ಪಡುಬಿದ್ರಿ: ಜಾನುವಾರು ಅಕ್ರಮ ಸಾಗಾಟ; ಇಬ್ಬರ ಬಂಧನ

ಲಾರಿಯಲ್ಲಿತ್ತು 5 ಎಮ್ಮೆ, 3 ಕೋಣ ಹಾಗೂ 10 ಎತ್ತುಗಳು ನೀಲಾವರ ಗೋಶಾಲೆಗೆ

Team Udayavani, Oct 28, 2021, 6:23 AM IST

ಪಡುಬಿದ್ರಿ: ಜಾನುವಾರು ಅಕ್ರಮ ಸಾಗಾಟ; ಇಬ್ಬರ ಬಂಧನ

ಪಡುಬಿದ್ರಿ: ಹುಬ್ಬಳ್ಳಿಯಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಬುಧವಾರ ಬೆಳಗ್ಗೆ ಪಡುಬಿದ್ರಿಯಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ 18 ಜಾನುವಾರುಗಳನ್ನು ರಕ್ಷಿಸಲಾಗಿದೆ.

ಚಾಲಕ ಹುಬ್ಬಳ್ಳಿಯ ಕಲಂದರ್‌ (33) ಮತ್ತು ಕ್ಲೀನರ್‌ ಕಲಘಟಗಿಯ ಅಬ್ದುಲ್‌ ರೆಹಮಾನ್‌ (35) ನನ್ನು ಬಂಧಿಸಲಾಗಿದ್ದು, ಮತ್ತೋರ್ವ ಆರೋಪಿ ಆರಿಫ್‌ ಪರಾರಿಯಾಗಿದ್ದಾನೆ.

ಹೆಜಮಾಡಿ ಟೋಲ್‌ಗೇಟ್‌ ಬಳಿ ಪಡುಬಿದ್ರಿ ಎಸ್ಸೆ$ç ಅಶೋಕ್‌ ಕುಮಾರ್‌ ಅವರ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಜಾನುವಾರು ಸಹಿತ ಒಟ್ಟು 18 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಟಾಟೆ, ಈರುಳ್ಳಿ ಸಾಗಾಟವೆಂದರು…
ಹರಿಯಾಣ ನೋಂದಣಿಯ ಲಾರಿ ಹುಬ್ಬಳ್ಳಿಯಿಂದ ಬರುತ್ತಿದ್ದು, ಪೊಲೀಸರು ಹೆಜಮಾಡಿ ಟೋಲ್‌ಗೇಟ್‌ ಬಳಿ ತಡೆದು ನಿಲ್ಲಿಸಿ ಚಾಲಕನಲ್ಲಿ ವಿಚಾರಿಸಿದಾಗ ಅದರಲ್ಲಿ ಬಟಾಟೆ ಹಾಗೂ ಈರುಳ್ಳಿ ಮೂಟೆಗಳು ಇರುವುದಾಗಿ ತಿಳಿಸಿದ್ದ. ಮತ್ತೆ ಅನುಮಾನಗೊಂಡ ಪೊಲೀಸರು ಚಾಲಕನನ್ನು ವಿಚಾರಿಸಿದಾಗ ಜಾನುವಾರುಗಳು ಇರುವುದು ಪತ್ತೆಯಾಗಿದೆ. ಬಳಿಕ ಲಾರಿಯನ್ನು ಪಡುಬಿದ್ರಿ ಠಾಣೆಗೆ ತರಲಾಯಿತು.

ಬಳಲಿದ್ದ ಜಾನುವಾರುಗಳು
ಲಾರಿಯಲ್ಲಿ 5 ಎಮ್ಮೆ, 3 ಕೋಣ ಹಾಗೂ 10 ಎತ್ತುಗಳಿದ್ದು, ಅದರಲ್ಲಿ ಒಂದು ಎತ್ತು ಸಾವನ್ನಪ್ಪಿದೆ. ಸ್ಥಳೀಯ ಪಶು ವೈದ್ಯಾಧಿಕಾರಿ ಮೂಲಕ ಚಿಕಿತ್ಸೆ ಕೊಡಿಸಲಾಗಿದೆ. ಸಾವನ್ನಪ್ಪಿದ ಎತ್ತಿನ ಮರಣೋತ್ತರ ಪರೀಕ್ಷೆ ಮಾಡಿ ದಫನ ಮಾಡಲಾಯಿತು. ಘಟನೆಯ ವೇಳೆ ಲಾರಿಯಲ್ಲಿದ್ದ ಕೋಣವೊಂದು ತಪ್ಪಿಸಿಕೊಂಡು ಪರಾರಿಯಾಗಿರುವುದಾಗಿ ಸಾರ್ವಜನಿಕರು ತಿಳಿಸಿದ್ದಾರೆ.

ಇದನ್ನೂ ಓದಿ:ಸಾರಿಗೆ ನೌಕರರ ಪರ ಅನಿರ್ಧಿಷ್ಟಾವಧಿ ಧರಣಿ

ಸಂಘಟನೆ, ಸ್ಥಳೀಯರ ಸಹಕಾರ
ಪೊಲೀಸರು ವಶಪಡಿಸಿಕೊಂಡಿರುವ ಜಾನುವಾರು ಗಳನ್ನು ವಿಎಚ್‌ಪಿ, ಬಜರಂಗ ದಳ ಹಾಗೂ ಭಗವತಿ ಫ್ರೆಂಡ್ಸ್‌ನ ಕಾರ್ಯಕರ್ತರ ಸಹಾಯದೊಂದಿಗೆ ಪಡುಬಿದ್ರಿ ಮೀನು ಮಾರುಕಟ್ಟೆಯ ಬಳಿ ಟ್ರಕ್‌ನಿಂದ ಕೆಳಗಿಳಿಸಿ ಉಪಚರಿಸಲಾಗಿದ್ದು, ಚೇತರಿಸಿಕೊಂಡ ಬಳಿಕ ಅವುಗಳನ್ನು ನೀಲಾವರ ಗೋಶಾಲೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾನುವಾರು ನಿರಂತರ ಸಾಗಾಟ
ಪೊಲೀಸರು ವಶಪಡಿಸಿಕೊಂಡ ಜಾನುವಾರುಗಳ ಪೈಕಿ ನಾಲ್ಕು ಜಾನುವಾರುಗಳಲ್ಲಿ ಸಾಲ ಮಾಡಿ ಖರೀದಿಸಿದ ಗುರುತುಗಳು ಪತ್ತೆಯಾಗಿದ್ದು, ಅವುಗಳನ್ನು ಕದ್ದು ಕೇರಳಕ್ಕೆ ಸಾಗಿಸುತ್ತಿರಬಹುದೆನ್ನುವ ಶಂಕೆ ವ್ಯಕ್ತವಾಗಿದೆ. ಹರಿಯಾಣ ನೊಂದಾವಣೆ ಹೊಂದಿರುವ ಈ ಲಾರಿಯಲ್ಲಿ ಜಾನುವಾರುಗಳನ್ನು ಕಟ್ಟಲು ಸೂಕ್ತ ವ್ಯವಸ್ಥೆ ಮಾಡಲಾಗಿದ್ದು, ಇದರಲ್ಲಿ ನಿರಂತರವಾಗಿ ಜಾನುವಾರುಗಳನ್ನು ಸಾಗಾಟ ಮಾಡಲಾಗುತ್ತಿತ್ತೇ ಎನ್ನುವ ಸಂಶಯ ಮೂಡುವಂತಾಗಿದೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.