ಪ್ರಧಾನಿ ನರೇಂದ್ರ ಮೋದಿ ಸಾಮಾನ್ಯ ವ್ಯಕ್ತಿಯಲ್ಲ, ಸರ್ವಶಕ್ತನ ಅವತಾರ: ಸಚಿವ ತಿವಾರಿ
ನರೇಂದ್ರ ಮೋದಿ ಅವರನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸುವುದಾಗಿದೆ ಎಂದು ಆರೋಪಿಸಿದರು.
Team Udayavani, Oct 27, 2021, 9:55 AM IST
ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು “ಸಾಮಾನ್ಯ ವ್ಯಕ್ತಿಯಲ್ಲ”…ಆದರೆ ಅವರೊಬ್ಬ ಸರ್ವಶಕ್ತನ ಅವತಾರ ಎಂದು ಉತ್ತರಪ್ರದೇಶದ ಪಂಚಾಯತ್ ರಾಜ್ ಸಚಿವ ಉಪೇಂದ್ರ ತಿವಾರಿ ಪ್ರಧಾನಿ ಮೋದಿ ಅವರನ್ನು ಈ ರೀತಿ ಹೊಗಳಿರುವುದಾಗಿ ಎಎನ್ ಐ ವರದಿ ಮಾಡಿದೆ.
ಇದನ್ನೂ ಓದಿ:ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ
ಹರ್ದೋಯಿಯಲ್ಲಿ ಅಮೃತ್ ಮಹೋತ್ಸವದ ಅಂಗವಾಗಿ ಸ್ವಚ್ಛ ಭಾರತ ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಿದ ವೇಳೆ ತಿವಾರಿ ಈ ಹೇಳಿಕೆ ನೀಡಿದ್ದಾರೆ. ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ತಿವಾರಿ, 2019ರಲ್ಲಿ ಮೈತ್ರಿ ಮಾಡಿಕೊಂಡರು, ಒಬ್ಬರನ್ನೊಬ್ಬರು ನೋಡಲು ಇಷ್ಟ ಪಡದ ಬುವಾ(ಚಿಕ್ಕಮ್ಮ) ಮತ್ತು ಭಟಿಜಾ(ಸೋದರಳಿಯ) ಸೇರಿ ಮೈತ್ರಿಕೂಟ ರಚಿಸಿದ್ದರು. ಇಂತಹ 24 ಪಕ್ಷಗಳು ಸೇರಿ ಮಹಾಘಟಬಂಧನ್
ರಚಿಸಿಕೊಂಡಿವೆ, ಅವುಗಳ ಉದ್ದೇಶ ಒಂದೇ ನರೇಂದ್ರ ಮೋದಿ ಅವರನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸುವುದಾಗಿದೆ ಎಂದು ಆರೋಪಿಸಿದರು.
ಮುಂದಿನ ವರ್ಷ ಉತ್ತರಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಮುಖಂಡರು ದೇಶಾದ್ಯಂತ ಇರುವ ದೇವಸ್ಥಾನಗಳಿಗೆ ಭೇಟಿ ನೀಡಲು ಆರಂಭಿಸುತ್ತಾರೆ ಎಂದು ತಿವಾರಿ ಹೇಳಿದರು.
ಕೇಜ್ರಿವಾಲ್ ಮಾತ್ರವಲ್ಲ, ಈಗ ಉತ್ತರಪ್ರದೇಶದ ಎಲ್ಲಾ ರಾಜಕೀಯ ಮುಖಂಡರು ದೇವಸ್ಥಾನಗಳಿಗೆ ಭೇಟಿ ಕೊಡಲು ಆರಂಭಿಸುತ್ತಾರೆ. ಯಾಕೆಂದರೆ 2022ರಲ್ಲಿ ವಿಧಾನಸಭೆ ಚುನಾವಣೆ ಬರಲಿದೆ ಎಂದು ತಿವಾರಿ ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia-Ukraine War: ಉಕ್ರೇನ್ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ
Mann Ki Baat: ತೆಲುಗಿನ ಜನರ ಮನ್ ಕಿ ಬಾತ್ ಆಲಿಸಿ… ಮೋದಿಗೆ ಶರ್ಮಿಳಾ
Panaji: ಮಕ್ಕಳಿಗಾಗಿ ಬ್ಯಾಂಕ್ ಲಾಕರ್ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!
Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
MUST WATCH
ಹೊಸ ಸೇರ್ಪಡೆ
Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ
Parameshwara; ಪ್ರಜ್ವಲ್ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ
Prajwal Revanna Case; ಪೆನ್ಡ್ರೈವ್ ಆರೋಪಿಗಳ ಜತೆ ಶ್ರೇಯಸ್: ಫೋಟೊ ವೈರಲ್
D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್
Russia-Ukraine War: ಉಕ್ರೇನ್ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ