ನಾಳೆಯಿಂದ ನಮ್ಮ ಆಟ ಅಂದ್ರೆ ದುಡ್ಡು ಹಂಚೋದಾ ?:ಕುಮಾರಸ್ವಾಮಿ
Team Udayavani, Oct 28, 2021, 5:36 AM IST
ವಿಜಯಪುರ: ಇವತ್ತು ಸಾಯಂಕಾಲದ ತನಕ ಎಚ್. ಡಿ.ಕುಮಾರಸ್ವಾಮಿ ಅವರನ್ನು ಸಿಂದಗಿಯಲ್ಲಿ ಮುಕ್ತವಾಗಿ ಆಗಿ ಬಿಟ್ಟಿದ್ದೇವೆ. ನಾಳೆಯಿಂದ ನಮ್ಮ ಆಟ ಶುರುವಾಗುತ್ತದೆ ಎಂದು ಉಪಚುನಾವಣೆ ಬಹಿರಂಗ ಪ್ರಚಾರ ಅಂತ್ಯವಾಗುವುದಕ್ಕೆ ಮೊದಲು ಹೇಳಿಕೆ ನೀಡಿರುವ ವಸತಿ ಸಚಿವ ವಿ.ಸೋಮಣ್ಣ ಅವರನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆಗೆ ತೆಗೆದುಕೊಂಡರು.
ನಗರದಲ್ಲಿ ಬುಧವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾಳೆಯಿಂದ ನಮ್ಮ ಆಟ ಆರಂಭ ಎಂದರೆ ಅರ್ಥವೇನು? ಆಟ ಎಂದರೆ ದುಡ್ಡು ಹಂಚುವುದಾ? ನಿಮ್ಮ ಆಟವನ್ನು ಬರೀ ಚುನಾವಣೆಗಷ್ಟೇ ಸೀಮಿತ ಮಾಡಿಕೊಳ್ಳುತ್ತೀರೋ ಅಥವಾ ಸುಳ್ಳು ಹೇಳಿಕೊಂಡು, ಸುಳ್ಳು ಜಾಹೀರಾತುಗಳನ್ನು ಕೊಟ್ಟುಕೊಂಡು ಐದು ಲಕ್ಷ ಮನೆ ಕೊಟ್ಟೆ, ಆರು ಲಕ್ಷ ಮನೆ ಕೊಟ್ಟೆ ಅಂತ ಹೇಳಿಕೊಂಡು ತಿರುಗುತ್ತೀರೋ ಎಂದು ಲೇವಡಿ ಮಾಡಿದರು.
ಇದನ್ನೂ ಓದಿ:ಟಿ20 ವಿಶ್ವಕಪ್: ಸ್ಕಾಟ್ಲೆಂಡ್ ವಿರುದ್ಧ ನಮೀಬಿಯಾ ವಿಜಯ
ಬಿಎಸ್ವೈಯಿಂದ ಸೂಟ್ಕೇಸ್ ಪಡೆದಿದ್ದ ಸಿದ್ದು
ಈ ಹಿಂದೆ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಂದ ಎಷ್ಟು ಸೂಟ್ಕೇಸ್ ಪಡೆದಿದ್ದೀರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು. ಸಿಂದಗಿ ಉಪಚುನಾವಣೆ ನಿಮಿತ್ತ ಕ್ಷೇತ್ರದಲ್ಲಿ ಬುಧವಾರ ಪ್ರಚಾರ ನಡೆಸಿದ ವೇಳೆ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ