ಇದು ಕರಾಳ ದಿನ: ಪುನೀತ್ ನಿಧನಕ್ಕೆ ಕಂಬನಿ ಮಿಡಿದ ಅಮಿತಾಬ್ ಬಚ್ಚನ್
Team Udayavani, Oct 30, 2021, 12:24 PM IST
ಮುಂಬೈ: ನಟ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನ ಭಾರತೀಯ ಚಿತ್ರರಂಗವನ್ನು ಆಘಾತಕ್ಕೆ ದೂಡಿದೆ. ಕನ್ನಡದ ಪವರ್ ಸ್ಟಾರ್ ನಿಧನಕ್ಕೆ ಅನ್ಯ ಭಾಷೆಯ ನಟರೂ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಬಾಲಿವುಡ್ ದಿಗ್ಗಜ ಅಮಿತಾಭ್ ಬಚ್ಚನ್ ಅವರು ‘ಇದು ಕರಾಳ ದಿನ’ ಎಂದಿದ್ದಾರೆ.
ಪುನೀತ್ ಸಾವಿಗೆ ಸಂತಾಪ ಸೂಚಿಸಿ ಬಿಗ್ ಬಿ ತಮ್ಮ ಬ್ಲಾಗ್ ನಲ್ಲಿ ಬರೆದುಕೊಂಡಿದ್ದಾರೆ. “ಕನ್ನಡ ಚಿತ್ರರಂಗದ ದಿಗ್ಗಜ ರಾಜ್ ಕುಮಾರ್ ಅವರ ಕಿರಿಯ ಪುತ್ರ, ನಟ ಪುನೀತ್ ರಾಜ್ ಕುಮಾರ್ ಅವರು ನಿಧನರಾದರು. ಅವರಿಗೆ ಕೇವಲ 46 ವರ್ಷಗಳಾಗಿತ್ತು! ಇದು ನಮಗೆಲ್ಲರಿಗೂ ತೀವ್ರ ಆಘಾತವನ್ನುಂಟು ಮಾಡಿದೆ ದಿವಂಗತ ರಾಜ್ ಕುಮಾರ್ ಅವರ ಕುಟುಂಬ ನಮಗೆ ಯಾವತ್ತೂ ತುಂಬಾ ಹತ್ತಿರವಾಗಿದ್ದರು ಎಂದು ಬಿಗ್ ಬಿ ಬರೆದಿದ್ದಾರೆ.
ಇದನ್ನೂ ಓದಿ:ನನಸಾಗದ ಪುನೀತ್ ಚಿತ್ರೀಕರಣದ ಕನಸು!
ನಟ ಪುನೀತ್ ರಾಜ್ ಕುಮಾರ್ ಸಾವಿಗೆ ಅಮಿತಾಭ್ ಬಚ್ಚನ್ ಅವರು ಟ್ವಿಟ್ಟರ್ನಲ್ಲಿಯೂ ಸಂತಾಪ ಸೂಚಿಸಿದ್ದಾರೆ. “ಕರಾಳ ಮತ್ತು ಪ್ರಾರ್ಥನೆಯ ದಿನ .. ಕುಟುಂಬಕ್ಕೆ ಹತ್ತಿರವಿರುವ ಇಬ್ಬರು ಇಂದು ನಿಧನರಾದರು .. ಇದು ತುಂಬಾ ಕತ್ತಲೆಯಾಗಿದೆ” ಎಂದಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಶುಕ್ರವಾರ ಹೃದಯಾಘಾತದಿಂದ ನಿಧನ ಹೊಂದಿದರು. ಬಾಲನಟನಾಗಿ ಕನ್ನಡ ಚಿತ್ರಂಗಕ್ಕೆ ಕಾಲಿಟ್ಟಿದ್ದ ಅಣ್ಣಾವ್ರ ಕಿರಿಯ ಪುತ್ರ ಪುನೀತ್ ರಾಜ್ ಕುಮಾರ್ ನಂತರ ಅಪ್ಪು ಚಿತ್ರದ ಮೂಲಕ ನಾಯಕನಟನಾಗಿ ಎಂಟ್ರಿ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ದರ್ಶನ್ ʼಡೆವಿಲ್ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್ ಪೋಸ್ಟರ್ ಔಟ್
Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ
The Judgement; ಭವಿಷ್ಯ ನಿರ್ಧರಿಸುವ ಜಡ್ಜ್ಮೆಂಟ್: ರವಿಚಂದ್ರನ್
ಯಾರಿಗೆ ಹೇಳೋಣ ನಮ್ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್ಗಳು ತಾತ್ಕಾಲಿಕ ಸ್ಥಗಿತ
MAX; ಅಭಿಮಾನಿಗಳಿಗೆ ಸುದೀಪ್ ಅಪ್ಡೇಟ್
MUST WATCH
ಹೊಸ ಸೇರ್ಪಡೆ
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Sandalwood: ದರ್ಶನ್ ʼಡೆವಿಲ್ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್ ಪೋಸ್ಟರ್ ಔಟ್
Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ
Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ