ನೈಸರ್ಗಿಕ ವಿಪತ್ತುಗಳಿಂದ 87 ಬಿಲಿಯನ್‌ ಡಾಲರ್‌ ನಷ್ಟ


Team Udayavani, Oct 28, 2021, 5:50 AM IST

ನೈಸರ್ಗಿಕ ವಿಪತ್ತುಗಳಿಂದ 87 ಬಿಲಿಯನ್‌ ಡಾಲರ್‌ ನಷ್ಟ

ವರ್ಷದಿಂದ ವರ್ಷಕ್ಕೆ ದೇಶದಲ್ಲಿ ನೈಸರ್ಗಿಕ ವಿಪತ್ತುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಒಂದು ಕಡೆ ತೀವ್ರ ಬರಗಾಲ, ಮತ್ತೂಂದು ಕಡೆ ಭಾರೀ ಮಳೆ, ಇದರ ಪರಿಣಾಮವಾಗಿ ಪ್ರವಾಹ. 2020ರಲ್ಲಿ ಭಾರತ, ಇಂಥ ಹಲವಾರು ನೈಸರ್ಗಿಕ ವಿಪತ್ತುಗಳಿಗೆ ಸಾಕ್ಷಿಯಾಗಿದೆ ಎಂದು ಜಾಗತಿಕ ಹವಾಮಾನ ಸಂಸ್ಥೆ(ಡಬ್ಲ್ಯುಎಂಒ) ಹೇಳಿದೆ. ಈ ನೈಸರ್ಗಿಕ ವಿಪತ್ತುಗಳ ಪರಿಣಾಮವಾಗಿ ಕಳೆದ ವರ್ಷ ಭಾರತದಲ್ಲಿ 87 ಬಿಲಿಯನ್‌ ಡಾಲರ್‌ನಷ್ಟು ನಷ್ಟ ಸಂಭವಿಸಿದೆ ಎಂಬ ಆಘಾತಕಾರಿ ಮಾಹಿತಿಯನ್ನೂ ಈ ಸಂಸ್ಥೆ ಹೊರಹಾಕಿದೆ.

ಕಳೆದ ವರ್ಷ ಇಡೀ ಜಗತ್ತಿನಲ್ಲಿ ನೈಸರ್ಗಿಕ ವಿಕೋಪಗಳಿಂದ ಹೆಚ್ಚು ನಷ್ಟ ಸಂಭವಿಸಿರುವುದು ಚೀನದಲ್ಲಿ. ಇಲ್ಲಿ ಒಟ್ಟಾರೆ ಆಗಿರುವ ನಷ್ಟ 238 ಬಿಲಿಯನ್‌ ಡಾಲರ್‌. ಚೀನ ಬಿಟ್ಟರೆ, ಭಾರತವೇ ಎರಡನೇ ಸ್ಥಾನದಲ್ಲಿದೆ. ಮೂರನೇ ಸ್ಥಾನದಲ್ಲಿ ಜಪಾನ್‌ ಇದ್ದು, ಇಲ್ಲಿ 86 ಬಿಲಿಯನ್‌ ಡಾಲರ್‌ ನಷ್ಟ ಸಂಭವಿಸಿದೆ ಎಂದು ಡಬ್ಲ್ಯುಎಂಒ ತಿಳಿಸಿದೆ. ಈ ದೇಶಗಳಲ್ಲಿ ಹೆಚ್ಚು ನಷ್ಟಕ್ಕೆ ಕಾರಣವಾಗಿರುವುದು ಪ್ರವಾಹಕ್ಕಿಂತ ಬರಗಾಲ ಎಂಬುದೂ ಈ ಸಂಸ್ಥೆ ನೀಡಿರುವ ವರದಿಯ ತಿರುಳು.

ಈ ನೈಸರ್ಗಿಕ ವಿಪತ್ತುಗಳಿಗೆ ಜಾಗತಿಕ ತಾಪಮಾನದಲ್ಲಿ ಆಗುತ್ತಿರುವ ಬದಲಾವಣೆಯೇ ಕಾರಣ ಎಂಬುದು ಜಾಗತಿಕ ಹವಾಮಾನ ಸಂಸ್ಥೆಯ ಅಭಿಪ್ರಾಯ. ಈ ಬಗ್ಗೆ ಜಗತ್ತಿನ ಎಲ್ಲ ದೇಶಗಳಿಗೆ ಈ ಸಂಸ್ಥೆ ನೇರ ಎಚ್ಚರಿಕೆಯನ್ನೂ ನೀಡಿದೆ.

ಕಳೆದ ವರ್ಷ ಏಷ್ಯಾದಲ್ಲಿ ತಾಪಮಾನ ತುಸು ಹೆಚ್ಚಾಗಿಯೇ ಇತ್ತು. ಅಂದರೆ, ಸಾಮಾನ್ಯಕ್ಕಿಂತ 1.39 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಿತ್ತು. 1981ರಿಂದ 2010ರ ಅಂದಾಜಿಗೆ ತೆಗೆದುಕೊಂಡರೆ ಹೆಚ್ಚೇ ಆಗಿದೆ. ವಿಶೇಷವೆಂದರೆ, ಈ ಕುರಿತಂತೆ ಇನ್ನೇನು ಸ್ಕಾಟ್‌ಲೆಂಡ್‌ನ‌ ಗ್ಲ್ಯಾಸ್ಗೋದಲ್ಲಿ ಆರಂಭವಾಗಲಿರುವ ಸಿಒಪಿ26 ಸಮ್ಮೇಳನದಲ್ಲಿ ಚರ್ಚೆಯಾಗಲಿದೆ ಎಂಬುದು ಸಮಾಧಾನಕರ ವಿಚಾರ.

ಇದನ್ನೂ ಓದಿ:5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ 5 ಬ್ಯಾಲಿಸ್ಟಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

ಕಳೆದ ವರ್ಷ ಭಾರತ ಮತ್ತು ಬಾಂಗ್ಲಾದೇಶವನ್ನು ಹೆಚ್ಚಾಗಿ ಕಾಡಿದ್ದ ಆಂಫಾನ್‌ ಚಂಡಮಾರುತದಿಂದಾಗಿ ಲಕ್ಷಾಂತರ ಮಂದಿ ನಿರ್ವಸತಿಗರಾಗಿದ್ದರು. ಅಂದರೆ, ಭಾರತದಲ್ಲಿ 2.4 ದಶಲಕ್ಷ ಮತ್ತು ಬಾಂಗ್ಲಾದಲ್ಲಿ 2.5 ದಶಲಕ್ಷ ಮಂದಿ ಮನೆ-ಮಠ ಕಳೆದುಕೊಂಡು ಅಕ್ಷರಶಃ ಬೀದಿಗೆ ಬಿದ್ದಿದ್ದರು.

ಇದರ ಜತೆಗೆ ಹಿಂದೂಮಹಾಸಾಗರದಲ್ಲಿಯೂ ಬಿಸಿ ತಾಪಮಾನ ಹೆಚ್ಚಾಗುತ್ತಿದೆ. ಅಲ್ಲದೆ, ಫೆಸಿಫಿಕ್‌ ಮತ್ತು ಆಸ್ಟಿಕ್‌ ಸಾಗರಗಳಲ್ಲೂ ಇದೇ ರೀತಿಯ ಪರಿಣಾಮಗಳು ಕಾಣಿಸಿಕೊಳ್ಳುತ್ತಿವೆ. ಈ ಸಾಗರಗಳ ಮೇಲಿನ ತಾಪಮಾನ, ಜಾಗತಿಕ ಅಂದಾಜಿಗಿಂತ ಮೂರು ಪಟ್ಟು ಹೆಚ್ಚಾಗಿದೆ. ಅದರಲ್ಲೂ ಅರಬಿ ಸಮುದ್ರದಲ್ಲಿ ತಾಪಮಾನ ಇದಕ್ಕಿಂತಲೂ ಹೆಚ್ಚಾಗಿದೆ ಎಂದು ಜಾಗತಿಕ ಹವಾಮಾನ ಸಂಸ್ಥೆಯ ವರದಿ ಎಚ್ಚರಿಕೆ ನೀಡಿದೆ.

ಇನ್ನು ಪ್ರವಾಹ ಮತ್ತು ಬರಗಾಲದಿಂದಾಗಿ ಹೆಚ್ಚಾಗಿ ಪೆಟ್ಟು ತಿಂದಿರುವುದು ಕರ್ನಾಟಕ, ಅಸ್ಸಾಂ, ಆಂಧ್ರ, ಮಹಾರಾಷ್ಟ್ರ, ಬಿಹಾರ ರಾಜ್ಯಗಳು. ಹವಾಮಾನ ತಜ್ಞರು ಹೇಳಿದಂತೆ, ಈಗ ದೇಶದ ಮುಂದೆ ಜಾಗತಿಕ ತಾಪಮಾನ ಇಳಿಕೆ ಮಾಡುವ ಸವಾಲು ಇದೆ. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ಈಗ ಕಾಡುತ್ತಿರುವ ಭಾರೀ ಮಳೆ ಅಥವಾ ಪ್ರವಾಹ, ಬರಗಾಲ ಮತ್ತೆ ಮತ್ತೆ ಕಾಣಿಸಿಕೊಳ್ಳುವ ಆತಂಕವೂ ಇದೆ. ಗ್ಲ್ಯಾಸ್ಗೋದಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಭಾರತವೊಂದೇ ಅಲ್ಲ, ಎಲ್ಲ ದೇಶಗಳೂ ಈ ನಿಟ್ಟಿನಲ್ಲಿ ಯೋಚಿಸಬೇಕಾದ ಜರೂರತ್ತು ಖಂಡಿತವಾಗಿಯೂ ಇದೆ.

ಟಾಪ್ ನ್ಯೂಸ್

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

5-uv-fusion

Summer Holidays: ರಜಾದಿನ ಹೀಗಿರಲಿ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial:ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Editorial: ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.