ತನಿಖೆಯಿಂದ ವಾಂಖೆಡೆ ತೆರವಿಲ್ಲ; ಎನ್ಸಿಬಿ ಸ್ಪಷ್ಟನೆ
ಸಮೀರ್ ವಾಂಖೆಡೆಯನ್ನು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದ ಅಧಿಕಾರಿಗಳು
Team Udayavani, Oct 28, 2021, 6:55 AM IST
ನವದೆಹಲಿ/ಮುಂಬೈ:ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಆರೋಪಿಯಾಗಿರುವ ಹೈಪ್ರೊಫೈಲ್ ಡ್ರಗ್ಸ್ ಕೇಸ್ನ ತನಿಖೆಯನ್ನು ರಾಷ್ಟ್ರೀಯ ಮಾದಕವಸ್ತು ನಿಯಂತ್ರಣ ಸಂಸ್ಥೆಯ (ಎನ್ಸಿಬಿ) ಮುಂಬೈ ವಲಯದ ಆಯುಕ್ತರಾದ ಸಮೀರ್ ವಾಂಖೆಡೆ ಅವರೇ ಮುಂದುವರಿಸಲಿದ್ದಾರೆ ಎಂದು ಎನ್ಸಿಬಿ ಸ್ಪಷ್ಟಪಡಿಸಿದೆ.
ಅವರ ವಿರುದ್ಧ ಕೇಳಿಬಂದಿರುವ ಆರೋಪಗಳಿಗೆ ಪೂರಕವಾದ ಸಾಕ್ಷಿಗಳು ಲಭ್ಯವಾಗುವವರೆಗೆ ಅವರನ್ನು ಡ್ರಗ್ಸ್ ಪ್ರಕರಣದ ತನಿಖೆಯಿಂದ ತೆರವುಗೊಳಿಸಲು ಸಾಧ್ಯವಿಲ್ಲ ಎಂದು ಎನ್ಸಿಬಿ ಮತ್ತೂಮ್ಮೆ ಸ್ಪಷ್ಟಪಡಿಸಿದೆ.
ವಾಂಖೆಡೆ ವಿರುದ್ಧ ಸುಲಿಗೆಯ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಬುಧವಾರದಂದು, ದೆಹಲಿಯಲ್ಲಿರುವ ಎನ್ಸಿಬಿ ಕೇಂದ್ರ ಕಚೇರಿಯಲ್ಲಿ ವಾಂಖೆಡೆಯವರನ್ನು ಸುಮಾರು ನಾಲ್ಕು ಗಂಟೆಗಳ ಕಾಲ ಎನ್ಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದರು. ಆನಂತರ, ಪ್ರಕರಣದ ತನಿಖೆಯನ್ನು ವಾಂಖೆಡೆಯವರೇ ಮುಂದುವರಿಸಲಿದ್ದಾರೆ ಎಂದು ಎನ್ಸಿಬಿ ಪ್ರಕಟಿಸಿದೆ.
ಇದನ್ನೂ ಓದಿ:5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ 5 ಬ್ಯಾಲಿಸ್ಟಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ
ಆರ್ಯನ್ಗೆ ಸಿಗದ ಜಾಮೀನು:
ಪ್ರಕರಣದಲ್ಲಿ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಆರ್ಯನ್, ಅದಕ್ಕಾಗಿ ಇನ್ನೂ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಬಾಂಬೆ ಹೈಕೋರ್ಟ್ನಲ್ಲಿ ನಡೆಯುತ್ತಿರುವ ಅವರ ಜಾಮೀನು ಅರ್ಜಿಯ ವಿಚಾರಣೆ ಗುರುವಾರವೂ ಮುಂದುವರಿಯಲಿದೆ. ಅರ್ಜಿಯ ವಿಚಾರಣೆ ಮಂಗಳವಾರ ಶುರುವಾಗಿತ್ತು.
ಮತ್ತೊಂದೆಡೆ, ಮುಂಬೈ ಸೆಷನ್ಸ್ ನ್ಯಾಯಾಲಯದಿಂದ ಮಂಗಳವಾರ ಜಾಮೀನು ಪಡೆದಿರುವ, ಇದೇ ಪ್ರಕರಣದ ಸಹ ಆರೋಪಿಗಳಾದ ಅವಿನ್ ಸಾಹು ಹಾಗೂ ಮನೀಶ್ ರಾಜ್ಗಾಹಿìಯಾ, ಮುಂಬೈನ ಅರ್ತೂರ್ ಜೈಲಿನಿಂದ ಬುಧವಾರ ಬಿಡುಗಡೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ