ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು
Team Udayavani, Oct 26, 2021, 7:00 AM IST
ರಾಯ್ಪುರ: ಬಿಸಿಯೂಟದ ದಿನಸಿಗಾಗಿ ಶಿಕ್ಷಕರು ನಡೆಯಬೇಕಾಗಿದೆ ಎಂಟು ಕಿ.ಮೀ.!
ಛತ್ತೀಸ್ಗಢದ ಬಲರಾಮಪುರ ಜಿಲ್ಲೆಯ ಖಡಿಯಾ ಗ್ರಾಮದಲ್ಲಿ ಶಾಲೆಯ ಶಿಕ್ಷಕರ ದುರವಸ್ಥೆ ಇದು. ಗ್ರಾಮಕ್ಕೆ ರಸ್ತೆ ಸಂಪರ್ಕ ಇಲ್ಲದೇ ಇರುವ ಕಾರಣ ಸರಕಾರಿ ಶಾಲೆಯ ಶಿಕ್ಷಕರಾಗಿರುವ ಸುಶಿಲ್ ಯಾದವ್ ಮತ್ತು ಪಂಕಜ್ ಅವರು ಎಂಟು ಕಿ.ಮೀ. ದೂರದಲ್ಲಿರುವ ಬಲರಾಮಪುರಕ್ಕೆ ತೆರಳಬೇಕಾಗಿದೆ.
ಗುಡ್ಡ, ಹಳ್ಳಗಳನ್ನೆಲ್ಲ ದಾಟಿ ದಿನಸಿ ತರಬೇಕು. ಊರಿಗೆ ಸೂಕ್ತ ರಸ್ತೆ ನಿರ್ಮಾಣ ಮಾಡಬೇಕೆಂದು ಶಿಕ್ಷಕರು ಸರಕಾರಕ್ಕೆ ಮನವಿ ಮಾಡಿದ್ದಾರೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಿ ಜಿಲ್ಲಾ ಶಿಕ್ಷಣಾಧಿಕಾರಿ ಬಿ.ಎಕ್ಕಾ ತಿಳಿಸಿದ್ದಾರೆ.
ಇಷ್ಟಾದರೂ ಶಿಕ್ಷಕರು ತಮ್ಮ ಸ್ವಂತ ಹಣದಿಂದ, ಸಂಘ ಸಂಸ್ಥೆಗಳು ಹಾಗೂ ದಾನಿಗಳ ನೆರವಿನಿಂದ ಹಣ ಹಾಗೂ ದಿನಸಿ ಸಂಗ್ರಹಿಸಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುತ್ತಿದ್ದಾರೆ.
ಇದನ್ನೂ ಓದಿ:ಏರ್ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ
ಮಕ್ಕಳು ಹಸಿದುಕೊಂಡು ಪಾಠ ಕೇಳಬಾರದು ಎಂಬ ಶಿಕ್ಷಕರ ಕಳಕಳಿ ಅದು. ಈ ನಡುವೆ, ಛತ್ತೀಸ್ಗಡದ ಶಿಕ್ಷಕರು ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಅವರ ಸಾಹಸ ಇದೀಗ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ
PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?
MUST WATCH
ಹೊಸ ಸೇರ್ಪಡೆ
Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು
Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ