ಕಿತ್ತೂರಿನ ಸಂಪೂರ್ಣ ಇತಿಹಾಸ ಬೆಳಕಿಗೆ ಬರಲಿ

ಜನ್ಮ ಸ್ಥಳ, ಅವರುಗಳ ತ್ಯಾಗ, ಬಲಿದಾನಗಳ ಸಂಪೂರ್ಣ ದಾಖಲೆಯುಳ್ಳ ಮಾಹಿತಿ 2024ರ ಒಳಗಾಗಿ ಹೊರಬೇಕಾಗಿದೆ.

Team Udayavani, Oct 25, 2021, 9:57 PM IST

ಕಿತ್ತೂರಿನ ಸಂಪೂರ್ಣ ಇತಿಹಾಸ ಬೆಳಕಿಗೆ ಬರಲಿ

ಚನ್ನಮ್ಮನ ಕಿತ್ತೂರು: 1824ರ ಪ್ರಥಮ ಸ್ವಾತಂತ್ರ್ಯ ಹೋರಾಟಕ್ಕೆ ಮುಂಬರುವ 2024ರಲ್ಲಿ 200 ವರ್ಷಗಳು ಪೂರ್ಣಗೊಳ್ಳುತ್ತಿದ್ದರೂ ಕಿತ್ತೂರು ಸಂಸ್ಥಾನಕ್ಕೆ ಸೇರಿರುವ ಆಶೋತ್ತರಗಳು ಪೂರ್ಣಗೊಳ್ಳದಿರುವುದು ಖೇದಕರ ಸಂಗತಿ ಎಂದು ಕಿತ್ತೂರು ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.

ಕಿತ್ತೂರು ಉತ್ಸವದ ಎರಡನೇ ದಿನ ರವಿವಾರ ರಾಣಿ ಚನ್ನಮ್ಮಾಜಿ ವೇದಿಕೆಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮನ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ ಉದ್ಘಾಟನಾ ಸಮಾರಂಭದ ಸಾನಿಧ್ಯವಹಿಸಿ ಅವರು ಮಾತನಾಡಿ, ಕಿತ್ತೂರಿನ ಸಂಪೂರ್ಣ ಇತಿಹಾಸ ಬೆಳಕಿಗೆ ಬಂದಿಲ್ಲ. ಹೋರಾಟದಲ್ಲಿ ಭಾಗವಹಿಸಿದ್ದ ಎಲ್ಲ ಹೋರಾಟಗಾರರ ಹುಟ್ಟೂರು, ಜನ್ಮ ಸ್ಥಳ, ಅವರುಗಳ ತ್ಯಾಗ, ಬಲಿದಾನಗಳ ಸಂಪೂರ್ಣ ದಾಖಲೆಯುಳ್ಳ ಮಾಹಿತಿ 2024ರ ಒಳಗಾಗಿ ಹೊರಬೇಕಾಗಿದೆ.

ಈ ವಿಷಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ವಿಶೇಷ ಕಾಳಜಿಯುಳ್ಳವರಾಗಿದ್ದು, ಶಾಸಕರು, ಅಭಿವೃದ್ಧಿ ಪ್ರಾಧಿಕಾರದವರು ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು. ಚನ್ನಮ್ಮನ ಪರಂಪರೆ, ಇತಿಹಾಸ ಉಳಿಸುವ ನಿಟ್ಟಿನಲ್ಲಿ ವಿಚಾರ ಸಂಕಿರಣ ಪೂರಕವಾಗಿರಲಿ ಎಂದು ಮಡಿವಾಳ ರಾಜಯೋಗೀಂದ್ರ ಶ್ರೀಗಳು ಹೇಳಿದರು.

ಬೆಂಗಳೂರಿನ ಪುರಾತತ್ವ ವಸ್ತು ಸಂಗ್ರಾಲಯಗಳ ಇಲಾಖೆಯ ನಿರ್ದೇಶಕ ಡಾ. ಆರ್‌. ಗೋಪಾಲ ಮಾತನಾಡಿ, ಬ್ರಿಟಿಷರು ಇತಿಹಾಸ ರಚನೆಯಲ್ಲಿ ಮುಂಚೂಣಿಯಲ್ಲಿದ್ದರು. ಲಂಡನ್‌ ವಸ್ತು ಸಂಗ್ರಾಲಯದಲ್ಲಿರುವ ಕಿತ್ತೂರು ಸಂಸ್ಥಾನಕ್ಕೆ ಸೇರಿರುವ ದಾಖಲೆಗಳನ್ನು
ಮರಳಿ ತರುವ ನಿಟ್ಟಿನಲ್ಲಿ ಕೆಲಸ ನಡೆಯಬೇಕು. ನಮ್ಮ ಇಲಾಖೆಯಿಂದ ಬೇಕಾದ ಸಹಕಾರ ನೀಡುವುದಾಗಿ ತಿಳಿಸಿದರು. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ರಾಣಿ ಚನ್ನಮ್ಮ ಅಧ್ಯಯನ ಪೀಠದ ಅಧ್ಯಕ್ಷ ಡಾ. ಎಸ್‌.ಎಂ.ಗಂಗಾಧರಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಕಿತ್ತೂರು ನಾಡಿನ ಚರಿತ್ರೆ ನಿಗೂಢ ರಹಸ್ಯವಾಗಿದೆ. ಸಂಶೋಧಕರಿಂದ ಅಧ್ಯಯನ ನಡೆಸಿ ಕಿತ್ತೂರು ಚನ್ನಮ್ಮನ ಭವ್ಯ ಚರಿತ್ರೆ ಕಟ್ಟಲು ಹೊರಟ್ಟಿದ್ದೇವೆ ಎಂದರು.

ಧಾರವಾಡದ ಕವಿವಿ ನಿವೃತ್ತ ಪ್ರಾಧ್ಯಾಪಕ ಡಾ. ಆರ್‌.ಎಂ.ಷಡಕ್ಷರಯ್ಯ ಆಶಯ ನುಡಿಗಳನ್ನಾಡಿ, ಕಿತ್ತೂರು ಚನ್ನಮ್ಮನ ಸಾಹಸಮಯ ಹೋರಾಟ, ಅನುಭವಿಸಿದ ತೊಂದರೆ, ಆ ಪ್ರದೇಶಗಳ ಚರಿತ್ರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯವಾಗಬೇಕಿದೆ ಎಂದರು. ಮೊಡಿ ಭಾಷೆಯಲ್ಲಿರುವ ಮೌಖೀಕ ದಾಖಲೆಗಳನ್ನು ಊರು, ಊರುಗಳಲ್ಲಿ ಹುಡುಕಬೇಕಿದೆ. ಅಂದಾಗ ಮಾತ್ರ ನಮಗೆ ಕಿತ್ತೂರು ಸಂಸ್ಥಾನದ ಇತಿಹಾಸ ತಿಳಿಯುತ್ತದೆ ಎಂದು ಹೇಳಿದರು.

ಶಾಸಕ ಮಹಾಂತೇಶ ದೊಡ್ಡಗೌಡರ ಮಾತನಾಡಿ, ಇತಿಹಾಸದ ಬಗ್ಗೆ ತಿಳಿದಿರುವ ವ್ಯಕ್ತಿಗಳು ಮಾತ್ರ ಇತಿಹಾಸ ಸೃಷ್ಟಿಸಲು ಸಾಧ್ಯ. ಆ ನಿಟ್ಟಿನಲ್ಲಿ ಯುವ ಪೀಳಿಗೆ ಇತಿಹಾಸದ ಬಗ್ಗೆ ತಿಳಿದುಕೊಳ್ಳುವುದು ಅವಶ್ಯವಾಗಿದೆ. ಈ ಗೊಷ್ಠಿಗಳ ಮೂಲಕ ಮತ್ತೂಮ್ಮೆ ಕಿತ್ತೂರಿನ ಸಮಗ್ರ ಇತಿಹಾಸ ಹೊರಬರಲಿ ಎಂದು ಹೇಳಿದರು.

ಯು.ರು. ಪಾಟೀಲ, ಡಾ. ಸಿ. ಬಿ. ಗಣಾಚಾರಿ, ಡಾ. ಗವಿಸಿದ್ದಯ್ಯ, ಡಾ. ವಿಠಲ ಬಡಿಗೇರ, ಉಪವಿಭಾಗಾ ಧಿಕಾರಿ ಶಶಧರ ಬಗಲಿ, ತಹಶಿಲ್ದಾರ ಸೋಮಲಿಂಗ ಹಾಲಗಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ಚಂದ್ರಕಾಂತ ಹೆ„ಬತ್ತಿ ನಿರೂಪಿಸಿದರು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

1-wewqewq

Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.