲಿಕ್‌ ಕಸದ ತೊಟ್ಟಿಗಳನ್ನು ಅಳವಡಿಸುವ ಯೋಜನೆಯನ್ನು ತಮ್ಮ ಕ್ಷೇತ್ರದಲ್ಲಿ ಆರಂಭಿಸಲು ಸಿದ್ಧರಾಗಿದ್ದಾರೆ. ಈ ರೀತಿಯ ವ್ಯವಸ್ಥೆ ಭಾರತ ದೇಶದಲ್ಲೇ ಪ್ರಥಮ ಎಂಬುದು ಇಲ್ಲಿ ಗಮನಿಸಬೇಕಾದ ಸಂಗತಿ. ಒಟ್ಟು ಎರಡು ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ. ಪ್ರಥಮ ಹಂತದಲ್ಲಿ 30 ಕಡೆಗಳಲ್ಲಿ ಭೂಗತ ಕಸದತೊಟ್ಟಿಗಳನ್ನು ನಿರ್ಮಾಣ ಮಾಡುವದು.

ಎರಡನೇ ಹಂತದಲ್ಲಿ 28 ಕಡೆ ಹಾಗೂ ಮೂರನೇ ಹಂತದಲ್ಲಿ 52 ಕಡೆಗಳಲ್ಲಿ ಇದರ ನಿರ್ಮಾಣ ಕಾರ್ಯ ನಡೆಯಲಿದೆ. ಎಲ್ಲ ಅಂದುಕೊಂಡಂತೆ ನಡೆದರೆ ಬರುವ 15 ದಿನಗಳಲ್ಲಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಹಾಪುರದಲ್ಲಿ ಈ ವಿನೂತನ ವ್ಯವಸ್ಥೆಯ ಈ ಕಾರ್ಯ ಆರಂಭವಾಗಲಿದೆ. ಈ ಭೂಗತ ಹೈಡ್ರೋಲಿಕ್‌ ಕಸದತೊಟ್ಟಿಗಳಲ್ಲಿ ಶೇ.50ರಷ್ಟು ಕಸ ತುಂಬಿದರೆ ನೇರವಾಗಿ ಕಸ ವಿಲೇವಾರಿ ಮಾಡುವ ಕಾರ್ಮಿಕರಿಗೆ ಇದರ
ಸಂದೇಶ ಹೋಗುತ್ತದೆ. ನಂತರ ಶೇ.70ರಿಂದ 80 ರಷ್ಟು ಕಸ ತುಂಬಿದರೂ ಅದರ ವಿಲೇವಾರಿ ಆಗದಿದ್ದರೆ ಹಿರಿಯ ಅಧಿಕಾರಿಗಳಿಗೆ ಮತ್ತು ಶಾಸಕರಿಗೆ ಸಂದೇಶ ಹೋಗುವ ವ್ಯವಸ್ಥೆ ಮಾಡಲಾಗಿದೆ.

ಪ್ರತಿಶತ 100ರಷ್ಟು ಕಸ ತುಂಬಿದ ನಂತರವೂ ವಿಲೇವಾರಿ ಮಾಡದೇ ಹೋದರೆ ಆಗ ಅದಕ್ಕೆ ಸಂಬಂಧಪಟ್ಟ ಗುತ್ತಿಗೆದಾರರು, ವಾಹನ ಮಾಲೀಕರು ಹಾಗೂ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ದಂಡ ಆಕರಿಸಲಾಗುವದು ಎಂದು ಶಾಸಕ ಅಭಯ ಪಾಟೀಲ ವಿವರಿಸಿದರು. ಜನರಲ್ಲಿ ಈಗ ಸ್ವತ್ಛತೆಯ ಬಗ್ಗೆ ಜಾಗೃತಿ ಮೂಡುತ್ತಿದೆ. ಎಲ್ಲೆಂದರಲ್ಲಿ ಕಸ ಹಾಕಬಾರದು ಎಂಬುದು ಅವರಿಗೂ ಮನವರಿಕೆಯಾಗಿದೆ. ಈಗ ನಾವು ಅಳವಡಿಸುತ್ತಿರುವ ಹೈಡ್ರೋಲಿಕ್‌ ಕಸದ ತೊಟ್ಟಿಗಳಿಂದ ಇನ್ನಷ್ಟು ಅನುಕೂಲವಾಗಲಿದೆ.

ಜನರಿಗೂ ಸಹ ಇದರಲ್ಲಿ ಕಸ ಹಾಕಲು ಬಹಳ ಸುಲಭವಾಗಲಿದೆ. ನಾವು ಮಾಡುತ್ತಿರುವ ಈ ವಿನೂತನ ಯೋಜನೆಯ ಬಗ್ಗೆ ಕೇಂದ್ರದ ಸ್ಮಾಟ್‌ ಸಿಟಿ ಅಧಿಕಾರಿಗಳು ದೂರವಾಣಿ ಕರೆ ಮಾಡಿ ವಿಚಾರಿಸಿದ್ದಾರೆ ಎಂಬುದು ಅಭಯ ಪಾಟೀಲ ಅವರ ಹೆಮ್ಮೆಯ ಮಾತು. ಕಸದ ತೊಟ್ಟಿಯಲ್ಲಿ ಒಂದು ಟನ್‌ ಕಸ ಸಂಗ್ರಹಿಸುವ ಸಾಮರ್ಥ್ಯ ಇದೆ. ಇದನ್ನು ಸಂಗ್ರಹಿಸಿ ತೆಗೆದುಕೊಂಡು ಹೋಗುವ ವಾಹನವನ್ನು 45 ಲಕ್ಷ ರೂ. ವೆಚ್ಚದಲ್ಲಿ
ಖರೀದಿಸಲಾಗಿದ್ದು ಮುಂದಿನ ವಾರ ಬೆಳಗಾವಿಗೆ ಈ ವಾಹನ ಬರಲಿದೆ. ಭೂಗತ ಹೈಡ್ರೋಲಿಕ್‌ ಕಸದ ತೊಟ್ಟಿಗಳನ್ನು ನಿರ್ಮಾಣ ಮಾಡುವ ಕಾರ್ಯ ಆರಂಭವಾಗಿದ್ದು ಶಹಾಪುರದಲ್ಲಿ ಈ ವಾರದಲ್ಲಿ ಇದರ ಕೆಲಸ ಪೂರ್ಣಗೊಳ್ಳಲಿದೆ.

ಕೇಶವ ಆದಿ

ಟಾಪ್ ನ್ಯೂಸ್

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.