ಇಂದೂ ಜಾಮೀನು ಸಿಕ್ಕಿಲ್ಲ…ಆರ್ಯನ್ ಖಾನ್ ಅರ್ಜಿ ವಿಚಾರಣೆ ಅ.27ಕ್ಕೆ ಮುಂದೂಡಿದ ಹೈಕೋರ್ಟ್
ಜಾಮೀನು ಅರ್ಜಿ ಪರವಾಗಿ ವಾದಿಸಲು ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ಹಾಜರಾಗಿದ್ದರು.
Team Udayavani, Oct 26, 2021, 6:40 PM IST
ಮುಂಬಯಿ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆಯನ್ನು ಬಾಂಬೆ ಸೆಷನ್ ಕೋರ್ಟ್ ಮಂಗಳವಾರ(ಅಕ್ಟೋಬರ್ 26) ಅಕ್ಟೋಬರ್ 27ಕ್ಕೆ ಮುಂದೂಡಿದೆ.
ಇದನ್ನೂ ಓದಿ:ಆಸ್ಕರ್ ನಲ್ಲಿ ಭಾರತವನ್ನು ಪ್ರತಿನಿಧಿಸಲಿದೆ ತಮಿಳಿನ “ಕೂಳಾಂಗಲ್” ಸಿನಿಮಾ
ಬಾಂಬೆ ಸೆಷನ್ ಕೋರ್ಟ್ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆಯನ್ನು ಬುಧವಾರ (ಅ.27) ಮಧ್ಯಾಹ್ನ 2.30ಕ್ಕೆ ನಡೆಸುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ. ಡ್ರಗ್ಸ್ ಪ್ರಕರಣದಲ್ಲಿ ಬಂಧಿತನಾಗಿರುವ ಆರ್ಯನ್ ಖಾನ್ ಜಾಮೀನು ಅರ್ಜಿ ಪರವಾಗಿ ವಾದಿಸಲು ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ಹಾಜರಾಗಿದ್ದರು.
ಆರ್ಯನ್ ಜಾಮೀನು ಪರ ವಾದಿಸಿದ ರೋಹ್ಟಗಿ, ಆರ್ಯನ್ ಖಾನ್ ನನ್ನು ಹಡಗಿನಲ್ಲಿ ನಡೆದ ಪಾರ್ಟಿಗೆ ವಿಶೇಷ ಅತಿಥಿಯನ್ನಾಗಿ ಆಹ್ವಾನಿಸಲಾಗಿತ್ತು. ಪ್ರತೀಕ್ ಗಾಬಾ ಆರ್ಯನ್ ನನ್ನು ಆಹ್ವಾನಿಸಿದ್ದ. ಅರ್ಬಾಝ್ ನನ್ನು ಕೂಡಾ ಗಾಬಾನೇ ಆಹ್ವಾನಿಸಿದ್ದ ಎಂದು ರೋಹ್ಟಗಿ ಕೋರ್ಟ್ ನಲ್ಲಿ ವಾದಿಸಿದ್ದರು.
ಮಾಹಿತಿಯ ಮೇರೆಗೆ ಎನ್ ಸಿಬಿ ಅಧಿಕಾರಿಗಳು ಹಡಗಿನೊಳಗೆ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಆರ್ಯನ್ ಖಾನ್ ಬಳಿ ಎನ್ ಸಿಬಿ ಅಧಿಕಾರಿಗಳಿಗೆ ಯಾವುದೇ ವಸ್ತು ಸಿಕ್ಕಿರಲಿಲ್ಲವಾಗಿತ್ತು. ಆದರೂ ಆರ್ಯನ್ ಮತ್ತು ಅರ್ಬಾಝ್ ನನ್ನು ಬಂಧಿಸಲಾಗಿದೆ. ಆರ್ಯನ್ ಡ್ರಗ್ಸ್ ಸೇವನೆ ಮಾಡಿದ್ದಾನೆ ಎಂಬುದಕ್ಕೆ ಯಾವುದೇ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಿಲ್ಲ ಎಂದು ರೋಗ್ಟಗಿ ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ