ಶಾಲೆಗೆ ಬಸ್ ಕಲ್ಪಿಸಲು ವಿದ್ಯಾರ್ಥಿಗಳ ಒತ್ತಾಯ
Team Udayavani, Oct 30, 2021, 9:46 AM IST
ಸೇಡಂ: ಕೆಲ ದಿನಗಳ ಹಿಂದಷ್ಟೇ ಸುರಿಯುವ ಮಳೆಯನ್ನು ಲೆಕ್ಕಿಸದೇ ಬಸ್ಗೆ ಅಡ್ಡಲಾಗಿ ನಿಂತು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ ಪ್ರಸಂಗ ತಾಲೂಕಿನ ಮುಧೋಳ ಗ್ರಾಮದಲ್ಲಿ ನಡೆದಿತ್ತು.
ಈಗ ಅಂತದ್ದೇ ಮತ್ತೂಂದು ಘಟನೆ ಊಡಗಿಯಲ್ಲಿ ನಡೆದಿದೆ. ತಾಲೂಕಿನ ಊಡಗಿ ಹಾಗೂ ಹಂಗನಹಳ್ಳಿ ಗ್ರಾಮಕ್ಕೆ ಶಾಲೆ-ಕಾಲೇಜು ನಡೆಯುವ ಸಮಯಕ್ಕೆ ಪಟ್ಟಣಕ್ಕೆ ಬಸ್ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಬಸ್ ತಡೆದು, ರಸ್ತೆಯಲ್ಲೇ ಕುಳಿತು ಪ್ರತಿಭಟಿಸಿದರು.
ಊಡಗಿ ಹಾಗೂ ಹಂಗನಹಳ್ಳಿ ವ್ಯಾಪ್ತಿಯಲ್ಲಿ ಪ್ರತಿನಿತ್ಯ ಸುಮಾರು 150 ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು ಪಟ್ಟಣಕ್ಕೆ ಆಗಮಿಸುತ್ತಾರೆ. ಆದರೆ ಈ ಭಾಗದಲ್ಲಿ ಕೇವಲ ಒಂದು ಬಸ್ ಕಲ್ಪಿಸಲಾಗಿದೆ. ಕೂಡಲೇ ಇನ್ನೊಂದು ಬಸ್ ಕಲ್ಪಿಸಿ, ಸಮಯಕ್ಕೆ ಸರಿಯಾಗಿ ಬಿಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ