125ಕ್ಕೂ ಹೆಚ್ಚು ಕುರಿಗಳ ಸಾವು-ಪರಿಶೀಲನೆ
ಬಡ ಕುರಿಗಾಹಿಗಳಿಗೆ ಅನ್ಯಾಯವಾಗಿದ್ದು, ಲಕ್ಷಾಂತರ ರೂ. ನಷ್ಟ ಅನುಭವಿಸಿದ್ದಾರೆ.
Team Udayavani, Oct 27, 2021, 8:05 PM IST
ಶಿವಮೊಗ್ಗ: ನಗರದ ಸಾಗರ ರಸ್ತೆಯ ಪೆಸಿಟ್ ಕಾಲೇಜಿನ ಮುಂಭಾಗ ಚಿಕ್ಕೋಡಿ ಭಾಗದ ಸಂಚಾರಿ ಕುರುಬರು ಟೆಂಟ್ಗಳನ್ನು ಹಾಕಿಕೊಂಡಿದ್ದು, ಕಳೆದೆರಡು ದಿನಗಳಿಂದ ಸುಮಾರು 125ಕ್ಕೂ ಹೆಚ್ಚು ಕುರಿಗಳು ನಿಗೂಢ ಕಾರಣದಿಂದ ಸಾವು ಕಂಡಿದ್ದು, ಪಶು ವೈದ್ಯಕೀಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸತ್ತ ಕುರಿಗಳ ರಕ್ತದ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದಾರೆ.
ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿದ ಕನಕ ಗುರುಪೀಠ ಹೊಸದುರ್ಗ ಶಾಖಾಮಠದ ಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳು ನಷ್ಟಕ್ಕೊಳಗಾದ ಕುರಿಗಾಹಿಗಳಿಗೆ ಸಾಂತ್ವನ ಹೇಳಿದರು. ನಂತರ ಪ್ರತಿಕ್ರಿಯಿಸಿದ ಅವರು, ಕುರಿಗಳ ಸಾವಿನಿಂದ ಕುರಿಗಾಹಿಗಳಾದ ವಾಸಪ್ಪ ಮಾನೆ ಮತ್ತು ಅವರ ಕುಟುಂಬ ಆತಂಕಕ್ಕೀಡಾಗಿದ್ದು, ನಿನ್ನೆ ಅಧಿ ಕಾರಿಗಳ ಗಮನಕ್ಕೆ ತಂದರೂ ಯಾರೂ ಸ್ಪಂದಿಸಿರಲಿಲ್ಲ. ಇದರಿಂದ ಬಡ ಕುರಿಗಾಹಿಗಳಿಗೆ ಅನ್ಯಾಯವಾಗಿದ್ದು, ಲಕ್ಷಾಂತರ ರೂ. ನಷ್ಟ ಅನುಭವಿಸಿದ್ದಾರೆ.
ಹಿಂದೆ ಸರ್ಕಾರದ ಅನುಗ್ರಹ ಯೋಜನೆಯಲ್ಲಿ ಮೃತಪಟ್ಟ ಕುರಿಗಳಿಗೆ 5 ಸಾವಿರ ರೂ. ಪರಿಹಾರ ದೊರಕುತ್ತಿತ್ತು. ಈಗಿನ ಸರ್ಕಾರ ಈ ಯೋಜನೆಯನ್ನು ರದ್ದುಗೊಳಿಸಿದ್ದು ಕುರಿಗಾಹಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಕುರಿಗಳ ನಿಗೂಢ ಸಾವಿಗೆ ನಿಖರ ಕಾರಣವನ್ನು ತಿಳಿದುಕೊಂಡು ಎಲ್ಲ ಪಶು ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ ನೀಡಬೇಕು. ಸತ್ತ ಕುರಿಗಳಿಗೆ ಕೂಡಲೇ ಪರಿಹಾರ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು. ಈ ಬಗ್ಗೆ ಸಿಎಂ ಜೊತೆ ಮಾತನಾಡುವುದಾಗಿ ಹೇಳಿದ ಅವರು, ಕೂಡಲೇ ಅನುಗ್ರಹ ಯೋಜನೆಯನ್ನು ಪುನರ್ ಪ್ರಾರಂಭಿಸುವಂತೆ ಆಗ್ರಹಿಸಿದರು. ಹಾಲುಮತ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಡಾ| ಡಿ.ಟಿ. ಪ್ರಶಾಂತ್, ಜಿಲ್ಲಾಧ್ಯಕ್ಷ ದಾನೇಶ್, ಜಿಲ್ಲಾ ಕಾರ್ಯಾಧ್ಯಕ್ಷ ಗಣೇಶ್ ಬಿಳಿಗಿ, ಮುಖಂಡ ಅರುಣ್ ಮತ್ತು ಕುರಿಗಾಹಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು
BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ